ಜನರ ಹೆಣದ ಮೇಲೆ ಸರಕಾರ ಹಣ ಮಾಡುವ ಕೆಲಸ ಮಾಡುತ್ತಿದೆ: ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ


Team Udayavani, Aug 3, 2020, 6:56 PM IST

ರಾಜ್ಯ ಸರಕಾರ ಜನರ ಹೆಣದ ಮೇಲೆ ಹಣ ಮಾಡುವ ಕೆಲಸ ಮಾಡುತ್ತಿದೆ: ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ

ಬೀದರ್ : ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಉಪಕರಣಗಳ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿದ್ದು, ಸರ್ಕಾರ ಜನರ ಹೆಣದ ಮೇಲೆ ಹಣ ಮಾಡುತ್ತಿದೆ. ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ, ಸಾಮಗ್ರಿಗಳ ಖರೀದಿಯ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ತೆರಿಗೆ ಹಣವನ್ನು ಸರ್ಕಾರ ಖರೀದಿ ಹೆಸರಲ್ಲಿ ಲೂಟಿ ಮಾಡಿದೆ. ವಿಪಕ್ಷ ನಾಯಕರು ಖರ್ಚಿನ ಲೆಕ್ಕ ಕೇಳಿದರೆ ಅವರಿಗೆ ನೋಟಿಸ್ ನೀಡಲಾಗಿದೆ. ಇದ್ಯಾವುದಕ್ಕೂ ಕಾಂಗ್ರೆಸ್ ಹೆದರಲ್ಲ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮತ್ತು ಔಷಧ ಸಾಮಗ್ರಿಗಳ ಖರೀದಿಯಲ್ಲಿ 2 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದ್ದು, ಬಿಜೆಪಿ ಶಾಸಕರೇ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ. ಸಚಿವರುಗಳು ಕೇವಲ ಹಣ ಹೊಡೆಯಲು ಪೈಪೋಟಿ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ದೇಶದಲ್ಲಿ ಕೋವಿಡ್ ವೈರಸ್ ವ್ಯಾಪಕವಾಗಿ ಹಬ್ಬುತ್ತಿದ್ದು, ಕೈಮೀರಿ ಹೋಗಿದೆ. ರಾಜ್ಯದಲ್ಲಿ ಪರಿಸ್ಥಿತಿ ಹೆಚ್ಚು ಹದಗೆಟ್ಟಿದೆ. ಸೋಂಕು ಹತೋಟಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದರೂ ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಿಲ್ಲ. ಸರ್ಕಾರಕ್ಕೆ ಜನರ ಹಿತಾಸಕ್ತಿ ಬೇಕಾಗಿಲ್ಲ. ಕೆಲಸದಲ್ಲಿ ಬದ್ಧತೆ, ಆಡಳಿತದ ಅನುಭವದ ಕೊರತೆ ಸರ್ಕಾರದ ವೈಫಲ್ಯಕ್ಕೆ ಪ್ರಮುಖ ಕಾರಣವಾಗಿದೆ ಎಂದರು.

ಕೋವಿಡ್ ವಿಷಯದಲ್ಲಿ ಕಾಂಗ್ರೆಸ್ ಪ್ರತಿ ಹಂತದಲ್ಲಿ ಸರ್ಕಾರಕ್ಕೆ ಸಹಕಾರ, ಸಲಹೆ ನೀಡುತ್ತಾ ಬಂದಿದೆ. ಆದರೆ, ಸರ್ಕಾರ ಯಾವುದೇ ಕೆಲಸ ಮಾಡದೇ ವ್ಯರ್ಥ ಕಾಲಹರಣ ಮಾಡುತ್ತ ಬಂದಿದೆ. ಸರಿಯಾದ ನಾಯಕತ್ವದ ಇಲ್ಲದೇ ಅಧಿಕಾರಿ ವರ್ಗದವರು ಸಹ ನಿಸ್ಸಾಯಕರಾಗಿದ್ದಾರೆ. ಕಳೆದ ಮೂರು ತಿಂಗಳಿಂದ ಮೌನ ವಹಿಸಿದ್ದ ಕಾಂಗ್ರೆಸ್ ಈಗ ಸರ್ಕಾರದ ಕ್ರಮ, ಕಾರ್ಯವೈಖರಿಯಿಂದ ಬೇಸತ್ತು ಪ್ರಶ್ನಿಸುವ ಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೀದರ್ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಔಷಧ ಸರಬರಾಜು ಸರಿಯಾಗಿ ಆಗುತ್ತಿಲ್ಲ. ಖಾಸಗಿ ಕ್ಲಿನಿಕ್‌ಗಳು ಅಗತ್ಯ ಸಹಕಾರ ನೀಡುತ್ತಿಲ್ಲ. ಹೀಗಾದರೆ ಸೋಂಕಿತರು ಚಿಕಿತ್ಸೆಗೆ ಎಲ್ಲಿ ಹೋಗಬೇಕು. ಬೀದರ್ ನಲ್ಲಿ ವೈದ್ಯ ಕಾಲೇಜು, ಹೊಸ ಆಸ್ಪತ್ರೆ ಇದ್ದರೂ ಸಹ ಜಿಲ್ಲೆಯಲ್ಲಿ ಸೋಂಕಿತರ ಮರಣ ಪ್ರಮಾಣ ಹೆಚ್ಚುತ್ತಿರುವುದು ಏಕೆ ಎಂದು ಪ್ರಶ್ನಿಸಿದ ಡಾ. ಪಾಟೀಲ, ಸರ್ಕಾರ ಈಗಲಾದರೂ ಎಚ್ಚೆತ್ತು ವೈರಾಣು ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಆಕ್ಸಿಜನ್, ಐಸಿಯು ಬೆಡ್ ಮತ್ತು ವೆಂಟಿಲೇಟರ್‌ಗಳ ಸಂಖ್ಯೆ ಹೆಚ್ಚಿಸಬೇಕು. ರೋಗಿಗಳಿಗೆ ಸಮಯಕ್ಕೆ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಂಡು ಜನರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.