ಬಂಗಾಳದಲ್ಲಿ “The Kerala Story” ಚಿತ್ರಕ್ಕೆ ಬೆದರಿಕೆ
Team Udayavani, May 26, 2023, 7:44 AM IST
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ “ದಿ ಕೇರಳ ಸ್ಟೋರಿ” ಸಿನಿಮಾಗೆ ವಿಧಿಸಿದ್ದ ನಿಷೇಧವನ್ನು ಸುಪ್ರೀಂ ಕೋರ್ಟ್ ತೆರುವುಗೊಳಿಸಿದೆ. ಆದರೆ ಅಲ್ಲಿನ ಚಿತ್ರಮಂದಿರದ ಮಾಲೀಕರಿಗೆ ಪೊಲೀಸರು ಮತ್ತು ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದು, ಚಿತ್ರ ಪ್ರದರ್ಶಿಸದಂತೆ ತಡೆಯುತ್ತಿದ್ದಾರೆ ಎಂದು ಸಿನಿಮಾ ನಿರ್ಮಾಪಕ ವಿಫುಲ್ ಶಾ ಆರೋಪಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ನ ಆದೇಶದ ಹೊರತಾಗಿಯೂ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಚಿತ್ರ ಪ್ರದರ್ಶನಗೊಳುತ್ತಿಲ್ಲ. ಸಿನಿಮಾ ಪ್ರದರ್ಶಿಸಿದರೆ ಚಿತ್ರ ಮಂದಿರದ ಪರವಾನಗಿಯನ್ನು ನವೀಕರಣ ಮಾಡುವುದಿಲ್ಲ ಎಂದು ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ. ಅಲ್ಲದೇ ರೌಡಿಗಳು ಬಂದು ಚಿತ್ರಮಂದಿರಗಳ ಮುಂದೆ ಗಲಾಟೆ ಮಾಡಿದರೆ ರಕ್ಷಣೆ ನೀಡುವುದಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ಇದರಿಂದ ಮಾಲೀಕರು ಸಿನಿಮಾ ಪ್ರದರ್ಶನಕ್ಕೆ ಮುಂದಾಗುತ್ತಿಲ್ಲ” ಎಂದು ಅಳಲು ತೋಡಿಕೊಂಡಿದ್ದಾರೆ. ಮಮತಾ ಬ್ಯಾನರ್ಜಿ ಸರ್ಕಾರ ಮೇ 8ರಂದು ಸಿನಿಮಾ ಮೇಲೆ ನಿಷೇಧ ಹೇರಿತ್ತು. ಆದರೆ ಈ ನಿಷೇಧವನ್ನು ಕಳೆದ ವಾರ ಸುಪ್ರೀಂ ತೆರುವುಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ