ಚುನಾವಣೆಗೆ ಸೀಟು ಸಿಗದ ಕಾರಣ ತಲೆ ಬೋಳಿಸಿಕೊಂಡ ಕಾಂಗ್ರೆಸ್ ಮುಖ್ಯಸ್ಥೆ!
ಲತಿಕಾ ಸುಭಾಶ್
Team Udayavani, Mar 14, 2021, 8:18 PM IST
ತಿರುವನಂತಪುರ : ಕಾಂಗ್ರೆಸ್ ನಿಂದ ಸೀಟು ಸಿಗಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕಿಯೊಬ್ಬರು ತಲೆ ಬೋಳಿಸಿಕೊಂಡು ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ. ಕೇರಳದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಿಕಾ ಸುಭಾಶ್ ತಲೆ ಬೋಳಿಸಿಕೊಂಡು ತಮ್ಮ ಸ್ಥಾನವನ್ನು ತ್ಯಜಿಸುವ ಮೂಲಕ ಕಾಂಗ್ರೆಸ್ ಪಕ್ಷದ ಮೇಲೆ ಗರಂ ಆಗಿದ್ದಾರೆ.
ಕೇರಳದಲ್ಲಿ ವಿಧಾನ ಸಭಾ ಚುನಾವಣೆ ಸಮೀಪಿಸಿದ್ದು, ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದೆ. ಈ ಪಟ್ಟಿಯಲ್ಲಿ ಲತಿಕಾ ಹೆಸರು ಇಲ್ಲದ ಕಾರಣ ಕಾಂಗ್ರೆಸ್ ಕಚೇರಿ ಮುಂದೆಯೇ ತಲೆ ಕೂದಲನ್ನು ಬೋಳಿಸಿಕೊಂಡಿದ್ದಾರೆ.
ತಿರುವನಂತಪುರಂನ ಪಕ್ಷದ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಲತಿಕಾ, ರಾಜ್ಯ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾದ ಮುಲ್ಲಪ್ಪಲ್ಲಿ ರಾಮಚಂದ್ರನ್ ನವದೆಹಲಿಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಈ ಪಟ್ಟಿಯಲ್ಲಿ ಮಹಿಳಾ ಅಭ್ಯರ್ಥಿಗಳ ಕೊರತೆ ಇದೆ ಎಂದಿದ್ದಾರೆ.
Kerala Mahila Congress chief Lathika Subhash gets her head tonsured in front of the party office in Thiruvananthapuram in protest after being denied the party ticket for Assembly elections.
“I am not joining any party but I’ll resign from my post,” she says. pic.twitter.com/FWme31IEdU
— ANI (@ANI) March 14, 2021
ಚುನಾವಣೆ ಪ್ರಚಾರಕ್ಕಾಗಿ ಓಡಾಡುತ್ತಿದ್ದ ಮಹಿಳಾ ನಾಯಕಿಯರನ್ನು ಅಭ್ಯರ್ಥಿಗಳಾಗಿ ಪರಿಗಣಿಸಿಲ್ಲ. ನಮ್ಮನ್ನು ಪರಿಗಣಿಸದೇ ಇರುವುದು ನೋವು ತಂದಿದೆ ಎಂದು ಲತಿಕಾ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮಹಿಳೆಯರಿಗಾಗಿ 20 ಸಿಟುಗಳನ್ನು ಕೇಳಿದ್ದೆವು ಎಂದು ತಿಳಿಸಿದ್ದಾರೆ. ಹಾಗೂ ಮುಂದೆ ನಾನು ಯಾವ ಪಕ್ಷಕ್ಕೂ ಸೇರುವುದಿಲ್ಲ ಎಂದು ನಿರ್ಧಾರ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ