ಆರೋಗ್ಯದಲ್ಲಿ ಏರುಪೇರು: ಮಾಜಿ ಸಚಿವ ರೋಷನ್ ಬೇಗ್ ಆಸ್ಪತ್ರೆಗೆ ದಾಖಲು
Team Udayavani, Nov 26, 2020, 9:39 AM IST
ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ರೋಷನ್ ಬೇಗ್ ಅವರನ್ನು ವಿಶೇಷ ನ್ಯಾಯಾಲಯ ಸಿಬಿಐ ವಶಕ್ಕೆ ಒಪ್ಪಿಸಲು ಆದೇಶ ನೀಡಿತ್ತು.
ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ಬೇಗ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಇದರಿಂದ ಸಿಬಿಐ ಅಧಿಕಾರಿಗಳು ಬೇಗ್ ಅವರನ್ನು ತಮ್ಮ ವಶಕ್ಕೆ ಪಡೆಯಲು ತೆರಳಿದರೂ ಬರಿಗೈಯಲ್ಲಿ ಬರುವಂತಾಗಿದೆ.
ಇದನ್ನೂ ಓದಿ:ಭೀಕರ ಅಪಘಾತ: 41ಮಂದಿ ದಾರುಣ ಸಾವು, ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಮೃತದೇಹಗಳು
ಸದ್ಯ ಅವರ ಅರೋಗ್ಯ ಸ್ಥಿತಿಗತಿಗಳ ಕುರಿತು ಏನನ್ನೂ ಹೇಳದ ವೈದ್ಯಾಧಿಕಾರಿಗಳು ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದಷ್ಟೇ ಹೇಳಿದ್ದಾರೆ.
ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದ ಬಳಿಕವೇ ಸಿಬಿಐ ಅಧಿಕಾರಿಗಳು ತಮ್ಮ ತನಿಖೆಯನ್ನು ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್