ಸಿ.ಡಿ. ಪ್ರಕರಣ ಸಿಬಿಐಗೆ ವಹಿಸಲು ಕೋರಿ ಅರ್ಜಿ: ಸರಕಾರ, ಎಸ್ಐಟಿಗೆ ಹೈಕೋರ್ಟ್ ನೋಟಿಸ್
Team Udayavani, Apr 5, 2021, 9:33 PM IST
ಬೆಂಗಳೂರು: ಸಿ.ಡಿ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ, ಗೃಹ ಇಲಾಖೆ ಹಾಗೂ ಎಸ್ಐಟಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ವಕೀಲ ಎಸ್. ಉಮೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಎ.ಎಸ್. ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರ, ಗೃಹ ಇಲಾಖೆ, ಎಸ್ಐಟಿ ಸಹಿತ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏ.17ಕ್ಕೆ ಮುಂದೂಡಿತು. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ಎಸ್ಐಟಿಗೆ ನಿರ್ದೇಶಿಸಿತು.
ಹೇಳಿಕೆ ರದ್ದು: ನೋಟಿಸ್ ಜಾರಿ
ಯುವತಿ ಸಿಆರ್ಪಿಸಿ ಸೆಕ್ಷನ್ 164ರಡಿ ನೀಡಿರುವ ಹೇಳಿಕೆಯನ್ನು ರದ್ದುಪಡಿಸುವಂತೆ ಕೋರಿ ಆಕೆಯ ತಂದೆ ಸಲ್ಲಿಸಿರುವ ಅರ್ಜಿ ಸಂಬಂಧ ಗೃಹ ಇಲಾಖೆ ಮತ್ತು ಎಸ್ಐಟಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಇದನ್ನೂ ಓದಿ :ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ : ಶಿರಡಿ ಸಾಯಿಬಾಬಾ ದೇವಸ್ಥಾನದ ಬಾಗಿಲು ಬಂದ್
ಯುವತಿಯ ತಂದೆ ಸಲ್ಲಿಸಿರುವ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಅಶೋಕ್ ಜಿ. ನಿಜಗಣ್ಣವರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ, ಅರ್ಜಿಯ ಜತೆಗೆ ಹೇಳಿಕೆಯ ಪ್ರತಿ ದಾಖಲಿಸಿಲ್ಲ ಎಂದು ಕೋರ್ಟ್ ಕಚೇರಿ ಆಕ್ಷೇಪ ಎತ್ತಿದೆ. ಆದರೆ, ಸಿಆರ್ಪಿಸಿ ಸೆಕ್ಷನ್ 164ರಡಿ ಮ್ಯಾಜಿಸ್ಟ್ರೇಟ್ ಎದುರು ನೀಡಿರುವ ಹೇಳಿಕೆಯ ಪ್ರತಿ ನ್ಯಾಯಾಲಯದಲ್ಲಿಯೇ ಇದೆ. ಆದರೆ, ಚಾರ್ಜ್ಶೀಟ್ ಸಲ್ಲಿಕೆಯಾಗುವವರೆಗೆ ಹೇಳಿಕೆ ಪ್ರತಿಯನ್ನು ನ್ಯಾಯಾಲಯದಿಂದ ಹೊರತರಲು ಆಗುವುದಿಲ್ಲ. ಆದ್ದರಿಂದ ಈ ಹಂತದಲ್ಲಿ ಹೇಳಿಕೆಯ ಪ್ರತಿ ಸಲ್ಲಿಸಲು ವಿನಾಯಿತಿ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಅದನ್ನು ಪುರಸ್ಕರಿಸಿದ ನ್ಯಾಯಪೀಠ, ಹೇಳಿಕೆ ಸಲ್ಲಿಸಲು ತಾತ್ಕಾಲಿಕ ವಿನಾಯಿತಿ ನೀಡಿತು.
ಎಸ್ಐಟಿ ರದ್ದು ಕೋರಿ ಅರ್ಜಿ: ನೋಟಿಸ್
ಸಿ.ಡಿ. ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ವಕೀಲೆ ಗೀತಾ ಮಿಶ್ರಾ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಎ.17ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA