4 ಜನರನ್ನು ಕೊಂದ ಹುಲಿಯನ್ನು ಕೊಲ್ಲಿ ಇಲ್ಲವೇ ನಮಗೆ ಅನುಮತಿ ಕೊಡಿ : ಸದನದಲ್ಲಿ ಬೋಪಯ್ಯ
ಕೊಡಗಿನಲ್ಲಿ ಹುಲಿ ಹಾವಳಿಯಿಂದ ಜನತೆ ಆತಂಕ
Team Udayavani, Mar 9, 2021, 9:10 PM IST
ವಿಧಾನಸಭೆ: ಕೊಡಗಿನಲ್ಲಿ ಹುಲಿ ಹಾವಳಿಯಿಂದ ಜನತೆ ಆತಂಕಗೊಂಡಿದ್ದು ಅರಣ್ಯ ಇಲಾಖೆ ಹುಲಿ ಕೊಲ್ಲಲಿ ಇಲ್ಲವೇ ನಮಗೇ ಅನುಮತಿ ಕೊಡಲಿ ಎಂದು ಬಿಜೆಪಿಯ ಕೆ.ಜೆ.ಬೋಪಯ್ಯ ಒತ್ತಾಯಿಸಿದರು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ವಿರಾಜಪೇಟೆ ಸುತ್ತಮುತ್ತಲ ಹುಲಿ ಹಾವಳಿಯಿಂದ ನಾಲ್ವರು ಮೃತಪಟ್ಟಿದ್ದಾರೆ. 25 ಹಸುಗಳನ್ನು ಕೊಂದಿದೆ. ಜನ ಹೊರಗೆ ಬರಲು ಆತಂಕಪಡುವಂತಾಗಿ ಶಾಸಕರು ರಾಜೀನಾಮೆ ನೀಡಬೇಕು ಎಂದು ಧರಣಿ ಮಾಡುತ್ತಿದ್ದಾರೆ. ಸರ್ಕಾರವು ಹುಲಿ ಕೊಲ್ಲಲು ಆದೇಶ ಮಾಡಿದೆ, ಆನೆಗಳ ಮೇಲೆ ಹೋಗಿ ಹುಲಿ ಕೊಲ್ಲುವುದು ಆಗದ ಮಾತು. ನಮಗೆ ವಹಿಸಿದರೆ ಅದನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದರು.
ನಮ್ಮ ಕಡೆ ಮೊದಲು ಹುಲಿ ಮದುವೆ ಎಂಬ ಪದ್ಧತಿಯಿತ್ತು, ಹಾಗೆಂದರೇನು ಎಂಬುದು ಆಮೇಲೆ ಹೇಳುತ್ತೇನೆ ಎಂದು ಹೇಳಿದರು. ಅಪ್ಪಚ್ಚು ರಂಜನ್ ಸಹ ಧ್ವನಿಗೂಡಿಸಿದರು.
ಇದನ್ನೂ ಓದಿ :ಹಳಿ ತಪ್ಪಿದ ಹೌರಾ – ಮುಂಬೈ ಗೀತಾಂಜಲಿ ಎಕ್ಸ್ಪ್ರಸ್ ರೈಲು
ಅರಣ್ಯ ಸಚಿವ ಅರವಿಂದ ಲಿಂಬಾವಳಿ ಮಾತನಾಡಿ, ಹೆಣ್ಣು ಹುಲಿ ಒಂದನ್ನು ಹಿಡಿಯಲಾಗಿದೆ. ಇದೀಗ ಗಂಡು ಹುಲಿಯ ಹಾವಳಿಯಿಂದ ಸಮಸ್ಯೆಯಾಗಿದೆ. ಸರ್ಕಾರವು ಹುಲಿ ಕೊಲ್ಲಲು ಆದೇಶ ಮಾಡಿದೆ. ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಹುಲಿ ದಾಳಿಯಿಂದ ಮೃತಪಟ್ಟ ಹಸುಗೆ 10 ಸಾವಿರ ರೂ. ಮಾತ್ರ ಪರಿಹಾರ ನೀಡಲಾಗುತ್ತಿದ್ದು ಆ ಮೊತ್ತ 40 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!