ಕಲಬುರಗಿ: 148 ಗ್ರಾಮಗಳಿಗೆ ‘ಭೀಮ’ ಪ್ರವಾಹ ಭೀತಿ! ನದಿ ಪಾತ್ರದ ಜನರ ಸ್ಥಳಾಂತರಕ್ಕೆ ಸೂಚನೆ


Team Udayavani, Oct 15, 2020, 7:14 PM IST

ಕಲಬುರಗಿ: 148 ಗ್ರಾಮಗಳಿಗೆ ‘ಭೀಮ’ ಪ್ರವಾಹ ಭೀತಿ! ನದಿ ಪಾತ್ರದ ಜನರ ಸ್ಥಳಾಂತರಕ್ಕೆ ಸೂಚನೆ

ಕಲಬುರಗಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಕಡಿಮೆಯಾದರೂ ಭೀಮ ನದಿಯ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದಿಂದ ನೀರು ಬಿಡುಗಡೆದಿಂದಾಗಿ ನದಿ ಪಾತ್ರದ ಭಾಗದ 148 ಗ್ರಾಮಗಳಿಗೆ ಪ್ರವಾಹ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬೀದರ್-ಬೆಂಗಳೂರು-ಹುಬ್ಬಳ್ಳಿ ನಡುವಿನ ಹೆದ್ದಾರಿಯಲ್ಲಿರುವ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಬಳಿ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ಭೀಮ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗಿದೆ. ಇದರಿಂದ ಅಫಜಲಪುರ ತಾಲೂಕಿನ ಸೊನ್ನಾ ಬ್ಯಾರೇಜ್ ಗೆ ನೀರು ಹರಿದು ಬರುತ್ತಿದ್ದು, ಸಂಪೂರ್ಣವಾಗಿ ಭರ್ತಿಯಾಗಿದೆ. 5.11 ಲಕ್ಷ ಕ್ಯೂಸೆಕ್ ನೀರು ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ನೀರು ಭೀಮ ನದಿಗೆ ಹರಿಸಲಾಗುತ್ತಿದೆ. ಅಪಾಯ ಮಟ್ಟಕ್ಕೆ ನದಿ ಬಂದು ತಲುಪಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟಿಸಂಗಾವಿ ಸೇತುವೆಯಲ್ಲಿ ಸಂಚಾರ ರದ್ದುಗೊಳಿಸಲಾಗಿದೆ.

ಮಹಾರಾಷ್ಟ್ರದಿಂದ ನದಿಗೆ ಒಟ್ಟಾರೆ 7.50 ಲಕ್ಷ ಕ್ಯೂಸೆಕ್ ನೀರು ಹರಿದು ಬರುವ ಸಾಧ್ಯತೆ. ಹೀಗಾಗಿ ಕಲಬುರಗಿ, ಅಫಜಲಪುರ, ಜೇವರ್ಗಿ, ಚಿತ್ತಾಪುರ, ಸೇಡಂ ತಾಲೂಕುಗಳಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತ ಕ್ರಮ ವಹಿಸಿದೆ. ಈಗಾಗಲೇ ನದಿ ಪಾತ್ರದಲ್ಲಿ ಬರುವ 50ಕ್ಕೂ ಹೆಚ್ಚು ಗ್ರಾಮಗಳಿಗೆ ಪ್ರವಾಹದ ಹೊಡೆತ ತಟ್ಟಿದೆ. ಇನ್ನೂ ಸುಮಾರು 40 ಗ್ರಾಮಗಳಿಗೆ ಪ್ರವಾಹದ ಭೀತಿ ದಟ್ಟವಾಗಿದೆ. ಒಟ್ಟಾರೆ ಮುನ್ನೆಚ್ಚರಿಕೆ ಕ್ರಮವಾಗಿ 148 ಗ್ರಾಮಗಳ ನದಿ ಪಾತ್ರದ ಜನರನ್ನು ಸ್ಥಳಾಂತರಕ್ಕೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ:ಅಕ್ಟೋಬರ್ 19ರಿಂದ ಆಲಮಟ್ಟಿ ಶಾಸ್ತ್ರಿ ಜಲಾಶಯ, ಉದ್ಯಾವನ ಸಾರ್ವಜನಿಕ ವೀಕ್ಷಣೆಗೆ ಮುಕ್ತ

ಅಫಜಲಪುರ ತಾಲೂಕಿನ ದಿಕ್ಸಂಗಾ, ಜೇವರ್ಗಿ (ಕೆ), ಜೇವರ್ಗಿ (ಬಿ), ನಂದರಗಿ, ಅಳ್ಳಗಿ, ಗೌರ, ಬಂಕಲಗಾ, ಮಣ್ಣೂರು ಸೇರಿ 12 ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿವೆ. ಕಲಬುರಗಿ ತಾಲೂಕಿನ ಹಾಗರಗುಂಡಗಿ, ಫೀರೋಜಾಬಾದ್, ಜೇವರ್ಗಿ ತಾಲೂಕಿನ ಇಟಗಾ, ಚಿತ್ತಾಪುರ ತಾಲೂಕಿನ ಕಡಬೂರು, ಸನ್ನತಿ, ಕೊಳ್ಳೂರು, ಇಂಗಳಗಿ, ಕುಂದನೂರ, ಚಾಮನೂರು, ಮಾರಡಗಿ, ತುನ್ನೂರ ಗ್ರಾಮಗಳ ನದಿ ಪಾತ್ರದ ಜನರನ್ನು ಶಾಲಾ ಕಟ್ಟಡಗಳು ಸೇರಿ ಸುರಕ್ಷಿತಾ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.

ಪ್ರವಾಹ ಸ್ಥಳಗಳಿಗೆ ಎಸಿ ರಾಮಚಂದ್ರ ಗಡದೆ ಸೇರಿ ಆಯಾ ತಾಲೂಕುಗಳ ತಹಸೀಲ್ದಾರ್ ಗಳು ಭೇಟಿ ಮಾಡಿ ಪರಿಶೀಲನೆ ಮಾಡಿದರು. ಕಲಬುರಗಿ ತಾಲೂಕಿನ ನದಿ ಶಿರೂರ, ಸರಡಗಿ, ಮೈನಾಳ ಸೇರಿ 9 ಗ್ರಾಮಗಳಿಗೆ ನದಿ ನೀರು ನುಗ್ಗುವ ಸಾಧ್ಯತೆ ಇದೆ. ನದಿ ದಂಡೆಯ ಈ ಜನರನ್ನು ಸ್ಥಳಾಂತರಕ್ಕೆ ಕ್ರಮ ವಹಿಸಲಾಗಿದೆ. ಕಳೆದ 48 ಗಂಟೆಗಳಿಂದ ಎರಡು ಎನ್ ಡಿ ಆರ್ ಎಫ್ ತಂಡಗಳು, ಅಗ್ನಿಶಾಮಕ ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ:ಯಾರತ್ತ ಗುರಿ ಅಮೆರಿಕ, ಭಾರತ:ಯುದ್ಧಕ್ಕೆ ಸಿದ್ಧತೆ ನಡೆಸಿ…ಚೀನಾ ಸೇನೆಗೆ ಅಧ್ಯಕ್ಷ ಕ್ಸಿ ಸೂಚನೆ

8 ಸಾವಿರ ಜನರು ಅತಂತ್ರ: ಭಾರಿ ಮಳೆಯಿಂದ ಗ್ರಾಮಗಳು ಜಲಾವೃತಗೊಂಡು ಮನೆ-ಮಠ ಕಳೆದುಕೊಂಡು ಎಂಟು ಸಾವಿರಕ್ಕೂ ಅಧಿಕ ಜನರು ಅತಂತ್ರರಾಗಿದ್ದಾರೆ. ನೀರಿನಲ್ಲಿ ಸಿಲುಕಿದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಜಿಲ್ಲಾದ್ಯಂತ 50 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಕಡಬೂರು ಸೇರಿ ಹಲವು ಕಡೆಗಳಲ್ಲಿ ಜನರು ಮನೆಯ ಛಾವಣಿ ಮೇಲೆ ಪ್ರಾಣ ರಕ್ಷಿಸಿಕೊಂಡಿದ್ದಾರೆ. ಕಲಬುರಗಿ ತಾಲೂಕಿನ ಗುಂಡಗುರ್ತಿ ಬಳಿ ಸೇತುವೆಗೆ ಹಾನಿಯಾಗಿ ಕಲಬುರಗಿಯಿಂದ ಸೇಡಂ, ಹೈದರಾಬಾದ್ ಗೆ ಹೋಗುವ ರಸ್ತೆ ಸಂಚಾರ ಸಹ ಬಂದ್ ಆಗಿದೆ.

ಮತ್ತೊಂದು ಸಾವು: ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಕಮಲಾಪುರ ತಾಲೂಕಿನಲ್ಲಿ ಬುಧವಾರ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ 32 ವರ್ಷದ ಕುಪ್ಪಣ್ಣ ಶವವಾಗಿ ಪತ್ತೆಯಾಗಿದ್ದಾರೆ. ಜವಳಗಾ ಗ್ರಾಮದ ಕುಪ್ಪಣ್ಣ ಬುಧವಾರ ಸಂಜೆ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದ. ಬುಧವಾರ ಓರ್ವ ಯುವಕ ಮತ್ತು ವೃದ್ಧೆ ಬಲಿಯಾಗಿದ್ದರು.

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.