ಹತ್ತು ಸಾವಿರ ಯುವಕರಿಗೆ ಉದ್ಯೋಗ ಪತ್ರ: ಡಾ| ಸಿ.ಎನ್‌.ಅಶ್ವತ್ಥನಾರಾಯಣ

ಆರು ಇಲಾಖೆಗಳಲ್ಲಿ ಹಲವು ಉಪಕ್ರಮ

Team Udayavani, Dec 25, 2022, 6:40 AM IST

ಹತ್ತು ಸಾವಿರ ಯುವಕರಿಗೆ ಉದ್ಯೋಗ ಪತ್ರ: ಡಾ| ಸಿ.ಎನ್‌.ಅಶ್ವತ್ಥನಾರಾಯಣ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ರವಿವಾರ “ಸುಶಾಸನ ದಿನ’ವನ್ನು ಆಚರಿಸುವ ಮೂಲಕ ಉನ್ನತ ಶಿಕ್ಷಣ, ಕೌಶಲಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ, ವಿದ್ಯುನ್ಮಾನ, ಐಟಿ-ಬಿಟಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ ವತಿಯಿಂದ ಹತ್ತು ಸಾವಿರ ಯುವಕರಿಗೆ ಉದ್ಯೋಗ ಪತ್ರ ವಿತರಣೆಯಾಗಲಿದೆ.

ಈ ಇಲಾಖೆಗಳ ವತಿಯಿಂದ ಡಿಸೆಂಬರ್‌ ಮಾಸಾದ್ಯಂತ ಸುಶಾಸನ ದಿನ ಆಚರಿಸಿ ಹಲವು ಉಪಯುಕ್ತ ಉಪಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಉನ್ನತ ಶಿಕ್ಷಣ, ಐಟಿ- ಬಿಟಿ, ಕೌಶಲಾಭಿವೃದ್ಧಿ ಇಲಾಖೆಗಳಲ್ಲಿ ಉತ್ತಮ ಆಡಳಿತಕ್ಕೆ ಭದ್ರ ಬುನಾದಿ ಹಾಕಲು “ಸುಶಾಸನ ಮಾಸ: ಸುಂದರ ಸಮಾಜದ ಸಾತ್ವಿಕ ತುಡಿತ’ ಘೋಷವಾಕ್ಯದಡಿ ನಾವು ಡಿ.1ರಂದು ಚಾಲನೆ ನೀಡಿದೆವು ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸುಶಾಸನ ಅಥವಾ ಗುಡ್‌ ಗವರ್ನೆನ್ಸ್‌ ಒಂದು ದಿನಕ್ಕೆ ಸೀಮಿತವಾದ ಔಪಚಾರಿಕ ಆಚರಣೆಯಾಗಿ ಉಳಿಯಬಾರದು. ಪ್ರಧಾನಿ ನರೇಂದ್ರ ಮೋದಿಯವರು ಕೂಡ “ಗರಿಷ್ಠ ಆಡಳಿತ, ಕನಿಷ್ಠ ಸರಕಾರ’ ಎನ್ನುವುದನ್ನೇ ತಮ್ಮ ಚಿಂತನೆಯ ಮೂಲದ್ರವ್ಯವನ್ನಾಗಿ ಮಾಡಿಕೊಂಡಿದ್ದಾರೆ. ವಿಶ್ವವಿದ್ಯಾ ನಿಲಯಗಳಿಗೆ ಸಂಬಂಧಪಟ್ಟ ಪ್ರತಿಯೊಂದು ಮಾಹಿತಿಯನ್ನು ಸಹ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸುವ ಕೆಲಸ ನಾವು “ಸುಶಾಸನ ಮಾಸ’ ಆಚರಣೆಯ ಅಂಗವಾಗಿ ಕಡ್ಡಾಯ ಗೊಳಿಸಲಾಗಿದ್ದು, ಇದು ಡಿ.10ರಿಂದ ಜಾರಿಗೆ ಬಂದಿದೆ ಎಂದರು.

ಅದೇ ರೀತಿ ಉದ್ಯಮಕ್ಕೆ ಬಲ ತುಂಬಲು ಕೌಶಲಕ್ಕೆ ಒತ್ತು ನೀಡಲು “ಸ್ಕಿಲ್‌ ಪೋರ್ಟಲ್‌’ಗೆ ಆಮೂಲಾಗ್ರವಾಗಿ ಹೊಸ ರೂಪ ಕೊಡಲಾಯಿತು. ಬೆಂಗಳೂರಿನಲ್ಲಿ ಉತ್ಕೃಷ್ಟತಾ ಕೇಂದ್ರ ಮತ್ತು ಹುಬ್ಬಳ್ಳಿಯಲ್ಲಿ ಬಹುಕೌಶಲ್ಯ ಕೇಂದ್ರ ಆರಂಭಿಸಲಾಯಿತು.

ಮಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ-ಬೆಳಗಾವಿ ಕ್ಲಸ್ಟರ್‌ ಗಳಲ್ಲಿ ಎಚ್‌ಎನ್‌ಐ ಕಾರ್ಯಾಗಾರಗಳು, ನವೋದ್ಯಮ ಗಳ ಬಲವರ್ಧನೆಗೆ ‘ಎನ್‌ರಿಚ್‌ 2.0’ ಉಪಕ್ರಮ ಯಶಸ್ವಿಯಾಗಿ ನಡೆಸಲಾಯಿತು. ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಮಿತಿಯ ವತಿಯಿಂದ ‘ಪುನೀತ್‌’ ಉಪಗ್ರಹ ಯೋಜನೆಯ ಭಾಗವಾಗಿ ಆನ್‌ಲೈನ್‌ ರಸಪ್ರಶ್ನೆ, ಚಿತ್ರಕಲೆ, ಪ್ರಬಂಧ, ಪೋಸ್ಟರ್‌ ಸ್ಪರ್ಧೆಗಳನ್ನು ಹೈಸ್ಕೂಲ್‌ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ನಡೆಸಲಾಯಿತು ಎಂದು ಹೇಳಿದ್ದಾರೆ.

ಕೆಎಸ್‌ಡಿಸಿಯಿಂದ ಪಾರಂಪರಿಕ ಕೌಶಲಗಳ ಬಲವರ್ಧನೆ, ಸಶಕ್ತೀಕರಣ, ಎನ್‌ಆರ್‌ಎಲ್‌ಎಂ ಅಡಿಯಲ್ಲಿ ಮಾಹಿತಿ ಮತ್ತು ಹಣಕಾಸು ನಿರ್ವಹಣೆಗೆ ಲೋಕೋಸ್‌ ತಂತ್ರಾಂಶ, ಲಿಂಗಾಧಾರಿತ ತಾರತಮ್ಯ ಮತ್ತು ಮಹಿಳಾ ದೌರ್ಜನ್ಯ ಕುರಿತು ಅರಿವು ಮೂಡಿಸಲು ರಾಜ್ಯದ ಎಲ್ಲ 227 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಾರ್ಯಕ್ರಮ. ಪ್ರಧಾನಮಂತ್ರಿಗಳ ಆಹಾರ ಕಿರು ಸಂಸ್ಕರಣ ಯೋಜನೆಯಡಿ 2,623 ಫ‌ಲಾನುಭವಿಗಳಿಗೆ 10.13 ಕೋಟಿ ರೂ. ಸಹಾಯಧನ ವಿತರಣೆ, ಕ್ಷೀರ ಸಂಜೀವಿನಿ ಯೋಜನೆಗಳಿಗೆ ಚಾಲನೆ, ಮುದ್ರಾ ಸಾಲ ಪಡೆಯುವ ಬಗ್ಗೆ ವಿಡಿಯೋ ಸಂವಾದ, ಕೃಷಿ ಸಖೀಯರಿಗೆ ತರಬೇಟಿ ಎಲ್ಲವನ್ನೂ ವ್ಯವಸ್ಥಿತಿವಾಗಿ ನಡೆಸಲಾಗಿದೆ ಎಂದು ವಿವರಿಸಿದ್ದಾರೆ.

ಜಗತ್ತಿಗೆ ಭಾರತದ ಶಕ್ತಿ
ತೋರಿಸಿಕೊಟ್ಟವರು ವಾಜಪೇಯಿ
ಸ್ವತಂತ್ರ ಭಾರತದ ಇತಿಹಾಸದಲ್ಲಿ ದಕ್ಷ, ಪಾರದರ್ಶಕ ಮತ್ತು ನಿಷ್ಕಳಂಕ ಆಡಳಿತದ ಮೂಲಕ ದೇಶವನ್ನು ಸಮರ್ಥವಾಗಿ ಮುನ್ನಡೆಸಬಲ್ಲವು ಎಂಬುದನ್ನು ತೋರಿಸಿಕೊಟ್ಟವರು ಅಟಲ್‌ ಬಿಹಾರಿ ವಾಜಪೇಯಿ. ಎನ್‌ಡಿಎ ಮೈತ್ರಿಕೂಟವನ್ನು ಐದು ವರ್ಷಗಳ ಕಾಲ ತಮ್ಮ ರಾಜಕೀಯ ದಾರ್ಶನಿಕತೆ ಮತ್ತು ಮೇರು ವ್ಯಕ್ತಿತ್ವ ಬಲದಿಂದ ಮುನ್ನಡೆಸಿದವರು. ಅಣ್ವಸ್ತ್ರ ಪರೀಕ್ಷೆ ನಡೆಸುವ ಮೂಲಕ ಇಡೀ ಜಗತ್ತಿಗೆ ಭಾರತದ ಶಕ್ತಿ ತೋರಿಸಿಕೊಟ್ಟವರು. ಅವರ ಹುಟ್ಟುಹಬ್ಬವನ್ನು ಸುಶಾಸನ ದಿನವನ್ನಾಗಿ ಆಚರಿಸುತ್ತಿರುವುದು ಸೂಕ್ತ ಎಂದು ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.