ಕಡ್ತಲಬೆಟ್ಟು: ಮನೆಗೆ ಬೆಂಕಿ, ಲಕ್ಷಾಂತರ ರೂ. ನಷ್ಟ
Team Udayavani, May 27, 2023, 5:10 AM IST
ಪುಂಜಾಲಕಟ್ಟೆ: ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಚೆನ್ನೈತ್ತೋಡಿ ಗ್ರಾಮದ ಕಡ್ತಲಬೆಟ್ಟು ಕೋಡಿಬಾಕಿಮಾರ್ ಎಂಬಲ್ಲಿ ಮೇ 25 ರಂದು ಸಂಭವಿಸಿದೆ.
ಇಲ್ಲಿನ ಸುಧಾಕರ ಶೆಟ್ಟಿ ಅವರ ಮನೆಗೆ ಮಧ್ಯರಾತ್ರಿ ಸುಮಾರು 12.30ರ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಸುಮಾರು 2 ಲಕ್ಷಕ್ಕೂ ರೂ.ಗೂ ಅಧಿಕ ನಷ್ಟ
ಸಂಭವಿಸಿದೆ. ಈ ವೇಳೆ ಮನೆ ಮಂದಿ ಮಲಗಿದ್ದು, ಎಚ್ಚರಗೊಂಡು ಮನೆಯಿಂದ ಹೊರಗೋಡಿ ಬಂದುದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಮನೆಯ ಒಂದು ಪಾರ್ಶ್ವ ಬೆಂಕಿಗೆ ಅಹುತಿಯಾಗಿದೆ. ಮನೆಯ ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರೊಳಗೆ ದಾಸ್ತಾನು ಮಾಡಲಾಗಿದ್ದ ಒಣ ಅಡಿಕೆ ಮತ್ತು ಬೆಲೆಬಾಳುವ ಮರದ ಸೊತ್ತುಗಳು ಕರಕಲಾಗಿವೆ. ಸ್ಥಳೀಯ ಯುವಕರು ನೀರು ಹಾಯಿಸಿ ಬೆಂಕಿ ಆರಿಸಿದ್ದರು. ಸ್ಥಳಕ್ಕೆ ತಾಲೂಕಿನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು