Karnataka: ಶಿಕ್ಷಕರ ವರ್ಗಾವಣೆ- ಕಾಲಾವಕಾಶ
Team Udayavani, Jun 23, 2023, 7:16 AM IST
ಬೆಂಗಳೂರು: ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣ ಕೌನ್ಸೆಲಿಂಗ್ನಲ್ಲಿ ಸ್ಥಳ ನಿಯುಕ್ತಿಗೊಂಡ ಶಿಕ್ಷಕರಿಗೆ ಮಾತ್ರ ಆನ್ಲೈನ್ನಲ್ಲಿ ಹೊಸದಾಗಿ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಜೂನ್ 26ರ ವರೆಗೆ ಸಮಯಾವಕಾಶ ನೀಡಲಾಗಿದೆ.
ಹೊಸದಾಗಿ ಸ್ಥಳ ನಿಯುಕ್ತಿಗೊಂಡ ಹೆಚ್ಚುವರಿ ಶಿಕ್ಷಕರಿಗೆ ಆದ್ಯತಾ ಕ್ಲೇಮ್ ಮಾಡಿಕೊಳ್ಳಲು ಇದು ಕೊನೆಯ ಅವಕಾಶ ಎಂದು ಶಾಲಾ ಶಿಕ್ಷಣ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ಸ್ವೀಕೃತವಾದ ಅರ್ಜಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಅಂಗೀಕರಿಸಲು ಅಥವಾ ತಿರಸ್ಕರಿಸಲು ಜೂನ್ 27 ಕೊನೆದ ದಿನವಾಗಿದೆ. ಅನಂತರ ಯಾವುದೇ ಬದಲಾವಣೆಗೆ ಅವಕಾಶವಿಲ್ಲ ಎಂದು ಶಾಲಾ ಶಿಕ್ಷಣ ಆಯುಕ್ತ ಆರ್. ವಿಶಾಲ್ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
7,450 ಶಿಕ್ಷಕರು ಹೊಸ ಸ್ಥಳಕ್ಕೆ ನಿಯುಕ್ತಿ
ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಈವರೆಗೆ ಒಟ್ಟು 7,450 ಶಿಕ್ಷಕರು ಹೊಸ ಸ್ಥಳಕ್ಕೆ ನಿಯುಕ್ತಿಗೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಪ್ರಾಥಮಿಕ ಶಾಲೆಯಲ್ಲಿ 1,077 ಮುಖ್ಯ ಶಿಕ್ಷಕರು, 4,296 ಸಹಾಯಕ ಶಿಕ್ಷಕರು, 52 ಕಲಾ ಶಿಕ್ಷಕರು ಮತ್ತು 771 ದೈಹಿಕ ಶಿಕ್ಷಕರು ಸ್ಥಳ ನಿಯುಕ್ತಿಗೊಂಡಿದ್ದಾರೆ. ಹೈಸ್ಕೂಲಿನಲ್ಲಿ 537 ಮುಖ್ಯ ಶಿಕ್ಷಕರು, 710 ಕಲಾ ಶಿಕ್ಷಕರು ಮತ್ತು ಮೂವರು ದೈಹಿಕ ಶಿಕ್ಷಕರು ಸ್ಥಳ ನಿಯುಕ್ತಿಗೊಂಡಿದ್ದಾರೆ.
ಅಕ್ರಮದ ಆರೋಪ
ಬೆಂಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಲ್ಲಿ ಲೋಪಗಳಾಗಿವೆ. ಅಧಿಕಾರಿಗಳು ತಮ್ಮಿಚ್ಛೆಯಂತೆ ಶಿಕ್ಷಕರ ವರ್ಗಾವಣೆ ಮಾಡಿದ್ದಾರೆ ಎಂದು ಹಲವು ಶಿಕ್ಷಕರು ದೂರುತ್ತಿದ್ದಾರೆ. ನಗರದಲ್ಲಿದ್ದ ಹೆಚ್ಚುವರಿ ಶಿಕ್ಷಕರನ್ನು ಮತ್ತೆ ನಗರದೊಳಗೆ ವರ್ಗ ಮಾಡಲಾಗಿದೆ. ಇದರಿಂದ ಹಳ್ಳಿ, ಪಟ್ಟಣಗಳಲ್ಲಿ ಸೇವೆ ಸಲ್ಲಿಸಿದ್ದ ಶಿಕ್ಷಕರಿಗೆ ನಗರಕ್ಕೆ ವರ್ಗವಾಗುವ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ. ಇದರಲ್ಲಿ ಅಧಿಕಾರಿಗಳ ಕೈವಾಡವಿದೆ ಎಂಬ ಆರೋಪವನ್ನು ಶಿಕ್ಷಕರು ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ