ಕೋವಿಡ್ ಪ್ರಕರಣದಲ್ಲಿ ಕರ್ನಾಟಕ 2ನೇ ಸ್ಥಾನಕ್ಕೆ! 3,652 ಹೊಸ ಪ್ರಕರಣ ಪತ್ತೆ
Team Udayavani, Nov 1, 2020, 10:12 PM IST
ಬೆಂಗಳೂರು: ದೇಶದ ಕೊರೊನಾ ಸೋಂಕು ಪ್ರಕರಣಗಳ ರಾಜ್ಯಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನಕ್ಕೇರಿಕೆಯಾಗಿದೆ. ಭಾನುವಾರ ಹೊಸದಾಗಿ 3,652 ಮಂದಿಗೆ ಸೋಂಕು ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೇ 24 ಮಂದಿ ಮೃತಪಟ್ಟಿದ್ದಾರೆ. ಎಂಟು ಸಾವಿರಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ.
ಕಳೆದ ಒಂದು ತಿಂಗಳಿಂದ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಒಟ್ಟಾರೆ 8,27,064 ಪ್ರಕರಣಗಳೊಂದಿಗೆ ಆಂಧ್ರಪ್ರದೇಶವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದೆ. 16.83 ಲಕ್ಷ ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಕಳೆದ ವಾರವಷ್ಟೇ ಸೋಂಕಿತರ ಸಾವಿನಲ್ಲಿಯೂ ಎರಡನೇ ಸ್ಥಾನಕ್ಕೇರಿಕೆಯಾಗಿತ್ತು. ಒಟ್ಟಾರೆ ಕೊರೊನಾ ಪ್ರಕರಣಗಳಲ್ಲಿ ಈಗಾಗಲೇ 7.65 ಲಕ್ಷ ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. 11,192 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇಂದಿಗೂ 50,592 ಸೋಂಕಿತರು ಆಸ್ಪತ್ರೆ/ಮನೆಗಳಲ್ಲಿ ಆರೈಕೆ ಮತ್ತು ಚಿಕಿತ್ಸೆಯಲ್ಲಿದ್ದಾರೆ.
ಇದನ್ನೂ ಓದಿ:ಸೀಪ್ಲೇನ್ ಸಂಚಾರಕ್ಕೆ ಉತ್ತಮ ಸ್ಪಂದನೆ : ಉದ್ಘಾಟನೆಗೊಂಡ ಬೆನ್ನಲ್ಲೇ 3000 ಬುಕಿಂಗ್!
ಶನಿವಾರಕ್ಕೆ ಹೋಲಿಸಿದರೆ ಭಾನುವಾರ 5,00ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಆದರೆ, ಗುಣಮುಖರ ಸಂಖ್ಯೆ ಒಂದು ಸಾವಿರದಷ್ಟು ಏರಿಕೆಯಾಗಿದೆ. ಇನ್ನು ಸೋಂಕಿತರ ಸಾವು 28 ರಿಂದ 19ಕ್ಕೆ ಇಳಿಕೆ ಕಂಡಿದೆ. ಅಲ್ಲದೆ, ಕಳೆದ ಆರು ತಿಂಗಳಲ್ಲಿ ವರದಿಯಾದ ಅತಿ ಕಡಿಮೆ ಸೋಂಕಿತರ ಸಾವು ಇದಾಗಿದೆ.
ಪರೀಕ್ಷೆ 80 ಲಕ್ಷಕ್ಕೆ ಹೆಚ್ಚಳ; ಅಕ್ಟೋಬರ್ನಲ್ಲೇ 30 ಲಕ್ಷ
ರಾಜ್ಯದ ಒಟ್ಟಾರೆ ಕೊರೊನಾ ಸೋಂಕು ಪರೀಕ್ಷೆಗಳ ಸಂಖ್ಯೆ ಭಾನುವಾರ 80.12 ಲಕ್ಷಕ್ಕೆ ತಲುಪಿವೆ. ಈ ಪೈಕಿ 30,04,785 ಪರೀಕ್ಷೆಗಳು ಅಕ್ಟೋಬರ್ನಲ್ಲಿಯೇ ನಡೆದಿದ್ದು, ಸರಾಸರಿ ನಿತ್ಯ ಒಂದು ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೊಳಗಾಗಿದ್ದಾರೆ. ಇನ್ನು ಪರೀಕ್ಷೆಗಳಲ್ಲಿ ಕರ್ನಾಟಕ ಆರನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ