ಸದನ ಸುಗಮವಾಗಿ ನಡೆಯದಂತೆ ಖರ್ಗೆ ಮೇಲೆ ಒಂದು ಕುಟುಂಬದ ಒತ್ತಡ: ಜೋಶಿ
Team Udayavani, Dec 23, 2021, 8:36 PM IST
ನವದೆಹಲಿ : ಬುಧವಾರ ಅವಧಿಗೂ ಮುನ್ನವೇ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಸದನ ಸುಗಮವಾಗಿ ನಡೆಯಲು ಬಿಡದಂತೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ‘ಒಂದು ಕುಟುಂಬದ ಒತ್ತಡಕ್ಕೆ ಒಳಗಾಗಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ಆರೋಪಿಸಿದ್ದಾರೆ.
ರಾಜ್ಯಸಭಾ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಸರಕಾರ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟನ್ನು ಪರಿಹರಿಸಲು ಪ್ರಯತ್ನಿಸಿದರು, ಆದರೆ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಸದನವನ್ನು ಸುಗಮವಾಗಿ ನಡೆಸಲು ಬಿಡಲಿಲ್ಲ ಎಂದು ಜೋಶಿ ಹೇಳಿದರು.
ಸರ್ಕಾರದ ಒತ್ತಡದಲ್ಲಿ ಉಭಯ ಪಕ್ಷಗಳ ನಡುವಿನ ಬಿಕ್ಕಟ್ಟನ್ನು ಪರಿಹರಿಸಲು ನಾಯ್ಡು ಪ್ರಯತ್ನಿಸಲಿಲ್ಲ ಎಂಬ ವರದಿಗಳನ್ನು ತಳ್ಳಿಹಾಕಿದ ಜೋಶಿ, ಸದನವನ್ನು ಸುಗಮವಾಗಿ ನಡೆಸಲು ಬಿಡದಿರಲು ಒಂದು ಕುಟುಂಬದ ಒತ್ತಡದಲ್ಲಿ ಖರ್ಗೆ ಇದ್ದಾರೆ ಎಂದು ಹೇಳಿದರು.
ಕೆಲವು ವರದಿಗಳ ಪ್ರಕಾರ, 12 ರಾಜ್ಯಸಭಾ ಸಂಸದರ ಅಮಾನತು ವಿಚಾರದಲ್ಲಿ ಸರಕಾರ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟನ್ನು ಪರಿಹರಿಸದಂತೆ ನಾಯ್ಡು ಅವರು ಸರಕಾರದ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಖರ್ಗೆ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ