Karnataka: ಗೃಹ ಲಕ್ಷ್ಮೀ ಜೂ. 28ರಂದು ತೀರ್ಮಾನ- ಲಕ್ಷ್ಮೀ ಹೆಬ್ಟಾಳ್ಕರ್‌


Team Udayavani, Jun 24, 2023, 7:47 AM IST

lakshmi hebbalkar

ಬೆಂಗಳೂರು: ಸರಕಾರದ ಮಹತ್ವಾಕಾಂಕ್ಷಿ “ಗೃಹ ಲಕ್ಷ್ಮೀ” ಯೋಜನೆಗೆ ಜೂ. 28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪ ಸಿಗಲಿದ್ದು, ಅಂದು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಮುಹೂರ್ತ ನಿಗದಿಯಾಗುವ ಸಾಧ್ಯತೆ ಇದೆ.

“ಗೃಹ ಲಕ್ಷ್ಮೀ” ಯೋಜನೆಗೆ ಆಗಸ್ಟ್‌ನಲ್ಲಿ ಚಾಲನೆ ದೊರೆಯಲಿದೆ. ಆದರೆ ಈ ಸಂಬಂಧದ ಅರ್ಜಿ ಸ್ವೀಕಾರ ಪ್ರಕ್ರಿಯೆ ಹೇಗೆ? ಯಾವಾಗಿನಿಂದ ಆರಂಭಿಸಬೇಕು ಮತ್ತಿತರ ವಿಷಯಗಳ ಬಗ್ಗೆ ಬುಧವಾರ (ಜೂ. 28) ರೂಪುರೇಷೆ ಸಿದ್ಧಗೊಳ್ಳಲಿದೆ. ಬಹುತೇಕ ಅದೇ ದಿನ ಅನುಷ್ಠಾನದ ಮುಹೂರ್ತ ಕೂಡ ನಿಗದಿಯಾಗುವ ಸಾಧ್ಯತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ತಿಳಿಸಿದರು.

ನಗರದಲ್ಲಿ ಶುಕ್ರವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ ಹಾಗೂ ಉನ್ನತ ಅಧಿಕಾರಿಗಳ ಜತೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮೀ ಯೋಜನೆಗೆ ಪ್ರತ್ಯೇಕ ಆ್ಯಪ್‌ ತಯಾರಾಗಿದೆ. ಅಧಿಕಾರಿಗಳು ಮತ್ತು ಸಚಿವರ ಜತೆ ಸುದೀರ್ಘ‌ ಸಭೆ ನಡೆಸಲಾಗಿದೆ. ಯಾವತ್ತು ಅರ್ಜಿ ಸ್ವೀಕಾರ ಮಾಡಬೇಕು ಎಂದು ನಿರ್ಧರಿಸಬೇಕಿದೆ. ಈ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದರು.

ಈ ಮಧ್ಯೆ ಸೇವಾಸಿಂಧು ಪೋರ್ಟಲ್‌ ಅಪ್‌ಗ್ರೇಡ್‌ ಮಾಡಿದ್ದರೂ, ಸರ್ವರ್‌ ಓವರ್‌ ಲೋಡ್‌ ಆಗುತ್ತಿದೆ. ಇದರಿಂದ ಸಮಸ್ಯೆ ಆಗುತ್ತಿದೆ. ಇದಕ್ಕೆಲ್ಲ ಆ್ಯಪ್‌ನಲ್ಲಿ ಪರಿಹಾರ ಸಿಗಲಿದೆ ಎಂದ ಅವರು, ಬರುವ ಸಚಿವ ಸಂಪುಟ ಸಭೆಯಲ್ಲಿ ಅಪ್ಲಿಕೇಷನ್‌ ಅನ್ನು ಮುಖ್ಯಮಂತ್ರಿಗಳಿಗೆ ತೋರಿಸಿ, ಅಂತಿಮ ದಿನಾಂಕ ಘೋಷಣೆ ಮಾಡಲಾಗುವುದು. ಕಂದಾಯ ಸಚಿವರು ನಾಡಕಚೇರಿ, ತಹಶೀಲ್ದಾರ್‌ ಕಚೇರಿ ಬಗ್ಗೆ ಗಮನ ಹರಿಸುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರ ಅಡಿ ಬಾಪೂಜಿ ಕೇಂದ್ರಗಳು ಬರುತ್ತವೆ. ಹೀಗಾಗಿ ಮೂವರು ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸದ್ಯಕ್ಕೆ ತಡೆ: ಡಿಕೆಶಿ
ತಾಂತ್ರಿಕ ಕಾರಣಗಳ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆಹಿಡಿದಿದ್ದೇನೆ. ಇದಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಜತೆಗೂ ಚರ್ಚಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್‌ ಸಮಸ್ಯೆ ನೋಡುತ್ತಿದ್ದೀರಿ. ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್‌ಲೈನ್‌ ಹಾಗೂ ಆಫ್ಲೈನ್‌ ವ್ಯವಸ್ಥೆ ಕಲ್ಪಿಸಲಾಗುವುದು. ಈ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ’ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೆಲವರು 200- 300 ರೂ. ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಗಿ ರದ್ದಾಗುತ್ತದೆ. ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡುತ್ತಿದ್ದೇನೆ. ಈ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಲು ಹೋಗುವವರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ಟೋಲ್‌ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಬೇಕು’ ಎಂದೂ ಮನವಿ ಮಾಡಿದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.