ದೇವ್ರೇ ನನಗೆ 25 ಕೋಟಿ ಬಹುಮಾನ ಬರಬಾರದಿತ್ತು…ಕೇರಳ ಆಟೋ ಚಾಲಕನ ಅಳಲೇನು?!

ಬಹುಮಾನ ಘೋಷಣೆಯಾಗಿ ಐದು ದಿನಗಳ ಬಳಿಕ ತನಗೆ ಅನಿರೀಕ್ಷಿತವಾಗಿ ಬಂದ ಬಹುಮಾನದ ಬಗ್ಗೆ ಪಶ್ಚತ್ತಾಪ

Team Udayavani, Sep 24, 2022, 10:44 AM IST

thumb-3

ತಿರುವನಂತಪುರ: ಕೇರಳ ಸರ್ಕಾರದ ಈ ವರ್ಷದ ಓಣಂ ಲಕ್ಕಿ ಬಂಪರ್ ಲಾಟರಿ ಡ್ರಾನಲ್ಲಿ ಆಟೋ ಚಾಲಕ ಶ್ರೀವರಂನ ಅನೂಪ್ ಬರೋಬ್ಬರಿ 25 ಕೋಟಿ ರೂಪಾಯಿ ಬಹುಮಾನ ಗೆದ್ದು ಒಂದೇ ದಿನದಲ್ಲಿ ಮನೆಮಾತಾಗಿದ್ದು ಜಗಜ್ಜಾಹೀರಾದ ವಿಚಾರ, ಆದರೆ ಇದೀಗ ಬಹುಮಾನ ಘೋಷಣೆಯಾಗಿ ಐದು ದಿನಗಳ ಬಳಿಕ ತನಗೆ ಅನಿರೀಕ್ಷಿತವಾಗಿ ಬಂದ ಬಹುಮಾನದ ಬಗ್ಗೆ ಪಶ್ಚತ್ತಾಪ ವ್ಯಕ್ತಪಡಿಸಿದ್ದಾರೆ.

ಆಟೋ ಚಾಲಕನ ಅಳಲೇನು?

25 ಕೋಟಿ ಬಹುಮಾನ ನನಗೆ ಬಂದಿದೆ ಎಂಬ ವಿಚಾರ ಬಹಿರಂಗವಾದ ಮೇಲೆ ನನ್ನೆಲ್ಲಾ ಮನಶಾಂತಿ ಕಳೆದುಕೊಂಡು ಬಿಟ್ಟಿದ್ದೇನೆ. ನಾನು ನನ್ನ ಸ್ವಂತ ಮನೆಯಲ್ಲಿ ವಾಸಿಸಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಯಾಕೆಂದರೆ ನನಗೆ ಮೊದಲ ಬಹುಮಾನ ಬಂದ ಸುದ್ದಿ ತಿಳಿದು ಮನೆಗೆ ನೂರಾರು ಮಂದಿ ಆಗಮಿಸುತ್ತಿದ್ದು, ಹಣಕಾಸಿನ ನೆರವು ಕೇಳುತ್ತಿದ್ದಾರೆ. ನಾನೀಗ ಬದಲಾಗುತ್ತಿದ್ದೇನೆ, ನಾನು ಬಹುಮಾನ ಗೆಲ್ಲುವವರೆಗೆ ಇದ್ದ ಎಲ್ಲಾ ಮನಶಾಂತಿಯನ್ನು ಕಳೆದುಕೊಂಡು ಬಿಟ್ಟಿದ್ದೇನೆ” ಎಂದು ಆಟೋ ಚಾಲಕ ಅನೂಪ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಜಾರುವ ಅಂಗಳದಲ್ಲಿ ನಾವು ಆಡಿದ್ದು ಆ ಒಂದೇ ಒಂದು ಕಾರಣಕ್ಕೆ; ದಿನೇಶ್ ಕಾರ್ತಿಕ್ ಹೇಳಿದ್ದೇನು

ತಿರುವನಂತಪುರದ ಶ್ರೀವರಂನ ಅನೂಪ್(30ವರ್ಷ) ಆಟೋ ಚಾಲಕರಾಗಿದ್ದು, 25 ಕೋಟಿ ರೂಪಾಯಿ ಬಂಪರ್ ಬಹುಮಾನ ವಿಜೇತರಾಗಿದ್ದಾರೆ. ತೆರಿಗೆ ಮತ್ತು ಕಮಿಷನ್ ಕಳೆದು 15.75 ಕೋಟಿ ರೂಪಾಯಿ ಪಡೆಯಲಿದ್ದಾರೆ. ಅನೂಪ್ ಅವರು ಪತ್ನಿ, ಮಕ್ಕಳು ಮತ್ತು ತಾಯಿ ಜತೆ ವಾಸವಾಗಿದ್ದಾರೆ.

“ಆದರೆ ನಾನೀಗ ನಿಜವಾಗಿ ಬಯಸುತ್ತಿರುವುದೇನೆಂದರೆ ನಾನು ಆ ಬಂಪರ್ ಬಹುಮಾನ ಗೆಲ್ಲಲೇಬಾರದಿತ್ತು. ಬಹುಮಾನ ಗೆದ್ದ ಒಂದೆರಡು ದಿನ ನಾನು ಎಲ್ಲರೊಂದಿಗೆ ಬೆರೆತು ಖುಷಿಪಟ್ಟು, ಪ್ರಚಾರ ಪಡೆದಿದ್ದೇನೆ. ಈಗ ನನಗೆ ಅಪಾಯಕ್ಕೆ ಎಡೆಮಾಡಿಕೊಡತೊಡಗಿದೆ. ನನಗೆ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ನನ್ನ ನೋಡಿದ ಕೂಡಲೇ ಜನರು ನೆರವು ನೀಡಿ ಎಂದು ದುಂಬಾಲು ಬೀಳುತ್ತಿದ್ದಾರೆ” ಎಂದು ಅನೂಪ್ ಅಸಮಧಾನವ್ಯಕ್ತಪಡಿಸಿರುವುದಾಗಿ ವರದಿ ವಿವರಿಸಿದೆ.

ಬಂಪರ್ ಬಹುಮಾನದ ಹಣ ನನಗೆ ಇನ್ನಷ್ಟೇ ಸಂದಾಯವಾಗಬೇಕಾಗಿದೆ ಎಂದು ಅನೂಪ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಜನರಿಗೆ ವಿಷಯ ತಿಳಿಸಿದ್ದಾರೆ. ನನಗೀಗ ಈ ಹಣ ಏನು ಮಾಡಬೇಕೆಂದು ತೋಚುತ್ತಿಲ್ಲ. ಈ ಸಂದರ್ಭದಲ್ಲಿ ನನಗೆ ಬಂದ ಎಲ್ಲಾ ಹಣವನ್ನು 2 ವರ್ಷಗಳ ಕಾಲ ಬ್ಯಾಂಕ್ ನಲ್ಲಿ ಇಡಲು ಬಯಸುತ್ತೇನೆ. ನನಗೆ ಆ ಬಹುಮಾನದ ಹಣ ಬರಬಾರದಿತ್ತು ಎಂದು ಬಯಸುತ್ತೇನೆ. ನನಗೆ ಸಣ್ಣ ಮೊತ್ತದ ಬಹುಮಾನ ಬಂದಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಅನೂಪ್ ಹೇಳಿದ್ದಾರೆ.

ನನಗೆ ಆತ್ಮೀಯರಾಗಿದ್ದ ಹಲವು ಗೆಳೆಯರು ಶತ್ರುಗಳಾಗುವ ಹಂತಕ್ಕೆ ಬಂದಿದ್ದಾರೆ. ನನ್ನನ್ನು ಹುಡುಕಿಕೊಂಡು ನೂರಾರು ಜನ ಬರುತ್ತಿರುವುದರಿಂದ ನನ್ನ ನೆರೆಹೊರೆಯವರು ಕೂಡಾ ನನ್ನ ಮೇಲೆ ಆಕ್ರೋಶಗೊಂಡಿದ್ದಾರೆ. ನಾನು ಮಾಸ್ಕ್ ಹಾಕಿಕೊಂಡು ಹೊರಗೆ ಹೋದರೂ ಕೂಡಾ, ನನ್ನ ಸುತ್ತ ಜನರ ಗುಂಪು ಸೇರುತ್ತದೆ. ಇದರಿಂದಾಗಿ ನನ್ನ ಮನಸ್ಸಿನ ಶಾಂತಿ ನಾಶವಾಗಿ ಹೋಗಿದೆ ಎಂದು ಅನೂಪ್ ಬೇಸರ ವ್ಯಕ್ತಪಡಿಸಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.