ಪ್ರಚಾರದ ಬಿಸಿಗೆ ತೆರೆ : ನಾಳೆ ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ಮತದಾನ
Team Udayavani, Apr 5, 2021, 8:00 AM IST
ಹೊಸದಿಲ್ಲಿ: ಬಿಸಿಲಿನ ಬೇಗೆಯ ನಡುವೆ ದಕ್ಷಿಣದ ರಾಜ್ಯಗಳಲ್ಲಿ ಬಹಿರಂಗ ಪ್ರಚಾರಕ್ಕೆ ರವಿವಾರ ತೆರೆಬಿದ್ದಿದೆ. ಮಂಗಳವಾರ, ಎ. 6ರಂದು ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಲ ಮಂಗಳವಾರ 3ನೇ ಹಂತ ಮತ್ತು ಅಸ್ಸಾಂ ಕೊನೆಯ ಹಂತದ ಮತದಾನಕ್ಕೆ ಸಾಕ್ಷಿಯಾಗಲಿದ್ದು, ಅಲ್ಲೂ ಪ್ರಚಾರಕ್ಕೆ ಪೂರ್ಣವಿರಾಮ ಬಿದ್ದಿದೆ.
ಎರಡೆಲೆಯೋ, ಸೂರ್ಯನೋ?
ತಮಿಳುನಾಡಿನಲ್ಲಿ ಆಡಳಿತಾರೂಢ ಎಐಎಡಿಎಂಕೆ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದ್ದರೆ, ವಿಪಕ್ಷ ಡಿಎಂಕೆ ಅಧಿಕಾರದ ಚುಕ್ಕಾಣಿ ಹಿಡಿಯಲು ಶ್ರಮಿಸುತ್ತಿದೆ. ಜಯಲಲಿತಾ ಮತ್ತು ಕರುಣಾನಿಧಿಯಂಥ ದಿಗ್ಗಜ ನಾಯಕರ ಅನುಪಸ್ಥಿತಿಯಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಎರಡೂ ಪಕ್ಷಗಳಿಗೆ ಅಗ್ನಿಪರೀಕ್ಷೆಯಾಗಿದೆ.
ಕೇರಳದಲ್ಲಿ ರ್ಯಾಲಿ, ರೋಡ್ ಶೋ
– ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವಿವಾರ ಉತ್ತರ ಕಲ್ಲಿಕೋಟೆ, ನೆಮಾಮ್ನಲ್ಲಿ ಪ್ರಚಾರ ನಡೆಸಿದ್ದಾರೆ.
– ಸಿಎಂ ಪಿಣರಾಯಿ ಸ್ವಕ್ಷೇತ್ರ ಕಣ್ಣೂರಿನ ಧರ್ಮ ದಾಮ್ನಲ್ಲಿ , ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ನೆಡುಂಕದಂನಲ್ಲಿ ರೋಡ್ಶೋ ನಡೆಸಿದ್ದಾರೆ.
– ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿರುವನಂತಪುರಂ ಮತ್ತು ತಿರುವಳ್ಳದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆ.
ಬಂಗಾಲ ಕಾಳಗ
ಪ. ಬಂಗಾಲದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ ಕೈಗೊಂಡರು. ಹೂಗ್ಲಿಯಲ್ಲಿ ಮಮತಾ ಬ್ಯಾನರ್ಜಿ ಕೊನೆಯ ಹಂತದ ಮತಯಾಚನೆ ನಡೆಸಿದರು.
ಅಸ್ಸಾಂನಲ್ಲಿ ಶಾ
ಅಸ್ಸಾಂನಲ್ಲಿ ರ್ಯಾಲಿ ನಡೆಸಿದ ಅಮಿತ್ ಶಾ, ರಾಜ್ಯದ ಅಭಿವೃದ್ಧಿ ಕುರಿತು ಕಾಂಗ್ರೆಸ್ಗೆ ಯಾವುದೇ ಅಜೆಂಡಾ ಇಲ್ಲ ಎಂದು ವಾಗ್ಧಾಳಿ ಸಂಘಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ