Kerala Train ಕೇರಳ ರೈಲಿಗೆ ಬೆಂಕಿ: ಪ್ರಮುಖ ಆರೋಪಿ ಶಾರುಖ್ ಸೈಫಿ ಬಂಧನ
Team Udayavani, Apr 5, 2023, 12:24 PM IST
ರತ್ನಗಿರಿ : ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲಿಗೆ ಬೆಂಕಿ ಹಚ್ಚಿ ಒಂದು ಶಿಶು ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡ ಘಟನೆಯ ಪ್ರಮುಖ ಆರೋಪಿ ಶಾರುಖ್ ಸೈಫಿಯನ್ನು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಬಂಧಿಸಲಾಗಿದೆ.
ಕೇಂದ್ರ ಗುಪ್ತಚರ ಮತ್ತು ಮಹಾರಾಷ್ಟ್ರ ಎಟಿಎಸ್ ಜಂಟಿ ತಂಡ ಸೈಫಿಯನ್ನು ಮಂಗಳವಾರ ರಾತ್ರಿ ರತ್ನಗಿರಿಯಲ್ಲಿ ಬಂಧಿಸಿದ್ದಾರೆ.
ಕೇರಳ ಪೊಲೀಸ್ ಡಿಜಿಪಿ ಅನಿಲ್ ಕಾಥ್ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆಯ ಬಳಿಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತನಿಖೆಗಾಗಿ ಎಸ್ಐಟಿ ರಚಿಸಲು ಆದೇಶ ನೀಡಿದ್ದರು. ಘಟನೆಯ ಬಳಿಕ ಶಾರುಖ್ ಸೈಫಿ ತಲೆ ಮರೆಸಿಕೊಂಡಿದ್ದ.
ರೈಲಿನಿಂದ ಇಳಿಯುವಾಗ ಬಿದ್ದು ಗಾಯಗೊಂಡಿರುವ ಶಾರುಖ್ ಸೈಫಿಗೆ ರತ್ನಗಿರಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.