ಜಾರ್ಖಂಡ್ ನಲ್ಲಿ ಹನುಮಾನ್ ವಿಗ್ರಹ ಧ್ವಂಸ ನಂತರ ಉದ್ವಿಗ್ನ; ಇಂಟರ್ನೆಟ್ ಸೇವೆ ಸ್ಥಗಿತ
Team Udayavani, Apr 3, 2023, 7:15 PM IST
ರಾಂಚಿ : ಜಾರ್ಖಂಡ್ನ ಸಾಹಿಬ್ಗಂಜ್ನಲ್ಲಿ ಸೋಮವಾರ ಮುಂಜಾನೆ ಹನುಮಾನ್ ವಿಗ್ರಹವನ್ನು ಧ್ವಂಸಗೊಳಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಅಧಿಕಾರಿಯನ್ನು ಉಲ್ಲೇಖಿಸಿ ವರದಿ ಮಾಡಿದೆ.
ವಿಗ್ರಹವನ್ನು ರಾಂಚಿಯಿಂದ 425 ಕಿಲೋಮೀಟರ್ ದೂರದಲ್ಲಿರುವ ಸಾಹಿಬ್ಗಂಜ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮರದ ಕೆಳಗೆ ದೇವಾಲಯದಲ್ಲಿ ಇರಿಸಲಾಗಿದೆ ಎಂದು ಸಾಹಿಬ್ಗಂಜ್ ಜಿಲ್ಲಾಧಿಕಾರಿ ರಾಮನಿವಾಸ್ ಯಾದವ್ ಹೇಳಿದ್ದಾರೆ. ಬೆಳಗ್ಗೆ ವಿಷಯ ತಿಳಿಯುತ್ತಿದ್ದಂತೆಯೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಹಾಗೂ ಸ್ಥಳೀಯರು ದೇವಸ್ಥಾನದ ಬಳಿ ಜಮಾಯಿಸಿ ಸುಮಾರು ಒಂದು ಗಂಟೆ ಕಾಲ ರಸ್ತೆ ತಡೆ ನಡೆಸಿ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದರು.
ಗುಂಪನ್ನು ಚದುರಿಸಲು ಪೊಲೀಸರು ಲಾಠಿಗಳನ್ನು ಬಳಸಿದರು. ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಆತನನ್ನು ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ. ಪಟ್ಟಣದ ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಮುನ್ನೆಚ್ಚರಿಕೆಯಾಗಿ, ನಾವು ಸೋಮವಾರ ಬೆಳಿಗ್ಗೆ 9 ರಿಂದ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಈ ಪ್ರದೇಶದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸಾಹಿಬ್ಗಂಜ್ನ ಪೊಲೀಸ್ ವರಿಷ್ಠಾಧಿಕಾರಿ ಅನುರಂಜನ್ ಕಿಸ್ಪೊಟ್ಟಾ ಪಿಟಿಐಗೆ ತಿಳಿಸಿದ್ದಾರೆ.
ವಿಗ್ರಹವನ್ನು ದುರಸ್ತಿಗೊಳಿಸಿ ಅದರ ಮೂಲ ಸ್ಥಾನಕ್ಕೆ ಮರಳಿಸಲಾಗಿದೆ. ಶನಿವಾರ ಸಾಹಿಬ್ಗಂಜ್ ಪಟ್ಟಣದಲ್ಲಿ ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದ್ದು, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.ಜಾರ್ಖಂಡ್ನಲ್ಲಿ ‘ಚೈತಿ ದುರ್ಗಾ’ ಹಬ್ಬದ ಸಮಯದಲ್ಲಿ ದುರ್ಗಾ ದೇವಿಯನ್ನು ಪೂಜಿಸಲಾಗುತ್ತದೆ, ಇದು ವರ್ಷದ ಈ ಸಮಯದಲ್ಲಿ ನಡೆಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ