ಕೆಲಸದ ಒತ್ತಡ : ನೇಣುಬಿಗಿದುಕೊಂಡು ಕೇರಳ ಕೆನರಾ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ
Team Udayavani, Apr 10, 2021, 8:40 PM IST
ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಕುಥುಪರಂಬದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯೊಂದರ ವ್ಯವಸ್ಥಾಪಕಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತನಗೆ ಕೆಲಸದ ಒತ್ತಡ ತಡೆಯಲಾಗುತ್ತಿಲ್ಲ, ಆದ್ದರಿಂದ ಹೀಗೆ ಮಾಡಿಕೊಂಡಿದ್ದೇನೆ ಎಂದು 38 ವರ್ಷದ ಕೆ.ಸ್ವಪ್ನಾ ತಮ್ಮ ಮರಣಪತ್ರದಲ್ಲಿ ತಿಳಿಸಿದ್ದಾರೆ.
ಈ ಹೃದಯವಿದ್ರಾವಕ ಘಟನೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಕೆನರಾ ಬ್ಯಾಂಕ್ನ ಥೊಕ್ಕಿಲಂಗಡಿ ಶಾಖೆಯಲ್ಲಿ ಶುಕ್ರವಾರ ಬೆಳಗ್ಗೆ ಸ್ವಪ್ನಾ ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ. ಕೂಡಲೇ ಆಸ್ಪತ್ರೆಗೆ ಸೇರಿಸಿದರೂ ಉಪಯೋಗವಾಗಿಲ್ಲ. ಮೃತ ಮಹಿಳೆಗೆ ಇಬ್ಬರು ಮಕ್ಕಳಿದ್ದಾರೆ. ಕಳೆದವರ್ಷ ಸೆಪ್ಟೆಂಬರ್ನಲ್ಲಿ ಥೊಕ್ಕಿಲಂಗಡಿ ಶಾಖೆಗೆ ಅವರು ವರ್ಗಾವಣೆಗೊಂಡಿದ್ದರು.
ಇದನ್ನೂ ಓದಿ :ಮುಷ್ಕರ ವಿಚಾರದಲ್ಲಿ ರಾಜಕೀಯ ಬೇಡ : ವಿರೋಧ ಪಕ್ಷಗಳಿಗೆ ಡಿಸಿಎಂ ಕಿವಿಮಾತು