ಕೇರಳದ ಮುನ್ನಾರ್ ನಲ್ಲಿ ಭೂಕುಸಿತ ಸಾವಿನ ಸಂಖ್ಯೆ 27ಕ್ಕೆ ಏರಿಕೆ! ಮುಂದುವರಿದ ಕಾರ್ಯಾಚರಣೆ
Team Udayavani, Aug 8, 2020, 10:22 PM IST
ಕೇರಳ: ಧಾರಾಕಾರ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೂಕುಸಿತದಲ್ಲಿ ಇದುವರೆಗೆ 27 ಮಂದಿ ಸಾವನ್ನಪ್ಪಿದ್ದು.ಮಳೆಯ ನಡುವೆಯೂ ನಾಪತ್ತೆಯಾದವರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಪ್ರವಾಸಿ ಪಟ್ಟಣ ಮುನ್ನಾರ್ನಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಜಿಲ್ಲೆಯ ರಾಜಮಲೈ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಭೂಕುಸಿತ ಸಂಭವಿಸಿದ್ದು
ಘಟನಾ ಸ್ಥಳದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುವ 70 ರಿಂದ 80 ಜನರು ವಾಸಿಸುತ್ತಿದ್ದರು ಎನ್ನಲಾಗಿದ್ದು ಭೂಕುಸಿತ ಸಮಯದಲ್ಲಿ ಎಷ್ಟು ಮಂದಿ ಮಣ್ಣಿನ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಇನ್ನು ಸ್ಪಷ್ಟವಾಗಿಲ್ಲ
ರಕ್ಷಣಾ ತಂಡಗಳು ನಿರಂತರವಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು ಕೇರಳ ಸರಕಾರವು ರಕ್ಷಣೆಗೆ ಬೇಕಾದ ಎಲ್ಲಾ ನೆರವನ್ನು ನೀಡಲು ಮುಂದಾಗಿದೆ.