ಟ್ವೀಟ್ ವಿವಾದ: 9 ದಿನಗಳ ಬಳಿಕ ನಟ ಕಮಲ್ ಆರ್ ಖಾನ್ ಗೆ ಜಾಮೀನು ಮಂಜೂರು
ಭದ್ರತಾ ಠೇವಣಿ ನೀಡಬೇಕೆಂಬ ಷರತ್ತು ವಿಧಿಸಿ ಆರೋಪಿಗೆ ಜಾಮೀನು ನೀಡಲಾಗಿದೆ.
Team Udayavani, Sep 8, 2022, 11:28 AM IST
ಮುಂಬೈ: 2020ರಲ್ಲಿ ಇರ್ಫಾನ್ ಮತ್ತು ರಿಷಿ ಕಪೂರ್ ಗೆ ಸಂಬಂಧಿಸಿದ ವಿವಾದಿತ ಟ್ವೀಟ್ ವಿಚಾರದಲ್ಲಿ ನಟ, ನಿರ್ಮಾಪಕ ಕಮಲ್ ಆರ್ ಖಾನ್ ಬಂಧನವಾಗಿದ್ದು, ಬಳಿಕ ವಾರದೊಳಗೆ 2021ರ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖಾನ್ ಮತ್ತೆ ಸೆಪ್ಟೆಂಬರ್ 3ರಂದು ಬಂಧಿಸಲ್ಪಟ್ಟ ಘಟನೆ ನಡೆದಿತ್ತು.
ಇದನ್ನೂ ಓದಿ:ಭಾರಿ ಮಳೆಗೆ ರಸ್ತೆ ತುಂಬೆಲ್ಲಾ ನೀರು : ಹೈದರಾಬಾದ್ ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್
ಇದೀಗ ಒಂಬತ್ತು ದಿನಗಳ ಜೈಲುವಾಸದ ನಂತರ ಕೋರ್ಟ್ ಜಾಮೀನು ನೀಡಿದ್ದು, ಗುರುವಾರ (ಸೆಪ್ಟೆಂಬರ್ 08) ಥಾಣೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆಂದು ವರದಿ ತಿಳಿಸಿದೆ.
ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊರಿವಲಿ ಕೋರ್ಟ್ ಮ್ಯಾಜಿಸ್ಟ್ರೇಟ್ ಮಂಗಳವಾರ (ಸೆ.06) ಕೆಆರ್ ಕೆಗೆ ಜಾಮೀನು ನೀಡಿದ್ದರು. ವೈಯಕ್ತಿಕವಾಗಿ 15,000 ರೂಪಾಯಿ ಬಾಂಡ್ ಅಥವಾ ಅಷ್ಟೇ ಮೊತ್ತದ ಭದ್ರತಾ ಠೇವಣಿ ನೀಡಬೇಕೆಂಬ ಷರತ್ತು ವಿಧಿಸಿ ಆರೋಪಿಗೆ ಜಾಮೀನು ನೀಡಲಾಗಿದೆ.
ಆರೋಪಿ ಕೆಆರ್ ಖಾನ್ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಎರಡನೇ ಮತ್ತು ನಾಲ್ಕನೇ ಸೋಮವಾರ ಬೆಳಗ್ಗೆ 10ರಿಂದ 11ಗಂಟೆಯೊಳಗೆ ಠಾಣಾಧಿಕಾರಿ ಮುಂದೆ ಹಾಜರಾಗಬೇಕು ಎಂದು ಕೋರ್ಟ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ