ನ್ಯಾಯ,ಸತ್ಯ, ಅಭಿವೃದ್ಧಿಯೇ ಬಿಜೆಪಿಯ ಧರ್ಮ: ಜೆ.ಪಿ.ನಡ್ಡಾ
Team Udayavani, Nov 25, 2021, 3:51 PM IST
ಪಣಜಿ: ‘ನ್ಯಾಯ,ಸತ್ಯ, ಅಭಿವೃದ್ಧಿಯೇ ಬಿಜೆಪಿಯ ಧರ್ಮ, ಅದಕ್ಕಾಗಿ ಬಿಜೆಪಿಯನ್ನು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತನ್ನಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಗುರುವಾರ ಗೋವಾ ಮತದಾರರಲ್ಲಿ ಮನವಿ ಮಾಡಿದ್ದಾರೆ.
ವಿಧಾಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯು ಸಾಖಳಿ ಕ್ಷೇತ್ರದ ಅಮೋಣಾದಿಂದ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದ ನಡ್ಡಾ ಅವರು “ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸಬ್ ಕಾ ವಿಶ್ವಾಸ್ ” ಎಂಬುದು ಬಿಜೆಪಿಯ ಧ್ಯೇಯವಾಕ್ಯವಾಗಿದೆ. ಇದರಿಂದಾಗಿ ಅಧರ್ಮದ ಶಕ್ತಿಗಳನ್ನು ಧರ್ಮದ ಹಾದಿಗೆ ತರಬೇಕು ಎಂದು ಕರೆ ನೀಡಿದರು.
ಗೋವಾ ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ದೇಶದ ಅಭಿವೃದ್ಧಿಯಲ್ಲಿ ಗೋವಾ ಗಣನೀಯ ಕೊಡುಗೆ ನೀಡಬೇಕಾದರೆ ಮತ್ತೊಮ್ಮೆ ಗೋವಾದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು. ಬಿಜೆಪಿ ಯಾವಾಗಲೂ ದೇವರು,ದೇಶ,ಧರ್ಮಕ್ಕೆ ಆದ್ಯತೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಪ್ರಗತಿಯತ್ತ ಸಾಗುತ್ತಿದೆ ಎಂದರು.
ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾತನಾಡಿ, ಗೋವಾದಲ್ಲಿ ಬಿಜೆಪಿಯು ಚುನಾವಣಾ ಪ್ರಚಾರ ಕಾರ್ಯವನ್ನು ಸಾಖಳಿಂ ಕ್ಷೇತ್ರದಿಂದ ಆರಂಭಿಸುತ್ತಿರುವುದು ಬಿಜೆಪಿ ಕಾರ್ಯಕರ್ತರಿಗೆ ಸಂತಸ ತಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯ ಹಾಗೂ ಕಾರ್ಯಕರ್ತರ ಪರಿಶೃಮದ ಬಲದಿಂದ ಗೋವಾದಲ್ಲಿ ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ. ಗೋವಾದಲ್ಲಿ ಬಿಜೆಪಿ 22 ಕ್ಕೂ ಹೆಚ್ಚು ಮತ ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ, ಗೋವಾ ಬಿಜೆಪಿ ಪ್ರಭಾರಿ ಸಿ.ಟಿ.ರವಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ವಿಶೇಷ ಪೂಜೆ
ನಡ್ಡಾ ರವರು ಪಣಜಿಯ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ, ಪಣಜಿ ಶಾಸಕ ಬಾಬೂಶ್ ಮೊನ್ಸೆರಾತ್, ಉತ್ಪಲ್ ಪರೀಕರ್, ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ