ಕಾರ್ಕಳದಲ್ಲಿ ಗೋಕಳ್ಳರ ಅಟ್ಟಹಾಸ : ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ !
Team Udayavani, Jan 30, 2022, 3:13 PM IST
ಕಾರ್ಕಳ: ತಾಲೂಕಿನ ಮಾಳ ಹೆದ್ದಾರಿಯಲ್ಲಿ ರವಿವಾರ ನಸುಕಿನ ವೇಳೆ ಗೋಕಳ್ಳರು ಅಟ್ಟಹಾಸ ಮೆರೆದಿದ್ದು, ಪೋಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ್ದಾರೆ.
ನಸುಕಿನ ವೇಳೆ ಪೊಲೀಸರು ವಾಹನ ತಪಾಸಣೆ ನಡೆಸುತಿದ್ದ ವೇಳೆ ಗೋವುಗಳನ್ನು ತುಂಬಿದ ಕಾರು ಮತ್ತು ರಕ್ಷಣೆ ಒದಗಿಸಲು ಬರುತಿದ್ದ ಬೈಕನ್ನು ರಸ್ತೆಗೆ ಬ್ಯಾರಿಕೇಡ್ ಅಡ್ಡ ಇಟ್ಟು ತಡೆಯಲು ಯತ್ನಿಸಿದ್ದಾರೆ. ಆ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ.
ಪೊಲೀಸರು ಗಾಯಗೊಂಡರೂ ಎದೆ ಗುಂದದೆ ಪೊಲಿಸ್ ಜೀಪಿನಲ್ಲಿ ಕಾರು ಮತ್ತು ಬೈಕ್ ಅನ್ನು ಬೆನ್ನತ್ತಿದ್ದು. ಇದೆ ವೇಳೆ ಗೋವುಗಳಿದ್ದ ಕಾರು ಪರಾರಿಯಾಗಿದ್ದು, ಬೈಕ್ ಸವಾರ ಬಿದ್ದು ಗಾಯಗೊಂಡಿದ್ದು ಆತನನ್ನು ಪೊಲಿಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಬೈಕ್ ಸಂಪೂರ್ಣ ಹಾನಿಯಾಗಿದ್ದು, ಗ್ರಾಮಾಂತರ ಎಸ್ ಐ ತೇಜಸ್ವಿ ಹಾಗೂ ಒರ್ವ ಪೊಲೀಸರಿಗೆ ಗಾಯಗಳಾಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಅಕ್ರಮ ಗೋ ಸಾಗಾಟ ತಡೆಯುವ ವೇಳೆ ಕಾರಿನಲ್ಲಿದ್ದವರು ವಾಹನವನ್ನು ಮೈಮೇಲೆ ಹತ್ತಿಸಲು ಬಂದಿದ್ದು ನಾವು ಪ್ರಾಣಾಪಯದಿಂದ ಪಾರಾಗಿರುವುದು ನಿಜ. ನನಗೆ ಹಾಗೂ ಇನ್ನೋರ್ವ ಪೊಲೀಸ್ ಸಿಬಂದಿಗೆ ಘಟನೆಯಲ್ಲಿ ಗಾಯಗಳಾಗಿವೆ. ರಕ್ಷಣಾತ್ಮಕವಾಗಿದ್ದರಿಂದ ಪ್ರಾಣಾಪಾ ಯ ಸಂಭವಿಸಿಲ್ಲ.ಆಸ್ಪತ್ರೆಗೆ ತೆರಳಿ ಇಂಜೆಕ್ಷನ್ ಪಡೆದುಕೊಂಡಿದ್ದೇವೆ. ಬೈಕ್ ನಲ್ಕಿದ್ದ ಓರ್ವ ಆರೋಪಿ ವಶದಲ್ಲಿದ್ದು ಆತನನ್ನು ತನಿಖೆ ನಡೆಸುತ್ತೇವೆ.ಹೆಚ್ಚಿನ ಮಾಹಿತಿ ಈಗ ಬಹಿರಂಗ ಪಡಿಸಲಾಗದು ಎಂದು ಎಸ್ ಐ ತೇಜಸ್ವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಕಾರ್ಕಳ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಗೋ ಕಳ್ಳರು ವ್ಯಾಪಕ ಅಟ್ಟಹಾಸ ಮೆರೆಯುತ್ತಿದು, ಬೀಡಾಡಿ ದನಗಳು ಮತ್ತು ಹೈನುಗಾರರ ಹಾಲು ನೀಡುವ ದನಗಳನ್ನು ಕದ್ದು ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…