ಕದ್ರಿ ಗೋಪಾಲನಾಥ್ ಪುಣ್ಯಸ್ಮರಣೆ ; ಪತ್ನಿ ಆರೋಗ್ಯ ಏರುಪೇರು; ಡಿಸಿಯಿಂದಲೇ ಚಿಕಿತ್ಸೆ
Team Udayavani, Dec 6, 2021, 8:55 PM IST
ಬಂಟ್ವಾಳ : ಇಲ್ಲಿನ ಸಜೀಪದ ಮಿತ್ತಮಜಲಿನಲ್ಲಿ ಸೋಮವಾರ ಸಂಜೆ ನಡೆಯುತ್ತಿದ್ದ ಸ್ಯಾಕ್ಸೋಫೋನ್ ಮಾಂತ್ರಿಕ ಕಲೈ ಮಾಮಣಿ ಕದ್ರಿ ಗೋಪಾಲನಾಥ್ ಅವರ 2 ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರ ಪತ್ನಿ ಸರೋಜಿನಿ ಅವರು ಅಸ್ವಸ್ಥಗೊಂಡಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ .ಅವರು ಸ್ಥಳದಲ್ಲೇ ಚಿಕಿತ್ಸೆ ನೀಡಿ ತತ್ ಕ್ಷಣಕ್ಕೆ ನೆರವಾದರು.
ಆರೋಗ್ಯ ಏರು ಪೇರಾಗುತ್ತಿದ್ದಂತೆ ನೇರವಾದ ವೈದ್ಯರೂ ಆದ ಜಿಲ್ಲಾಧಿಕಾರಿಗಳು ಸ್ಥಳದಲ್ಲೇ ಚಿಕಿತ್ಸೆ ನೀಡಿ, ಇತರ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಜಿಲ್ಲಾ ಅರೋಗ್ಯ ಅಧಿಕಾರಿಗೂ ಮಾಹಿತಿ ನೀಡಿ ಸರೋಜಿನಿ ಅವರ ಬಿಪಿ, ಶುಗರ್ ಮತ್ತು ಇಸಿಜಿ ಮಾಡಿಸುವಂತೆ ಸೂಚಿಸಿದ್ದಾರೆ.
ಸಜೀಪದ ಮಿತ್ತಮಜಲು ಪದ್ಮಶ್ರೀ ಕದ್ರಿ ಗೋಪಾಲನಾಥ್ ಅವರ ಹುಟ್ಟೂರಾಗಿದೆ.
‘ಸಂಗೀತ ಸೌರಭ’ ಕಾರ್ಯಕ್ರಮ ಸಣ್ಣ ಆತಂಕದ ನಡುವೆಯೂ ಸಾಂಗವಾಗಿ ಮುಂದುವರೆದಿದ್ದು, ಸರೋಜಿನಿ ಅವರು ಸಣ್ಣ ಮಟ್ಟಿನ ಆರೋಗ್ಯ ಏರು ಪೇರಾಗುತ್ತಿದ್ದಂತೆ ಚೇತರಿಸಿಕೊಂಡಿದ್ದಾರೆ.
ವೈದ್ಯಕೀಯ ಚಿಕಿತ್ಸೆ ನೀಡಿದ ಜಿಲ್ಲಾಧಿಕಾರಿಗಳ ಸಹಾಕಾರಕ್ಕೆ ಕದ್ರಿ ಅವರ ಪುತ್ರ ಖ್ಯಾತ ಸಂಗೀತ ನಿರ್ದೇಶಕ ಮಣಿಕಾಂತ್ ಅವರು ಧನ್ಯವಾದ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್