ಮದುವೆ ಆಗುವವರಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ: ಸಪ್ತಪದಿ ಸರಳ ವಿವಾಹಕ್ಕೆ ಅರ್ಜಿ ಅಹ್ವಾನ
Team Udayavani, Jun 20, 2020, 4:37 PM IST
ಬೆಂಗಳೂರು : ದೇಶದಲ್ಲಿ ಕೋವಿಡ್ ಸೋಂಕಿನಿಂದಾಗಿ ಬಹುತೇಕ ನಿಗದಿಯಾಗಿದ್ದ ಮದುವೆಗಳನ್ನು ಮುಂದೂಡಲ್ಪಟ್ಟಿವೆ, ಅದರ ಜೊತೆಗೆ ಸರಕಾರದಿಂದ ನಡೆಸಲ್ಪಡುವ ಸಪ್ತಪದಿ ಸರಳ ಸಾಮೂಹಿಕ ವಿವಾಹಗಳನ್ನು ಮುಂದೂಡಲಾಯಿತು. ಆದರೆ ಸರಕಾರ ಈಗ ಸಪ್ತಪದಿ ಸರಳ ಸಾಮೂಹಿಕ ವಿವಾಹಕ್ಕಾಗಿ ಮತ್ತೆ ಅರ್ಜಿಗಳನ್ನು ಆಹ್ವಾನಿಸಿದೆ.
ಸರಕಾರ ಈ ಕುರಿತಾಗಿ ಏಳು ಹಂತಗಳಲ್ಲಿ ಮದುವೆ ನಡೆಸಲು ಚಿಂತಿಸಿದೆ ಅದರಂತೆ ಜುಲೈ ತಿಂಗಳ 23, 26 ಮತ್ತು 29 ರಂದು ಮೂರು ಹಂತದಲ್ಲಿ ನಡೆದರೆ ಆಗಸ್ಟ್ ತಿಂಗಳ 6,10, 14 ಮತ್ತು 17 ತಾರೀಕಿನಂದು ಮತ್ತೆ ನಾಲ್ಕು ಹಂತದಲ್ಲಿ ಸಾಮೂಹಿಕ ಮದುವೆ ನಡೆಯಲಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಶನಿವಾರ ಅಧಿಕೃತ ಆದೇಶವನ್ನು ಹೊರಡಿಸಿದೆ.
ಏನೆಲ್ಲಾ ಸಿಗಲಿದೆ :
ಮುಜರಾಯಿ ಇಲಾಖೆಯಿಂದ ನಡೆಯುವ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವ ವಧುವಿಗೆ 8 ಗ್ರಾಂ ಚಿನ್ನದ ಮಾಂಗಲ್ಯ ಸೇರಿ, ವಧೂವರರಿಗೆ ವಿವಾಹಕ್ಕೆ ಅಗತ್ಯವಿರುವ ವಸ್ತುಗಳ ಖರೀದಿಗಾಗಿ 55,000 ರೂ.ಗಳನ್ನು ಸಂಬಂಧಿಸಿದ ದೇವಾಲಯದಿಂದಲೇ ಭರಿಸಲಾಗುತ್ತದೆ.
ವರನಿಗೆ ಪಂಚೆ – ಶರ್ಟ್ ಹಾಗೂ ಶಲ್ಯ ನೀಡಲಾಗುತ್ತದೆ. ವಧುವಿಗೆ ಧಾರೆ ಸೀರೆ, ಚಿನ್ನದ ತಾಳಿ ಮತ್ತು ಎರಡು ಚಿನ್ನದ ಗುಂಡು ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?