ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿಹೋದ ಕೇರಳ;ಸಾವಿನ ಸಂಖ್ಯೆ 27ಕ್ಕೆ ಏರಿಕೆ, CM ತುರ್ತು ಸಭೆ
ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ
Team Udayavani, Oct 18, 2021, 3:24 PM IST
ತಿರುವನಂತಪುರಂ: ಭಾರೀ ಮಳೆ, ಪ್ರವಾಹದ ಪರಿಣಾಮ ಕೇರಳದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 27ಕ್ಕೆ ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ(ಅಕ್ಟೋಬರ್ 18) ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತುರ್ತು ಸಭೆಯನ್ನು ಕರೆದು ಮಳೆ, ಪ್ರವಾಹ ಪೀಡಿತ ಪ್ರದೇಶಗಳ ಕುರಿತ ಮಾಹಿತಿ ಪಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ನಟಿ ನೀನಾ ಗುಪ್ತಾಗೆ ಬಾಲ್ಯದಲ್ಲಿ ವೈದ್ಯನಿಂದ ಲೈಂಗಿಕ ಕಿರುಕುಳ
ಮಳೆ, ಪ್ರವಾಹದಿಂದ ರಾಜ್ಯದ ದಕ್ಷಿಣ ಭಾಗದ ಕೊಟ್ಟಾಯಂನಲ್ಲಿ 13 ಮಂದಿ, ಇಡುಕ್ಕಿಯಲ್ಲಿ 9 ಮಂದಿ ಸೇರಿ 22 ಜನರು ಸಾವನ್ನಪ್ಪಿದ್ದಾರೆ. ಇನ್ನುಳಿದ ಐವರು ವಿವಿಧೆಡೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಭಾರೀ ಮಳೆಯಿಂದಾಗಿ ರಾಜ್ಯದ ವಿವಿಧೆಡೆ ಅಣೆಕಟ್ಟುಗಳ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಈ ಕುರಿತು ಕೇರಳ ಸರ್ಕಾರ ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶ ಜಾರಿಗೊಳಿಸಿದೆ. ಅಲ್ಲದೇ ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಏಷ್ಯಾದಲ್ಲಿಯೇ ಎತ್ತರವಾಗಿರುವ ಅಣೆಕಟ್ಟುಗಳಲ್ಲಿ ಇಡುಕ್ಕಿಯೂ ಸೇರಿದ್ದು, ಸೋಮವಾರ(ಅಕ್ಟೋಬರ್ 18) ಅಣೆಕಟ್ಟಿನಲ್ಲಿ ನೀರಿನ ಮಟ್ಟ 2,396.96 ಅಡಿಗೆ ಏರಿಕೆಯಾಗಿದೆ. ಈ ಬಗ್ಗೆ ಆರೆಂಜ್ ಅಲರ್ಟ್ ಕೂಡಾ ನೀಡಲಾಗಿದೆ. ಇಡುಕ್ಕಿ ಜಲಾಶಯದ ಪೂರ್ಣ ಪ್ರಮಾಣದ ನೀರಿನ ಮಟ್ಟ 2,403 ಅಡಿಗಳಷ್ಟಾಗಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ