ಗಾಂಧಿ ಜಯಂತಿಯಂದು ಕನ್ನಯ್ಯ, ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ?
ಜಿಗ್ನೇಶ್ ಮೇವಾನಿ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ನ ಸಂಚಾಲಕರಾಗಿದ್ದಾರೆ.
Team Udayavani, Sep 20, 2021, 4:31 PM IST
ನವದೆಹಲಿ: ಮಾಜಿ ವಿದ್ಯಾರ್ಥಿ ಮುಖಂಡ ಕನ್ನಯ್ಯ ಕುಮಾರ್ ಹಾಗೂ ಗುಜರಾತ್ ನ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಮುಂದಿನ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ ಡಿಟಿವಿ ವರದಿ ಮಾಡಿದೆ.
ಇದನ್ನೂ ಓದಿ:ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಅಕ್ಟೋಬರ್ 2ರ ಮಹಾತ್ಮ ಗಾಂಧಿ ಜನ್ಮ ಜಯಂತಿಯಂದು ಇಬ್ಬರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ. ಸೆಪ್ಟೆಂಬರ್ 28ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಈ ಮೊದಲು ನಿಗದಿಯಾಗಿತ್ತು. ಆದರೆ ಇದೀಗ ದಿನಾಂಕ ಮುಂದೂಡಿಕೆಯಾಗಿದೆ ಎಂದು ವರದಿ ಹೇಳಿದೆ.
ಜಿಗ್ನೇಶ್ ಮೇವಾನಿ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ನ ಸಂಚಾಲಕರಾಗಿದ್ದಾರೆ. 2004ರಲ್ಲಿ ಮೇವಾನಿ ಮುಂಬೈನಲ್ಲಿ ಗುಜರಾತ್ ಭಾಷೆಯ ಅಭಿಯಾನ್ ಮ್ಯಾಗಜಿನ್ ನಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು.
ಸಾಮಾಜಿಕ ಕಾರ್ಯಕರ್ತರಾಗುವ ಮೊದಲು ಮೇವಾನಿ ಮೂರು ವರ್ಷ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು. ಕನ್ನಯ್ಯ ಕುಮಾರ್ ಸಿಪಿಎಂ ಪಕ್ಷದಲ್ಲಿದ್ದು, ತಮ್ಮ ಬೆಂಬಲಿಗರೊಂದಿಗೆ ಕುಮಾರ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ