4 ಸ್ಥಾನದ ಮೇಲ್ಮನೆ ಚುನಾವಣೆ; ಬಿರುಸಿನ ಮತ ಎಣಿಕೆ, ಬಿಜೆಪಿಗೆ ಬಹುಮತದ ನಿರೀಕ್ಷೆ…

ಪ್ರಸ್ತುತ ಬಿಜೆಪಿ ಸದಸ್ಯ ಬಲ 36 ಇದ್ದು, ಕಾಂಗ್ರೆಸ್ 24, ಜೆಡಿಎಸ್ 7 ಸದಸ್ಯ ಬಲ ಹೊಂದಿದೆ.

Team Udayavani, Jun 15, 2022, 11:37 AM IST

4 ಸ್ಥಾನದ ಮೇಲ್ಮನೆ ಚುನಾವಣೆ; ಬಿರುಸಿನ ಮತ ಎಣಿಕೆ, ಬಿಜೆಪಿಗೆ ಬಹುಮತದ ನಿರೀಕ್ಷೆ…

ಬೆಂಗಳೂರು: ವಿಧಾನಪರಿಷತ್  ನ 2 ಶಿಕ್ಷಕರು ಹಾಗೂ 2 ಪದವೀಧರರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣೆಯ ಮತ ಎಣಿಕೆ ಬುಧವಾರ (ಜೂನ್ 15) ಬೆಳಗ್ಗೆ ಆರಂಭಗೊಂಡಿದೆ. ಸಂಜೆಯೊಳಗೆ ನಾಲ್ಕು ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಲೋಕಾಯುಕ್ತರಾಗಿ ನ್ಯಾ. ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ

ವಾಯುವ್ಯ ಪದವೀಧರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ ಮತ್ತು ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ನಡೆದಿದೆ. ವಾಯುವ್ಯ ಪದವೀಧರ, ವಾಯುವ್ಯ ಶಿಕ್ಷಕರ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತಎಣಿಕೆ ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ನಡೆಯುತ್ತಿದೆ.

ದಕ್ಷಿಣ ಪದವೀಧರ ಕ್ಷೇತ್ರದ ಮತಎಣಿಕೆ ಮೈಸೂರಿನ ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜಿನಲ್ಲಿ ನಡೆಯುತ್ತಿದೆ. ಆಡಳಿತಾರೂಢ ಬಿಜೆಪಿಯ 4 ಅಭ್ಯರ್ಥಿಗಳು, ವಿಪಕ್ಷ ಕಾಂಗ್ರೆಸ್ ನ 04 ಅಭ್ಯರ್ಥಿ, ಪಕ್ಷೇತರರು 33 ಸೇರಿದಂತೆ ಒಟ್ಟು 49 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ನಾಲ್ಕು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ವಿಧಾನಪರಿಷತ್ ನಲ್ಲಿ ಆಡಳಿತಾರೂಢ ಬಿಜೆಪಿ ಬಹುಮತ ಪಡೆಯಲಿದೆಯೇ ಎಂಬುದು ಫಲಿತಾಂಶದ ಬಳಿಕ ನಿರ್ಧಾರವಾಗಲಿದೆ. 75 ಸದಸ್ಯ ಬಲದ ವಿಧಾನಪರಿಷತ್ ನಲ್ಲಿ ಬಹುಮತಕ್ಕೆ 38 ಸದಸ್ಯಬಲದ ಅಗತ್ಯವಿದೆ. ಪ್ರಸ್ತುತ ಬಿಜೆಪಿ ಸದಸ್ಯ ಬಲ 36 ಇದ್ದು, ಕಾಂಗ್ರೆಸ್ 24, ಜೆಡಿಎಸ್ 7 ಸದಸ್ಯ ಬಲ ಹೊಂದಿದೆ.

ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಪರಿಷತ್ ನ ಹಾಲಿ ಸದಸ್ಯ ಹಣಮಂತ ನಿರಾಣಿ, ಕಾಂಗ್ರೆಸ್ ಅಭ್ಯರ್ಥಿ ಸುನೀಲ, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಂವಿ ರವಿಶಂಕರ್, ಕಾಂಗ್ರೆಸ್ ನ ಜಿ.ಎಂ ಮಧು, ಜೆಡಿಎಸ್ ಅಭ್ಯರ್ಥಿ ಎಚ್ ಕೆ ರಾಮು, ಕನ್ನಡ ಚಳವಳಿ ಪಕ್ಷದಿಂದ ವಾಟಾಳ್ ನಾಗರಾಜ್ ಕಣದಲ್ಲಿದ್ದಾರೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಬಸವರಾಜ ಹೊರಟ್ಟಿ, ಜೆಡಿಎಸ್ ನ ಶ್ರೀಶೈಲ ಗಡದಿನ್ನಿ, ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಕಣದಲ್ಲಿದ್ದು, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಅರುಣ್ ಶಹಾಪುರ, ಕಾಂಗ್ರೆಸ್ ನ ಪ್ರಕಾಶ್ ಹುಕ್ಕೇರಿ, ಜೆಡಿಎಸ್ ನ ಚಂದ್ರಶೇಖರ್ ಲೋಣಿ ಅಖಾಡದಲ್ಲಿದ್ದಾರೆ.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.