Karnataka Budget 2022: ಸಿಎಂ ಚೊಚ್ಚಲ ಬಜೆಟ್ ನಲ್ಲೇ ತವರು ಜಿಲ್ಲೆಗೆ ಬಂಪರ್ ಕೊಡುಗೆ ಘೋಷಣೆ
ಸವಣೂರು ತಾಲ್ಲೂಕಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ
Team Udayavani, Mar 4, 2022, 4:12 PM IST
ಬೆಂಗಳೂರು: ಮುಖ್ಯಮಂತ್ರಿಗಾದಿಗೆ ಏರಿದ್ದ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ (ಮಾರ್ಚ್ 04) ಮಂಡಿಸಿದ್ದ ಮುಂದಿನ ವರ್ಷದ ತಮ್ಮ ಚೊಚ್ಚಲ ಬಜೆಟ್ ನಲ್ಲಿ ತವರು ಜಿಲ್ಲೆ ಹಾವೇರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ.
ಹಾವೇರಿ ಜಿಲ್ಲೆಗೆ 15 ಕಾರ್ಯಕ್ರಮಗಳ ಘೋಷಣೆ ಮಾಡಿದ ಸಿಎಂ
* ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ
* ಹಾನಗಲ್ ನಲ್ಲಿ ಮಾವು ಸಂಸ್ಕರಣಾ ಘಟಕ
* ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ
* ಕಾಲೇಜುಗಳ ಮೇಲ್ವಿಚಾರಣೆ ಸುಧಾರಣೆಗೆ ಹಾವೇರಿ ಸೇರಿ ಏಳು ಜಿಲ್ಲೆಗಳಲ್ಲಿ ವಿನೂತನ ಮಾದರಿಯ ವಿವಿ ಸ್ಥಾಪನೆ.
* ಹಾವೇರಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಹೆಸರಿನ ಸಂಚಾರಿ ಕ್ಲಿನಿಕ್
* ಶಿಗ್ಗಾಂವಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ 250 ಹಾಸಿಗೆಗಳಿಗೆ ಮೇಲ್ದರ್ಜೆಗೆ
* ಸವಣೂರು ತಾಲ್ಲೂಕಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ
* ಚರ್ಮ ಕುಶಲಕರ್ಮಿಗಳಿಗೆ ಹಾವೇರಿಯಲ್ಲಿ ಸಾಮಾನ್ಯ ಸೌಲಭ್ಯ ಸಮುಚ್ಛಯ ಸ್ಥಾಪನೆ
* ಶಿಗ್ಗಾಂವಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಏರೋಸ್ಪೇಸ್, ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಆಟೋಮೇಷನ್, ಎಲೆಕ್ಟ್ರಾನಿಕ್ ಕ್ಷೇತ್ರಗಳ ತರಬೇತುದಾರರಿಗೆ ತರಬೇತಿ ಕೇಂದ್ರ
* ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರುಗಳಿಗೆ ಹೊಸ ರೈಲು ಮಾರ್ಗ ಯೋಜನೆ
* ಹಾವೇರಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ
* ರಾಣೆಬೆನ್ನೂರಿನಲ್ಲಿ ನೂತನ ಜವಳಿ ಪಾರ್ಕ್.
* ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ. 20 ಕೋಟಿ ರೂ ನಿಗದಿ
* ಹಾವೇರಿಯಲ್ಲಿ ಡಾ.ಮಹಾದೇವ ಬಣಕಾರರ ಸಾಂಸ್ಕೃತಿಕ ಭವನ, 2 ಕೋಟಿ ರೂ
* ಶಿಗ್ಗಾಂವಿಯಲ್ಲಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರ, 28 ಕೋಟಿ ರೂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ