ಕಲಬುರಗಿ: ಹಾಡಹಗಲೇ ದುಷ್ಕರ್ಮಿಗಳಿಂದ ಮಾಜಿ MLC ಪುತ್ರನಿಗೆ ಸೇರಿದ 3.50 ಲಕ್ಷ ಹಣ ಲೂಟಿ
Team Udayavani, Jun 29, 2021, 8:28 PM IST
ಕಲಬುರಗಿ: ಕಾಂಗ್ರೆಸ್ ಮುಖಂಡರಾದ ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಪುತ್ರ ಜಯಪ್ರಕಾಶ ಕಮಕನೂರ ಅವರಿಗೆ ಸೇರಿದ 3.50 ಲಕ್ಷ ರೂ. ನಗದು ಹಣವನ್ನು ದುಷ್ಕರ್ಮಿಗಳು ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ನಗರದ ಸೂಪರ್ ಮಾರ್ಕೆಟ್ ನ ಮುಖ್ಯರಸ್ತೆಯ ವಾದಿರಾಜ ಭವನದ ಹತ್ತಿರ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ಜಯಪ್ರಕಾಶ ಎಕ್ಸಿಸ್ ಬ್ಯಾಂಕ್ ನಿಂದ 3.50 ಲಕ್ಷ ರೂಪಾಯಿ ನಗದು ಡ್ರಾ ಮಾಡಿಕೊಂಡು ಬಂದು ಬುಲೆರೋ ವಾಹನದಲ್ಲಿರಿಸಿದ್ದರು. ನಂತರ ಚಾಲಕನನ್ನು ವಾಹನದ ಬಳಿಯೇ ಇರಲು ಹೇಳಿ ಬೇರೆಡೆ ಹೋಗಿದ್ದರು.
ಈ ವೇಳೆ ಬೈಕ್ ಮೇಲೆ ಬಂದ ನಾಲ್ವರು ಖದೀಮರು ಚಾಲಕನ ಮೈಮೇಲೆ ಕೆಂಪು ಬಣ್ಣದ ದ್ರವ ಎಚರಿ ರಕ್ತ ಬಿದ್ದಿದೆ ನೋಡಿ ಎಂದು ಹೇಳಿ ಆತನ ಗಮನವನ್ನು ಬೇರೆಡೆ ಸೆಳೆದಿದ್ದಾರೆ. ಅಷ್ಟರಲ್ಲೇ ಬುಲೆರೋ ವಾಹನದಲ್ಲಿದ್ದ ಹಣದ ಬ್ಯಾಗ್ ನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.
ಇದನ್ನೂ ಓದಿ :ಹೊರಗುತ್ತಿಗೆ ಸಿಬ್ಬಂದಿಗೆ ನಿಯಮಿತವಾಗಿ ವೇತನ ನೀಡದಿದ್ದರೆ ಶಿಸ್ತುಕ್ರಮ : ಸಚಿವ ಸುಧಾಕರ್
ಹಾಡಹಗಲೇ ನಡೆದ ಈ ಘಟನೆಯಿಂದ ಚಾಲಕ ಸೇರಿದಂತೆ ಅಲ್ಲಿದ್ದ ಜನ ಬೆಚ್ಚಿ ಬಿದ್ದಿದ್ದಾರೆ. ಈ ಬಗ್ಗೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್