ಜೂ. ನ್ಯಾಶನಲ್‌ ಆ್ಯತ್ಲೆಟಿಕ್ಸ್‌ : ಉಡುಪಿಯ ಡ್ರಮ್ಮರ್‌ ಅಭಿನ್‌ ಸ್ವರ್ಣ ಸಂಭ್ರಮ


Team Udayavani, Feb 12, 2021, 12:30 AM IST

ಜೂ. ನ್ಯಾಶನಲ್‌ ಆ್ಯತ್ಲೆಟಿಕ್ಸ್‌ : ಉಡುಪಿಯ ಡ್ರಮ್ಮರ್‌ ಅಭಿನ್‌ ಸ್ವರ್ಣ ಸಂಭ್ರಮ

ಉಡುಪಿ: ಅಸ್ಸಾಮ್‌ನ ಗುವಾಹಟಿಯಲ್ಲಿ ನಡೆದ ಅಂಡರ್‌-20 ನ್ಯಾಶನಲ್‌ ಆ್ಯತ್ಲೆಟಿಕ್ಸ್‌ ಕೂಟದ 200 ಮೀ. ರೇಸ್‌ನಲ್ಲಿ ಉಡುಪಿಯ ಡ್ರಮ್ಮರ್‌, ಯುವ ಓಟಗಾರ ಅಭಿನ್‌ ಭಾಸ್ಕರ್‌ ದೇವಾಡಿಗ ಚಿನ್ನದ ಪದಕ ಗೆದ್ದು ಕ್ರೀಡಾಪ್ರೇಮಿಗಳಲ್ಲಿ ಸಂಭ್ರಮ ಮೂಡಿಸಿದ್ದಾರೆ. ಅವರು ಈ ದೂರವನ್ನು 21.34 ಸೆಕೆಂಡ್ಸ್‌ನಲ್ಲಿ ತಲುಪಿದರು.

ಚಿನ್ನದ ನಿರೀಕ್ಷೆ ಇತ್ತು
ಈ ಸಂದರ್ಭದಲ್ಲಿ “ಉದಯವಾಣಿ’ಯೊಂದಿಗೆ ಮಾತಾಡಿದ ಅಭಿನ್‌, “ಭೋಪಾಲ್‌ನ ಜೂನಿಯರ್‌ ಫೆಡರೇಶನ್‌ ಕೂಟದಲ್ಲಿ ಚಿನ್ನ ಹಾಗೂ ಬೆಳ್ಳಿ ಜಯಿಸಿದ್ದೆ. ಹೀಗಾಗಿ ಗುವಾಹಾಟಿಯಲ್ಲಿ ಚಿನ್ನದ ನಿರೀಕ್ಷೆ ಇತ್ತು. ಆದರೆ ಚಿನ್ನದ ಹೊರತಾಗಿಯೂ ಈ ಗೆಲುವು ಅಷ್ಟೇನೂ ಸಮಾಧಾನ ಕೊಟ್ಟಿಲ್ಲ. ಇನ್ನೂ ಬೇಗನೇ ಓಟವನ್ನು ಪೂರೈಸುವ ಗುರಿ ನನ್ನದಾಗಿತ್ತು’ ಎಂದರು.

ನೈರೋಬಿಗೆ ತೇರ್ಗಡೆ; ಆದರೆ…
ಗುವಾಹಟಿ ಸಾಧನೆಯಿಂದ ಕೀನ್ಯಾದ ನೈರೋಬಿಯಲ್ಲಿ ನಡೆಯಲಿರುವ ಅಂಡರ್‌-20 ವಿಶ್ವ ಕೂಟದಲ್ಲಿ ಪಾಲ್ಗೊಳ್ಳುವ ಅರ್ಹತಾ ಮಾನದಂಡದಲ್ಲಿ (21.38 ಸೆ.)

ಅಭಿನ್‌ ತೇರ್ಗಡೆಯಾಗಿದ್ದಾರೆ. ಆದರೆ ಈ ಕೂಟ ಜೂನ್‌ ತಿಂಗಳ ಒಳಗೆ ನಡೆದರಷ್ಟೇ ಅಭಿನ್‌ ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ. ಇಲ್ಲವಾದರೆ ಅವರ ವಯಸ್ಸು ಇಪ್ಪತ್ತರ ಗಡಿ ದಾಟುತ್ತದೆ.

ಇದನ್ನೂ ಓದಿ:ಪಾರ್ಕಿಂಗ್‌ ಜಾಗ ಅತಿಕ್ರಮಿಸಿದರೆ ಟ್ರೇಡ್‌ ಲೈಸನ್ಸ್‌ ರದ್ದು : ಜಿಲ್ಲಾಧಿಕಾರಿ ಸೂಚನೆ

“ಚೀನದಲ್ಲಿ ನಡೆಯಲಿರುವ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್‌ನಲ್ಲಿ ಭಾಗವಹಿಸುವುದು ನನ್ನ ಗುರಿ. ಇದಕ್ಕಾಗಿ ಭುವನೇಶ್ವರದಲ್ಲಿ ಟ್ರಯಲ್ಸ್‌ ನಡೆಯಲಿದೆ’ ಎಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಸೆಕೆಂಡ್‌ ಬಿ.ಕಾಂ ಓದುತ್ತಿರುವ ಅಭಿನ್‌ ಹೇಳಿದರು. ಕೋಚ್‌ ಜಾಹೀರ್‌ ಅಬ್ಟಾಸ್‌ ಅವರ ಮಾರ್ಗದರ್ಶನ ಅಭಿನ್‌ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

“ಕ್ರೀಡಾ ಪ್ರತಿಭೆಗಳನ್ನು ಗುರುತಿಸುವವರು ಬೇಕು’
“ನಮ್ಮಂಥ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹಿಸುವವರು ಬೇಕು’ ಎಂದು ಅಭಿನ್‌ ಸಂದರ್ಶನದ ವೇಳೆ ಹೇಳಿದರು.
ಆಟೋಮೊಬೈಲ್ಸ್‌ ನಡೆಸುತ್ತಿರುವ ತಂದೆ ಭಾಸ್ಕರ ದೇವಾಡಿಗ ಅವರೇ ಆರ್ಥಿಕ ಬೆನ್ನೆಲುಬಾಗಿ ನಿಂತಿದ್ದಾರೆ. ಉಳಿದಂತೆ ಬಿಡುವಿನ ವೇಳೆ ಸಂಗೀತ ಕಾರ್ಯಕ್ರಮಗಳಲ್ಲಿ ಡ್ರಮ್ಸ್‌ ಬಾರಿಸುವ ಮೂಲಕ ಒಟ್ಟುಗೂಡಿಸಿದ ಹಣವನ್ನು ಅಭಿನ್‌ ತಮ್ಮ ಕ್ರೀಡಾ ಚಟುವಟಿಕೆಗೆ ಬಳಸಿಕೊಳ್ಳುತ್ತಿದ್ದಾರೆ.

ಸಾಮಾನ್ಯವಾಗಿ ಆ್ಯತ್ಲೆಟಿಕ್ಸ್‌ ವಿಜೇತರಿಗೆ ಪದಕ ಹೊರತುಪಡಿಸಿದರೆ ನಗದು ಮೊತ್ತ ನೀಡಲಾಗುವುದಿಲ್ಲ. ಕ್ರೀಡಾ ಸ್ಕಾಲರ್‌ಶಿಪ್‌ ಲಭಿಸಿದರೆ ಅದು ಅವರ ಅದೃಷ್ಟ!

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.