ಈ ಐಎಎಸ್ ಅಧಿಕಾರಿ ಕೆಲಸ…ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ, ಮತಾಂತರಕ್ಕೆ ಉತ್ತೇಜನ!
ಈ ವೇಳೆ ಐಎಎಸ್ ಅಧಿಕಾರಿಯೂ ಭಾವಹಿಸಿರುವುದಾಗಿ ವರದಿ ವಿವರಿಸಿದೆ.
Team Udayavani, Sep 28, 2021, 12:55 PM IST
ಲಕ್ನೋ: ಉತ್ತರಪ್ರದೇಶದ ಕಾನ್ಪುರ್ ನ ಹಿರಿಯ ಐಎಎಸ್ ಅಧಿಕಾರಿ ಧಾರ್ಮಿಕ ಮತಾಂತರ ಉತ್ತೇಜಿಸುವ ಮತ್ತು ಹಿಂದೂ ಧರ್ಮದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಎಂದು ವರದಿ ತಿಳಿಸಿದೆ.
ಹಿರಿಯ ಐಎಎಸ್ ಅಧಿಕಾರಿ ಮೊಹಮ್ಮದ್ ಇಫ್ತಿಖರುದ್ದೀನ್ ಹಿಂದೂ ಧರ್ಮದ ವಿರುದ್ಧದ ಅಪಪ್ರಚಾರದಲ್ಲಿ ತೊಡಗಿಕೊಂಡಿರುವುದಾಗಿ ಮಠ, ಮಂದಿರ ಸಮನ್ವಯ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷ ಭೂಪೇಶ್ ಅವಾಸ್ಥಿ ಆರೋಪಿಸಿದ್ದಾರೆ.
ಉತ್ತರಪ್ರದೇಶ ರಾಜ್ಯ ರಸ್ತೆ ಸಾರಿಗೆ ಕಾರ್ಪೋರೇಶನ್ ಅಧ್ಯಕ್ಷರಾಗಿರುವ ಮೊಹಮ್ಮದ್ ಇಫ್ತಿಖರುದ್ದೀನ್, ಕಾನ್ಪುರ್ ದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಐಎಎಸ್ ಅಧಿಕಾರಿ ಭಾಗವಹಿಸಿರುವ ವಿಡಿಯೋವನ್ನು ಅವಾಸ್ಥಿ ಬಿಡುಗಡೆಗೊಳಿಸಿದ್ದಾರೆ.
ವಿಡಿಯೋದಲ್ಲಿ, ಮೌಲಾನಾ ಧಾರ್ಮಿಕ ಪ್ರವಚನ ನೀಡುತ್ತಿದ್ದ ಸಂದರ್ಭದಲ್ಲಿ ಜನರ ಗುಂಪು ನೆಲದ ಮೇಲೆ ಕುಳಿತು ಕೇಳಿಸಿಕೊಳ್ಳುತ್ತಿದ್ದರು. ಈ ವೇಳೆ ಐಎಎಸ್ ಅಧಿಕಾರಿಯೂ ಭಾವಹಿಸಿರುವುದಾಗಿ ವರದಿ ವಿವರಿಸಿದೆ.
ಈ ಘಟನೆ ಬಗ್ಗೆ ತನಿಖೆ ನಡೆಸಲು ಉತ್ತರಪ್ರದೇಶ ಸಿಎಂ ಯೋಗಿ ನೇತೃತ್ವದ ಸರ್ಕಾರ ವಿಶೇಷ ತನಿಖಾ ತಂಡ(ಎಸ್ ಐಟಿ)ವನ್ನು ರಚಿಸಿದ್ದು, ಏಳು ದಿನಗಳೊಳಗೆ ಉತ್ತರಪ್ರದೇಶ ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್