ಉನ್ನತ ಪೊಲೀಸ್ ಅಧಿಕಾರಿಗಳ ವರ್ಗಾವಣೆ: ಕೊನೆಗೂ ಕಮಲ್ ಪಂತ್ ಎತ್ತಂಗಡಿ
Team Udayavani, May 16, 2022, 7:47 PM IST
ಬೆಂಗಳೂರು: ಉನ್ನತ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ಸೋಮವಾರ ವರ್ಗಾವಣೆ ಮಾಡಿದ್ದು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗದ ಡಿಜಿಪಿಯನ್ನಾಗಿ ಎತ್ತಂಗಡಿ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ರೆಡ್ಡಿ ಅವರು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆ ಎಸ್ ಆರ್ ಪಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಆಗಿ ವರ್ಗ ಮಾಡಲಾಗಿದೆ. ಆರ್ ಹಿತೇಂದ್ರ ಅವರನ್ನು ಕೆ ಎಸ್ ಆರ್ ಪಿ ಎಡಿಜಿಪಿ ಆಗಿ ನೇಮಿಸಲಾಗಿದೆ. ಎಂ. ಎನ್. ಅನುಚೇತ್ ಅವರನ್ನು ಸಿಐಡಿ ಎಸ್ ಪಿ ಯನ್ನಾಗಿ ವರ್ಗಾಯಿಸಲಾಗಿದೆ.
ಚಂದ್ರು ಕೊಲೆ ಪ್ರಕರಣದಲ್ಲಿ ಅವರು ಪಂತ್ ಅವರು ಮಾಡಿದ ಟ್ವೀಟ್ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈಗ ಸವಾಲುಗಳಿಂದ ಕೊಡಿರುವ ಆರೋಪಗಳನ್ನ ಎದುರಿಸುತ್ತಿರುವ ನೇಮಕಾತಿ ವಿಭಾಗಕ್ಕೆ ವರ್ಗಾವಣೆಯಾಗಿದೆ. ಸರಕಾರದ ಕೆಲ ಸಚಿವರಿಗೆ ಕಮಲ್ ಪಂತ್ ಕಾರ್ಯ ವೈಖರಿ ಬಗ್ಗೆ ಸಮಾಧಾನವಿರಲಿಲ್ಲ.ಕಳೆದ ಕೆಲ ತಿಂಗಳಿಂದಲೂ ಕಮಲ್ ಪಂತ್ ವರ್ಗಾವಣೆ ಸುದ್ದಿ ಕೇಳಿ ಬರುತ್ತಿತ್ತಾದರೂ ಸಮಯ ಕೂಡಿ ಬಂದಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್