ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಖಂಡಿಸಿ ನಟ ಕಿಚ್ಚ ಸುದೀಪ್ ಟ್ವೀಟ್
Team Udayavani, Dec 27, 2020, 10:11 PM IST
ಬೆಂಗಳೂರು: ಮಾಗಡಿ ರಸ್ತೆಯಲ್ಲಿದ್ದ ನಟ ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಘಟನೆಯನ್ನು ನಟ ಸುದೀಪ್ ಟ್ವಿಟ್ಟರ್ನಲ್ಲಿ ಖಂಡಿಸಿದ್ದಾರೆ.
ಈ ಬಗ್ಗೆ ವೀಡಿಯೋವನ್ನು ಹಂಚಿಕೊಂಡಿರುವ ಅವರು, “ದಯವಿಟ್ಟು ಸಿಕ್ಕಿಹಾಕಿಕೊಳ್ಳಬೇಡಿ. ಒಡೆದಿರುವುದು ಯಾರು ಅಂತ ಗೊತ್ತಾದರೆ ನಿಮ್ಮನ್ನು ಹೀನಾಯವಾಗಿ ಹೊಡೆದುಹಾಕುತ್ತಾರೆ. ನಿಮ್ಮ ಹೆಸರು ಬಯಲಾದ ದಿನ, ದೇಶ ಬಿಟ್ಟು ಓಡಿ ಹೋಗಿ. ಇದು ನಾನು ನಿಮಗೆ ಕೊಡುತ್ತಿರುವ ಸಲಹೆ’ ಎಂದು ಹೇಳಿದ್ದಾರೆ.
“ಒಡೆದು ಹಾಕಿರೋ ಮಹಾನುಭಾವರಿಗೆ, ವಿಷ್ಣು ಸರ್ ಅಭಿಮಾನಿಯಾಗಿ ಒಂದಿಷ್ಟು ವಿಷಯ ಹೇಳಲು ಇಷ್ಟಪಡುತ್ತೇನೆ. ನೀವು ಸಿಕ್ಕಿಬಿದ್ದರೆ ಒಡೆದು ಹಾಕಿರುವ ಉದ್ದೇಶ ಅರ್ಥ ಆಗಲ್ಲ, ಅರ್ಥ ಆಗಲಿಕ್ಕೂ ಸಾಧ್ಯವಿಲ್ಲ. ಮನುಷ್ಯರಾದವರಿಗೆ ಇದು ಅರ್ಥವಾಗಲ್ಲ. ಎಲ್ಲೇ ಕೂತಿದ್ದರೂ ಸಿಕ್ಕಿಹಾಕಿಕೊಳ್ಳದೆ ಇರುವ ಹಾಗೆ ನೋಡಿಕೊಳ್ಳಿ. ನಿಮ್ಮ ಹೆಸರು ಹೊರಬಂದ ದಿನ ಏನಾಗುತ್ತೆ ಎನ್ನುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ’ ಎಂದು ಸುದೀಪ್ ವೀಡಿಯೋದಲ್ಲಿ ಹೇಳಿದ್ದಾರೆ.
ಈ ಘಟನೆಯನ್ನು ನಟರಾದ ದರ್ಶನ್, ಜಗ್ಗೇಶ್ ಸಹಿತ ಅನೇಕರು ಖಂಡಿಸಿದ್ದಾರೆ.
To those ******** who broke the statue of my hero and my idol VishnuSir,,
Here is my advice,,,,,,, pic.twitter.com/C6zTglMIy3— Kichcha Sudeepa (@KicchaSudeep) December 26, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ