Chennai: ಕೆಲಸ ಕಳೆದುಕೊಂಡಿದ್ದ ಮಹಿಳಾ ಬಸ್ ಚಾಲಕಿಗೆ ಕಾರ್ ಗಿಫ್ಟ್ ಕೊಟ್ಟ ಕಮಲ್ ಹಾಸನ್
Team Udayavani, Jul 1, 2023, 9:08 PM IST
ಚೆನ್ನೈ: DMK ಸಂಸದೆ ಕನಿಮೊಳಿ ಅವರು ತಮಿಳುನಾಡಿನ ಕೊಯಂಬತ್ತೂರ್ಗೆ ಭೇಟಿ ನೀಡಿದ್ದ ವೇಳೆ ಉಂಟಾಗಿದ್ದ ವಿವಾದಕ್ಕೆ ಸಂಬಂಧಿಸಿ ತಮ್ಮ ಕೆಲಸವನ್ನು ಕಳೆದುಕೊಂಡಿದ್ದ ಕೊಯಂಬತ್ತೂರಿನ ಮಹಿಳಾ ಬಸ್ ಚಾಲಕಿ ಶರ್ಮಿಳಾ ಅವರಿಗೆ ನಟ, MNM ಪಕ್ಷದ ನಾಯಕ ಕಮಲ್ ಹಾಸನ್ ಅವರು ಕಾರೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ. ಅಲ್ಲದೇ, ಇಷ್ಟು ದಿನ ಉದ್ಯೋಗಿಯಾಗಿದ್ದ ಶರ್ಮಿಳಾ ಇನ್ನು ಹಲವಾರು ಜನರಿಗೆ ಉದ್ಯೋಗವನ್ನು ನೀಡುವವಳಾಗಲಿ ಎಂದು ಹಾರೈಸಿದ್ದಾರೆ.
ಘಟನೆಯ ಹಿನ್ನಲೆ:
ಇತ್ತೀಚೆಗೆ ಡಿಎಂಕೆ ಸಂಸದೆ ಕನಿಮೋಳಿ ಅವರು ಇತ್ತೀಚೆಗೆ ಕೊಯಂಬತ್ತೂರ್ಗೆ ಭೇಟಿ ನೀಡಿದ್ದ ವೇಳೆ ಅವರು ಏರಿದ ಖಾಸಗಿ ಬಸ್ಗೆ ʻನಗರದ ಮೊದಲ ಮಹಿಳಾ ಬಸ್ ಚಾಲಕಿʼ ಖ್ಯಾತಿಯ ಶರ್ಮಿಳಾ ಅವರೇ ಚಾಲಕಿಯಾಗಿದ್ದರು. ಈ ವೇಳೆ ಬಸ್ನ ಕಂಡಕ್ಟರ್ ಕನಿಮೋಳಿ ಅವರಿಗೆ ಟಿಕೆಟ್ ನೀಡಿದ್ದರು. ಕಂಡಕ್ಟರ್ ವರ್ತನೆಗೆ ಡ್ರೈವರ್ ಶರ್ಮಿಳಾ ಆಕ್ಷೇಪ ವ್ಯಕ್ತಪಡಿಸಿ ಆಡಳಿತ ಮಂಡಳಿಗೆ ದೂರು ನೀಡಿದ್ದರು.
ಇದಕ್ಕೆ ವಿರುದ್ಧವಾಗಿ ಕಂಡಕ್ಟರ್ ಕೂಡಾ ಶರ್ಮಿಳಾ ಮೇಲೆ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಸೆಲೆಬ್ರಿಟಿಗಳನ್ನು ಬಸ್ನಲ್ಲಿ ಪ್ರಯಾಣ ಮಾಡಲು ಆಹ್ವಾನಿಸಿ ಇತರೆ ಪ್ರಯಾಣಿಕರಿಗೆ ಅನನುಕೂಲತೆ ಸೃಷ್ಟಿಸುತ್ತಿದ್ದಾರೆ ಎಂದು ದೂರಿದ್ದರು. ಇಬ್ಬರ ವಾದವನ್ನೂ ಆಲಿಸಿದ ಆಡಳಿತ ಮಂಡಳಿ ಶರ್ಮಿಳಾರನ್ನು ಕೆಲಸದಿಂದ ವಜಾ ಮಾಡಿತ್ತು. ಈ ವಿಚಾರ ಬಹಳಷ್ಟು ಚರ್ಚೆಯನ್ನೂ ಹುಟ್ಟು ಹಾಕಿತ್ತು.
ಈ ಸಂಗತಿ ನಟ, ಮಕ್ಕಳ್ ನೀಧಿ ಮಯಮ್ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರ ಕಿವಿಗೂ ಬಿದ್ದಿದೆ. ಅವರು ಕೆಲಸ ಕಳೆದುಕೊಂಡಿದ್ದ ಶರ್ಮಿಳಾ ಅವರಿಗೆ 3 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದ್ದೂ ಅಲ್ಲದೆ ಸ್ವಂತವಾಗಿ ಉದ್ಯಮ ಆರಂಭಿಸಲು 7 ಸೀಟರ್ಗಳ ಮಲ್ಟಿ ಯುಟಿಲಿಟಿ ವಾಹನವನ್ನು ನೀಡುವುದಾಗಿ ಹೇಳಿದ್ದಾರೆ. ಅಲ್ಲದೇ, ಇಷ್ಟು ದಿನ ಉದ್ಯೋಗಿಯಾಗಿದ್ದ ಶರ್ಮಿಳಾ ಇನ್ನು ಹಲವಾರು ಜನರಿಗೆ ಉದ್ಯೋಗವನ್ನು ನೀಡುವವಳಾಗಲಿ ಎಂದು ಹಾರೈಸಿದ್ದಾರೆ.
ಇದನ್ನೂ ಓದಿ: STOCK EXCHANGE ಬಗ್ಗೆ ಕುತೂಹಲಕರ ಮಾಹಿತಿಗಳು ಇಲ್ಲಿವೆ ನೋಡಿ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ