ಇಂದು ರಾಜ್ಯ ಬಜೆಟ್‌: ಸಿಎಂ ಪಾಲಿಗೆ ಹಗ್ಗದ ಮೇಲಿನ ನಡಿಗೆ


Team Udayavani, Mar 8, 2021, 7:05 AM IST

ಇಂದು ರಾಜ್ಯ ಬಜೆಟ್‌: ಸಿಎಂ ಪಾಲಿಗೆ ಹಗ್ಗದ ಮೇಲಿನ ನಡಿಗೆ

ಹಣಕಾಸು ಖಾತೆಯನ್ನೂ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೋಮವಾರ 2021-22ನೇ ಸಾಲಿನ ರಾಜ್ಯ ಮುಂಗಡಪತ್ರವನ್ನು ಮಂಡಿಸಲಿದ್ದಾರೆ. ಕಳೆದ ಬಾರಿಯ ಬಜೆಟ್‌ನಲ್ಲಿ ಹಲವಾರು ಅಭಿವೃದ್ಧಿ ಯೋಜನೆ ಮತ್ತು ಜನಪ್ರಿಯ ಕಾರ್ಯಕ್ರಮಗಳನ್ನು ಘೋಷಿಸಲಾಗಿತ್ತಾದರೂ ಕೊರೊನಾ ಕಾರಣದಿಂದಾಗಿ ಅವುಗಳ ಸಮರ್ಪಕ ಅನುಷ್ಠಾನ ಸಾಧ್ಯವಾಗಿರಲಿಲ್ಲ. ರಾಜ್ಯದ ಆರ್ಥಿಕತೆಯ ಮೇಲೂ ಕೋವಿಡ್‌ ಗಂಭೀರ ಪರಿಣಾಮ ಬೀರಿದ್ದು ಬೊಕ್ಕಸ ಬರಿದಾಗಿದೆ. ಸದ್ಯ ಪರಿಸ್ಥಿತಿ ಸಹಜ ಸ್ಥಿತಿಯತ್ತ ಮರಳುತ್ತಿದೆಯಾದರೂ ಸಂಪನ್ಮೂಲ ಸಂಗ್ರಹ ಬಲುದೊಡ್ಡ ಸವಾಲಾಗಿರುವುದರಿಂದ ಈ ಬಾರಿಯ ಬಜೆಟ್‌ ಮುಖ್ಯಮಂತ್ರಿ ಪಾಲಿಗೆ ಅಗ್ನಿಪರೀಕ್ಷೆಯಾಗಿದೆ.

ಕಳೆದ ಬಾರಿಯೇ ಈ ಹಿಂದಿನ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರದ ಕೆಲವೊಂದು ಯೋಜನೆಗಳನ್ನು ಬದಿಗೆ ಸರಿಸಿದ್ದ ಬಿಜೆಪಿ ಸರಕಾರ ಮತ್ತೆ ಕೆಲವೊಂದನ್ನು ನಿರ್ಲಕ್ಷಿಸುವ ಮೂಲಕ ಅವುಗಳನ್ನೂ ರದ್ದುಗೊಳಿಸುವ ಮುನ್ಸೂಚನೆ ನೀಡಿತ್ತು. ರಾಜ್ಯದ ಸದ್ಯದ ಆರ್ಥಿಕ ಪರಿಸ್ಥಿತಿ ಮತ್ತು ಈ ಯೋಜನೆಗಳ ಫ‌ಲಶ್ರುತಿಯನ್ನು ಆಧರಿಸಿ ಈ ಬಾರಿ ಯಡಿಯೂರಪ್ಪ ಅವರು ಮೈತ್ರಿ ಸರಕಾರದ ಇನ್ನಷ್ಟು ಯೋಜನೆಗಳಿಗೆ ಕತ್ತರಿ ಹಾಕಲಿರುವುದು ನಿಶ್ಚಿತ.

ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿರುವುದರಿಂದ ಬಡ ಮತ್ತು ಮಧ್ಯಮ ವರ್ಗದ ಜನರ ದೈನಂದಿನ ಬದುಕು ದುಸ್ತರವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಹೊಸದಾಗಿ ತೆರಿಗೆ ವಿಧಿಸುವ ಅಥವಾ ಹೆಚ್ಚಿಸುವ ಸಾಧ್ಯತೆ ಕಡಿಮೆ. ಇದೇ ವೇಳೆ ಆದಾಯ ಕ್ರೋಡೀಕರಣಕ್ಕಾಗಿ ಯಡಿ ಯೂರಪ್ಪ ಅವರು ಒಂದಿಷ್ಟು ಕಠಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಆದಾಯ ಸಂಗ್ರಹಣೆಯಲ್ಲಿನ ಸೋರಿಕೆ ಹಾಗೂ ಆಡಳಿತ ವೆಚ್ಚಗಳಿಗೆ ಕಡಿವಾಣ ಹಾಕಿ, ಅಭಿವೃದ್ಧಿ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳಿಗೆ ಈ ಹಣವನ್ನು ಬಳಸಿಕೊಳ್ಳುವ ಲೆಕ್ಕಾಚಾರ ಅವರದಾ ಗಿದೆ. ಅಷ್ಟೇ ಅಲ್ಲದೆ ಈ ಬಾರಿ ಸಾಲದ ಪ್ರಮಾಣದಲ್ಲಿಯೂ ಹೆಚ್ಚಳವನ್ನು ನಿರೀಕ್ಷಿಸಲಾಗಿದ್ದು ಆದಾಯ ಮತ್ತು ವೆಚ್ಚವನ್ನು ಸರಿದೂಗಿಸುವುದು ಮುಖ್ಯಮಂತ್ರಿ ಪಾಲಿಗೆ “ಹಗ್ಗದ ಮೇಲಿನ ನಡಿಗೆ’ಯೇ ಸರಿ.

ಕಳೆದ ಬಾರಿಯ ಬಜೆಟ್‌ ಗಾತ್ರ 2.37ಲಕ್ಷ ಕೋಟಿ ರೂ.ಗಳಾಗಿದ್ದರೆ ಈ ಬಾರಿ ಹಣಕಾಸಿನ ಮುಗ್ಗಟ್ಟಿನ ಹೊರತಾಗಿಯೂ ಬಜೆಟ್‌ ಗಾತ್ರ ಒಂದಿಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಕೆಲವೊಂದು ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ.

ಯಡಿಯೂರಪ್ಪ ಅವರು ಈ ಹಿಂದೆ ಮಂಡಿಸಿದ್ದ ಏಳು ಬಜೆಟ್‌ಗಳಲ್ಲಿಯೂ ರೈತರು ಮತ್ತು ಜನಸಾಮಾನ್ಯರ ಪರವಾದ ಯೋಜನೆಗಳನ್ನು ಘೋಷಿಸುತ್ತಾ ಬಂದಿರುವುದರಿಂದ ಈ ಬಾರಿಯ ಬಜೆಟ್‌ನಲ್ಲೂ ಸಂಪ್ರದಾಯವನ್ನು ಮುಂದುವರಿಸಿ ಕೆಲವೊಂದು ಹೊಸ ಯೋಜನೆಗಳನ್ನಾದರೂ ರಾಜ್ಯದ ಜನರಿಗೆ ಕೊಡುಗೆಯಾಗಿ ನೀಡಲಿದ್ದಾರೆ ಎಂಬುದು ರಾಜಕೀಯ ತಜ್ಞರ ಅಭಿಪ್ರಾಯ. ಕಳೆದ ಕೆಲವು ತಿಂಗಳುಗಳಿಂದೀಚೆಗೆ ರಾಜ್ಯದ ಕೆಲವೊಂದು ಸಮುದಾಯಗಳ ಸಂಘಟನೆಗಳು ಆಯಾಯ ಸಮುದಾಯಗಳ ಸ್ವಾಮೀಜಿಗಳ ನೇತೃತ್ವದಲ್ಲಿ ಮೀಸಲಾತಿ, ಪ್ರಾಧಿಕಾರಗಳ ರಚನೆ..ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಲೇ ಬಂದಿವೆ. ಸದ್ಯದ ಪರಿಸ್ಥಿತಿಯಲ್ಲಿ ಮೀಸಲಾತಿ ವಿಚಾರವಾಗಿ ಕೇಂದ್ರಕ್ಕೆ ಶಿಫಾರಸು ಮಾಡುವಂತಹ ಅಥವಾ ಇದಕ್ಕಾಗಿ ತಜ್ಞರ ಸಮಿತಿ ರಚನೆಯಂಥ ಹುಚ್ಚು ಸಾಹಸಕ್ಕೆ ಸರಕಾರ ಮುಂದಾಗುವ ಸಾಧ್ಯತೆ ಕಡಿಮೆ. ಆದರೆ ಈ ಸಮುದಾಯಗಳ ಕೆಲವೊಂದು ಬೇಡಿಕೆಗಳನ್ನು ಮುಖ್ಯಮಂತ್ರಿ ಅವರು ಈಡೇರಿಸುವ ನಿರೀಕ್ಷೆಯಂತೂ ಇದ್ದೇ ಇದೆ. ಹೊಸದಾಗಿ ರಚನೆಯಾಗಿರುವ ಜಿಲ್ಲೆ, ತಾಲೂಕುಗಳಿಗೆ ಬಜೆಟ್‌ನಲ್ಲಿ ಒಂದಿಷ್ಟು ಹೆಚ್ಚಿನ ಅನುದಾನವನ್ನು ಮೀಸಲಿರಿಸುವ ಸಾಧ್ಯತೆಯೂ ಇದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.