ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ದಚಿತ್ರ ಆಯ್ಕೆ: ವಿಶೇಷತೆಗಳೇನು ನೋಡಿ


Team Udayavani, Jan 22, 2022, 5:39 PM IST

1-dads

ನವದೆಹಲಿ : ಈ ಬಾರಿಯ ಜನವರಿ 26 ರ ಗಣರಾಜ್ಯೋತ್ಸವ ದಿನಾಚರಣೆಗೆ ಕರ್ನಾಟಕದಿಂದ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ಸ್ತಬ್ದಚಿತ್ರ ಆಯ್ಕೆಯಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ ಪಿ ಎಸ್ ಹರ್ಷ ಅವರು ತಿಳಿಸಿದ್ದಾರೆ.

ಈ ಬಾರಿ ಆಯ್ಕೆಯಾದ 12 ರಾಜ್ಯಗಳ ಸ್ತಬ್ದಚಿತ್ರಗಳಲ್ಲಿ ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಏಕೈಕ ಸ್ತಬ್ದಚಿತ್ರ ನಮ್ಮ ಕರ್ನಾಟಕದ್ದಾಗಿದೆ. , ರಾಜ್ಯದ ಸ್ತಬ್ದಚಿತ್ರ ಸತತವಾಗಿ ಹದಿಮೂರನೇ ಬಾರಿಗೆ ಆಯ್ಕೆಯಾಗುತ್ತಿದೆ ಎಂಬುದು ದಾಖಲಾರ್ಹ ಸಂಗತಿಯಾಗಿದೆ.

ಕೌಶಲ್ಯದಿಂದ ತಯಾರಿಸಿದ ಮಡಿಕೆ, ಸೂಕ್ಷ್ಮವಾಗಿ ಕೆತ್ತನೆ ಮಾಡಿದ ಶ್ರೀಗಂಧದ ಚಿಕಣಿ (ಮಿನಿಯೇಚರ್ಸ್ ಅಥವಾ ಕಿರು ಮಾದರಿ ವಸ್ತುಗಳು), ಕೈಮಗ್ಗದ ಸೀರೆಗಳು, ಕೈಯಿಂದಲೇ ವಿಶಿಷ್ಠ ಕಲಾಕೃತಿಗಳೂ ಒಳಗೊಂಡಂತೆ 16 ಕರಕುಶಲ ವಸ್ತುಗಳು ಭೌಗೋಳಿಕ ಸೂಚಿ ಸಂಕೇತದ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕವನ್ನು ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂದೇ ಕರೆಯುತ್ತಾರೆ.

ಚೆನ್ನಪಟ್ಟಣ ಮತ್ತು ಕಿನ್ನಾಳ ಮರದ ಕೆತ್ತನೆ ವಸ್ತುಗಳು ( ಇನ್‍ಲೇ ಕಾರ್ವಿಂಗ್ಸ್ ), ಕಂಚಿನ ಪ್ರತಿಮೆಗಳು, ಮೆರುಗೆಣ್ಣೆಯ ಹಾಗೂ ಬಿದರಿಯ ಕಲಾಕೃತಿಗಳು ಕರ್ನಾಟಕದ ಪ್ರಮುಖ ಕಲೆಗಳಾಗಿವೆ.

ಟಿರ್ರಾಕೋಟ ಅತ್ಯಂತ ಹಳೆಯ ಕಲೆಯಾಗಿದೆ. ವಿಜಯನಗರದ ಅರಸರು ಪೋಷಿಸುತ್ತಿದ್ದ ಕಿನ್ನಾಳದ ಮೆರುಗೆಣ್ಣೆಯ ಕಲಾಕೃತಿಗಳು, ಕರ್ನಾಟಕದ ಜೊತೆಗೆ ಅವಿನಾಭಾವ ಸಂಬಂಧ ಹೊಂದಿರುವ ಮತ್ತು ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಶ್ರೀಗಂಧದ ಕಲಾಕೃತಿಗಳು ಹಾಗೂ ದಂತದ ಕೆತ್ತನೆಯ ಕಲೆ ರಾಜ್ಯಕ್ಕೇ ವಿಶಿಷ್ಠ ಎನಿಸಿದೆ.

ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮವು ಇ-ವಾಣಿಜ್ಯ ನಿಗಮೀಕೃತ ಸಂಸ್ಥೆಯ ಸಹಯೋಗದೊಂದಿಗೆ 55,000 ಕಲಾಕಾರರಿಗೆ ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಿದೆ.

ಸ್ವಾತಂತ್ರ್ಯ ಹೋರಾಟಗಾರರು, ಅಭಿನೇತ್ರಿ., ಸಮಾಜ ಸೇವಕರು, ಕಲಾ ಉತ್ತೇಜಕರೂ ಎಲ್ಲವೂ ಆಗಿದ್ದ ಕರ್ನಾಟಕದವರೇ ಆದ ಕಮಲಾದೇವಿ ಚಟ್ಟೋಪಾಧ್ಯಾಯ ಅವರು ನಶಿಸಿಹೋಗುತ್ತಿದ್ದ ಪಾರಂಪಾರಿಕ ಕರಕುಶಲ ವಸ್ತುಗಳ ತಯಾರಿಕಾ ಕಲೆಯನ್ನು ಉಳಿಸಲು ಪ್ರಮುಖ ಪಾತ್ರ ವಹಿಸಿದ್ದರು ಎಂಬುದು ಗಮನಾರ್ಹ.

ಸ್ತಬ್ದಚಿತ್ರದಲ್ಲಿ ಏನಿದೆ ?

ಕರ್ನಾಟಕದ ಸ್ತಬ್ದಚಿತ್ರದ ಮುಂಭಾಗದಲ್ಲಿ ಮೈಸೂರಿನ ಬೀಟೆ ಮರ ಹಾಗೂ ದಂತದ ಕಸೂತಿ ಕೆತ್ತನೆಯ ಬೃಹದಾಕಾರದ ಆನೆಯ ಕಲಾಕೃತಿ ಹಾಗೂ ಈ ಕಲಾಕೃತಿಯ ಕೆಳಗಿನ ಭಾಗದಲ್ಲಿ ಯಕ್ಷಗಾನ ಬೊಂಬೆಯಾಟದ ಚಿತ್ರಣವಿದೆ. ಜೊತೆಗೆ, ಗಂಜೀಫಾ ಕಲಾಕೃತಿಗಳಿವೆ.

ಸ್ತಬ್ದ ಚಿತ್ರದ ಮಧ್ಯದಲ್ಲಿ ಕಣ್ಮನ ಸೆಳೆಯುವ ಬಿದರಿ ಕಲೆಯಲ್ಲಿ ರೂಪಿಸಿರುವ ದೊಡ್ಡ ಪ್ರಮಾಣದ ಹೂಜಿ. ಹೂಜಿಯ ಇಕ್ಕೆಲೆಗಳಲ್ಲಿ ಕರಾವಳಿಯ ವೈಶಿಷ್ಠ್ಯವನ್ನು ಬಿಂಬಿಸುವ ಭೂತಾರಾಧನೆಯ ಮುಖವಾಡವನ್ನು ಹೊತ್ತ ಲೋಹದ ಕಲಾಕೃತಿಗಳಿವೆ. ಹೂಜಿಯ ಹಿಂಬದಿಯಲ್ಲಿ ಬಿದರಿ ಕಲೆ ಬಳಸಿ ಸಿದ್ದಪಡಿಸಿರುವ ನವಿಲುಗಳಿವೆ.

ಅಲ್ಲದೆ, ಮಧ್ಯ ಭಾಗದ ಹಿಂಬಂದಿಯಲ್ಲಿ ಕಿನ್ನಾಳದ ವೈಶಿಷ್ಠಪೂರ್ಣ ಕಲೆಯಲ್ಲಿ ಮೇಳೈಸಿದ ಬೃಹತ್ ಗಾತ್ರದ ಆಂಜನೇಯ ಸ್ವಾಮಿಯ ಮೂರ್ತಿ ಸ್ತಬ್ದಚಿತ್ರದ ಕೇಂದ್ರ ಬಿಂದುವಿನಂತೆ ಕಂಗೊಳಿಸುತ್ತಿದೆ. ಆಂಜನೇಯ ಸ್ವಾಮಿಯ ಮೂರ್ತಿಯ ಅಕ್ಕ-ಪಕ್ಕದಲ್ಲಿ ಚೆನ್ನಪಟ್ಟಣದ ಬೊಂಬೆಗಳು, ಮೆರುಗೆಣ್ಣೆಯ ಆಟಿಕೆಗಳು, ನವಲಗುಂದ ಧರಿ ( ಜಮಖಾನೆ ), ಶ್ರೀಗಂಧ ಮರದ ಕೆತ್ತನೆಯ ಹಾಗೂ ಮಣ್ಣಿನ ಕಲಾಕೃತಿಗಳಿವೆ.

ತದನಂತರ, ಸ್ತಬ್ದಚಿತ್ರದ ಕೊನೆಯಲ್ಲಿ ಪಾರಂಪರಿಕ ಕರಕುಶಲ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಿ ಪ್ರೋತ್ಸಾಹಿಸಿದ ಕಲಾಲೋಕದ ಮಹಾ ಮಾತೆ, ಸ್ವಾತಂತ್ರ್ಯ ಹೋರಾಟಗಾರ್ತಿ ಹಾಗೂ ಕನ್ನಡತಿ ಕಮಲಾದೇವಿ ಚಟ್ಟೋಪಾದ್ಯಾಯ ಅವರು ಗಂಧದ ಪೆಟ್ಟಿಗೆ, ನವಿಲಿನಾಕಾರದ ದೀಪದ ಕಲಶಗಳು, ಸಂಡೂರಿನ ಬಾಳೆ ನಾರಿನ ಚೀಲಗಳು ಹೀಗೆ ವಿವಿಧ ಕರಕುಶಲ ವಸ್ತುಗಳನ್ನು ಬಾಗಿನ ರೂಪದಲ್ಲಿ ನೀಡುತ್ತಿರುವ ದೃಶ್ಯಾವಳಿಯ ದೊಡ್ಡ ಪ್ರತಿಮೆ ಇದೆ.

ಅದೇ ಭಾಗದಲ್ಲಿ ಕರ್ನಾಟಕದ ಕೈಮಗ್ಗದ ಹಿರಿಮೆಯ ಇಳಕಲ್ ಕಸೂತಿ ಸೀರೆಗಳು, ಮೊಳಕಾಲ್ಮೋರು ಸೀರೆಗಳು ಹಾಗೂ ಮೈಸೂರು ರೇಷ್ಮೆ ಸೀರೆಗಳು, ಕಿನ್ನಾಳ ಕಲೆಯಲ್ಲಿ ತಯಾರಿಸಿದ ಬಾಲೆಯರ ಕಲಾಕೃತಿಗಳು, ಪಶ್ಚಿಮ ಘಟ್ಟಗಳಲ್ಲಿ ಲಭ್ಯವಿರುವ ಬೆತ್ತ, ಬಿದಿರು, ಕಾಡುಬಳ್ಳಿಗಳು ಹಾಗೂ ತಾಟಿನಿಂಗು ಮರದ ಎಲೆಯಿಂದ ತಯಾರಿಸಿದ ಬಗೆ ಬಗೆಯ ಬುಟ್ಟಿಗಳೂ ಕೂಡಾ ಸ್ತಬ್ದಚಿತ್ರಕ್ಕೆ ವಿಶೇಷ ಮೆರುಗನ್ನು ನೀಡಿದೆ.

ಸ್ತಬ್ದಚಿತ್ರದ ಹಿಂದೆ !

ಈ ಬಾರಿಯ ಸ್ತಬ್ದಚಿತ್ರ ನಿರ್ಮಾಣ ಕಾರ್ಯದಲ್ಲಿ ಹೆಸರಾಂತ ಕಲಾ ನಿರ್ದೇಶಕ ಶಶಿಧರ್ ಅಡಪ ನೇತೃತ್ವದ ಪ್ರತಿರೂಪಿ ಸಂಸ್ಥೆಯ ಒಂದು ನೂರಕ್ಕೂ ಹೆಚ್ಚು ಕಲಾವಿದರು, ಸುಪ್ರಸಿದ್ಧ ಸಂಗೀತ ನಿರ್ದೇಶಕ ಪ್ರವೀಣ್ ದಯಾನಂದ ರಾವ್ ಮತ್ತು ತಂಡ ಹಾಗೂ ಜಾನಪದ ತಜ್ಞ ಡಾ ರಾಧಾಕೃಷ್ಣ ಉರಾಳ ನೇತೃತ್ವದ ಕಲಾ ಕದಂಬ ಕಲಾ ಕೇಂದ್ರದ ತಂಡವೂ ಶ್ರಮಿಸಿದೆ.

ಸುವರ್ಣ ವರ್ಷ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹರ್ಷ

ರಾಷ್ಟ್ರದ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಸುಸಂದರ್ಭದಲ್ಲಿ ಸ್ತಬ್ದಚಿತ್ರ ಪ್ರದರ್ಶನದಲ್ಲಿ ವಿಶಾಲ ಮೈಸೂರು ರಾಜ್ಯ ( ಕರ್ನಾಟಕ ರಾಜ್ಯವು ) ಪಾಲ್ಗೊಳ್ಳಲು ಮೊದಲು ಪ್ರಾರಂಭಿಸಿದ್ದು 1972 ರಲ್ಲಿ !

ಅಂದಿನ ಮುಖ್ಯಮಂತ್ರಿ ಡಿ ದೇವರಾಜ ಅರಸ್ ಅವರು ಈ ಜವಾಬ್ದಾರಿಯನ್ನು ಅಂದಿನ ವಾರ್ತಾ ಮತ್ತು ಪ್ರಚಾರ ಇಲಾಖೆಗೆ ವಹಿಸಿದ್ದರು. ಅಂದಿನಿಂದ ಇಂದಿನವರೆಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೇ ರಾಜ್ಯ ಸರ್ಕಾರದ ಪರವಾಗಿ ಸ್ತಬ್ದಚಿತ್ರ ನಿರ್ಮಾಣ ಹಾಗೂ ಪ್ರದರ್ಶನದ ಕಾರ್ಯವನ್ನು ನಿರ್ವಹಿಸುತ್ತಲಿದೆ.

ಇದೀಗ ಭಾರತ ಸ್ವಾತಂತ್ರ್ಯದ ಅಮೃತ ವರ್ಷ ಮಹೋತ್ಸವ ವರ್ಷದಲ್ಲಿ ನವದೆಹಲಿಯಲ್ಲಿನ ಗಣರಾಜ್ಯೋತ್ಸವ ದಿನಾಚರಣೆಯ ಸಂಭ್ರಮದಲ್ಲಿ ಕರ್ನಾಟಕದ ಪಾಲ್ಗೊಳ್ಳುವಿಕೆ 50 ನೇ ವರ್ಷ ವರ್ಷದ್ದಾಗಿದೆ.

ಅಂತೆಯೇ, ರಾಜ್ಯದ ಪರವಾಗಿ ಸ್ತಬ್ದಚಿತ್ರ ನಿರ್ಮಾಣ ಮತ್ತು ಪ್ರದರ್ಶನ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾಯಕ ಕೂಡಾ ಸುವರ್ಣ ವರ್ಷ ಪೂರೈಸುತ್ತಿದೆ ಎಂಬುದು ಹರ್ಷದಾಯಕ ಸಂಗತಿಯಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.