ಲಾಕ್ ಡೌನ್ ಸಂದರ್ಭ ರಾಜ್ಯದಲ್ಲಿ ಕೃಷಿ ಸಚಿವರ ಕಾರ್ಯ ಶ್ಲಾಘನೀಯ : ಜೆ.ಪಿ. ನಡ್ಡಾ
Team Udayavani, Sep 9, 2020, 4:29 PM IST
ನವದೆಹಲಿ :ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯ ಕೃಷಿ ಸಚಿವರು ನಡೆಸಿದ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹರ್ಷ ವ್ಯಕ್ತಪಡಿಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಭೇಟಿ ಮಾಡಿದರು.
ಭೇಟಿ ವೇಳೆ, ಬಿ.ಸಿ. ಪಾಟೀಲರು ಕೃಷಿ ಸಚಿವರಾದ ಈ ಆರು ತಿಂಗಳಿನಲ್ಲಿ ಇಲಾಖೆಯಲ್ಲಿ ಮಾಡಿದ ಪ್ರಗತಿಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ರೈತರಿಗೆ ಮತ್ತು ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಅನ್ನದಾತರಿಗೆ ಬೆನ್ನೆಲುಬಾಗಿ ನಿಂತ ಕೃಷಿ ಸಚಿವರ ಸೇವೆಯನ್ನು ಜೆ.ಪಿ.ನಡ್ಡಾ ಶ್ಲಾಘಿಸಿದರು.
ರೈತ ಬೆಳೆ ಸಮೀಕ್ಷೆ ಆ್ಯಪ್, ಅಗ್ರಿ ಸ್ಟಾರ್ಟಪ್ ಸೇರಿದಂತೆ ಹಲವಾರು ಪ್ರಗತಿಪರ ಯೋಜನೆಗಳನ್ನು ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೊಳಿಸಿ ಮೆಚ್ಚುಗೆ ವ್ಯಕ್ತವಾಗಿದ್ದರಿಂದ ದೇಶದ ಇತರೆ ರಾಜ್ಯಗಳಲ್ಲಿಯೂ ಸಹ ಅಳವಡಿಕೆಗೆ ಚಿಂತನೆ ನಡೆಸಲಾಗಿರುವ ಬಗ್ಗೆಯೂ ರಾಷ್ಟ್ರೀಯ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ರ್ನಾಟಕದ ರಾಜಕೀಯ ವಿದ್ಯಮಾನವನ್ನು ಹಂಚಿಕೊಂಡ ಅಧ್ಯಕ್ಷರು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವ ಬಗ್ಗೆಯೂ ಬಿ.ಸಿ.ಪಾಟೀಲರೊಂದಿಗೆ ಚರ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ