ಬಿಡುಗಡೆಗೂ ಮುನ್ನ KGF-2 ದಾಖಲೆ: ಬ್ರಿಟನ್ ನಲ್ಲಿ 12 ಗಂಟೆಯಲ್ಲಿ 5 ಸಾವಿರ ಟಿಕೆಟ್ ಸೇಲ್
ಚಿತ್ರತಂಡ ದೆಹಲಿ, ಮುಂಬಯಿ ಸೇರಿದಂತೆ ಮಹಾನಗರಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.
Team Udayavani, Apr 5, 2022, 1:06 PM IST
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಸಿನಿಮಾ ಕೇವಲ ಭಾರತದಲ್ಲಿ ಮಾತ್ರವಲ್ಲ ಇಡೀ ಜಗತ್ತಿನಾದ್ಯಂತ ಸಿನಿ ಪ್ರೇಕ್ಷಕರು ಬಹು ನಿರೀಕ್ಷೆಯಿಂದ ಕಾಯುತ್ತಿರುವಂತೆ ಮಾಡಿದ್ದು, ಬಿಡುಗಡೆಗೂ ಮುನ್ನವೇ ಹಲವು ದಾಖಲೆಗಳನ್ನು ಬರೆದಿದೆ ಎಂದು ಚಿತ್ರತಂಡ ಹೇಳಿದೆ.
ಇದನ್ನೂ ಓದಿ:ಎಲ್ಲ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ: ಸಿಎಂ
ಕೆಜಿಎಫ್-2 ಚಿತ್ರದ ಹವಾ ಪ್ರೇಕ್ಷಕರಲ್ಲಿ ಮತ್ತು ಬಾಕ್ಸಾಫೀಸ್ ನಲ್ಲಿ ಯಾವ ಮಟ್ಟದ ಪರಿಣಾಮ ಬೀರಬಹುದು ಎಂಬುದು ಈಗಾಗಲೇ ಸಾಬೀತಾಗಿದೆ. ಏಪ್ರಿಲ್ 14ರಂದು ಕೆಜಿಎಫ್-2 ದೇಶ, ವಿದೇಶಗಳಲ್ಲಿ ತೆರೆ ಕಾಣಲು ಸಿದ್ಧವಾಗಿದ್ದು, ಚಿತ್ರತಂಡ ದೆಹಲಿ, ಮುಂಬಯಿ ಸೇರಿದಂತೆ ಮಹಾನಗರಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.
ಕೆಜಿಎಫ್ 2 ಸಿನಿಮಾ ಭಾರತ ಮಾತ್ರವಲ್ಲ ಬ್ರಿಟನ್ ನಲ್ಲೂ ದಾಖಲೆ ಬರೆದಿದೆ. ಸಿನಿಮಾ ಬಿಡುಗಡೆಗೂ ಮುನ್ನ ಬ್ರಿಟನ್ ನಲ್ಲಿ ಕೇವಲ 12 ಗಂಟೆ ಅವಧಿಯಲ್ಲಿ ಕೆಜಿಎಫ್ 2 ಸಿನಿಮಾದ 5,000 (ಮುಂಗಡ ಕಾಯ್ದಿರಿಸುವಿಕೆ) ಟಿಕೆಟ್ ಗಳು ಮಾರಾಟವಾಗಿದೆ. ಇದುವರೆಗೆ ಯಾವುದೇ ಭಾರತೀಯ ಸಿನಿಮಾ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮುಂಗಡ ಟಿಕೆಟ್ ಬುಕ್ ಆಗಿರಲಿಲ್ಲ ಎಂದು ವರದಿ ತಿಳಿಸಿದೆ.
ಗ್ರೀಸ್ ನಲ್ಲಿಯೂ ಕೆಜಿಎಫ್ 2 ಸಿನಿಮಾ ಬಿಡುಗಡೆಯಾಗಲಿದ್ದು, ಇದರೊಂದಿಗೆ ಗ್ರೀಸ್ ನಲ್ಲಿ ತೆರೆಕಾಣುತ್ತಿರುವ ದಕ್ಷಿಣ ಭಾರತದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅಮೆರಿಕ ಸೇರಿದಂತೆ ಜಗತ್ತಿನಾದ್ಯಂತ ಕೆಜಿಎಫ್ 2 ಬಿಡುಗಡೆಯಾಗಲಿದೆ.
ಏಪ್ರಿಲ್ 14ರಂದು ಕನ್ನಡ, ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ಕೆಜಿಎಫ್ 2 ಸಿನಿಮಾ ದೇಶ, ವಿದೇಶಗಳಲ್ಲಿ ರಿಲೀಸ್ ಆಗಲಿದೆ. ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ 2 ಸಿನಿಮಾದಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್, ಅನಂತ್ ನಾಗ್ ಸೇರಿದಂತೆ ಬಹುದೊಡ್ಡ ತಾರಾಬಳಗವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ