ದೇಶದಲ್ಲಿ ಆಹಾರ ಕೊರತೆ ಎದುರಾಗಬಹುದು, ಕೋವಿಡ್ ಲಾಕ್ ಡೌನ್ ಇನ್ನೂ ವಿಸ್ತರಣೆ: ಉ.ಕೊರಿಯಾ
ದೇಶದಲ್ಲಿ ಆಹಾರದ ಕೊರತೆ/ಅಸ್ಥಿರತೆ ಸಂಭವಿಸಲಿದೆ. ಭೀಕರ ಚಂಡಮಾರುತದಿಂದಾಗಿ ಬೆಳೆಗಳು ನಾಶವಾಗಿರುವುದಾಗಿ ತಿಳಿಸಿದ್ದಾರೆ.
Team Udayavani, Jun 16, 2021, 1:27 PM IST
ಸೋಲ್: ದೇಶದಲ್ಲಿ ಕೋವಿಡ್ ಹಾಗೂ ಚಂಡಮಾರುತದ ಪರಿಣಾಮ ಆಹಾರ ಕೊರತೆಯಾಗುವ ಸಾಧ್ಯತೆ ಇದ್ದಿರುವುದಾಗಿ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜೋಂಗ್ ಉನ್ ಎಚ್ಚರಿಕೆ ನೀಡಿದ್ದು, ಕೋವಿಡ್ 19 ನಿರ್ಬಂಧವನ್ನು ಮುಂದುವರಿಸಲು ಜನರು ಸಹಕಾರ ನೀಡಬೇಕು ಎಂದು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಇದನ್ನೂ ಓದಿ:ಲಕ್ಷಾಂತರ ರೂ.ಮೌಲ್ಯದ ನಕಲಿ ರಸಗೊಬ್ಬರ ಸಾಗಾಣಿಕೆ: ಪೊಲೀಸರು-ಅಧಿಕಾರಿಗಳ ದಾಳಿ
ಪ್ರಸ್ತುತ ಅಂತಾರಾಷ್ಟ್ರೀಯ ಸನ್ನಿವೇಶವನ್ನು ಹೇಗೆ ಎದುರಿಸಬೇಕು ಎಂಬುದರ ಬಗ್ಗೆ ಉತ್ತರ ಕೊರಿಯಾ ಚರ್ಚೆ ನಡೆಸಬೇಕಾಗಿದೆ ಎಂದು ಕರೆ ನೀಡಿರುವ ಕಿಮ್, ಅಮೆರಿಕವಾಗಲಿ ಅಥವಾ ದಕ್ಷಿಣ ಕೊರಿಯಾದ ಬಗ್ಗೆ ನಿರ್ದಿಷ್ಟವಾಗಿ ಉಲ್ಲೇಖಿಸದೇ ಮಾತನಾಡಿರುವುದಾಗಿ ಕೊರಿಯಾದ ಸೆಂಟ್ರಲ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಕೋವಿಡ್ ಸೋಂಕಿನ ಪರಿಣಾಮ ದೇಶದ ಗಡಿ ಭಾಗಗಳನ್ನು ಮುಚ್ಚಿದ್ದರಿಂದ ಉತ್ತರ ಕೊರಿಯಾ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಅಲ್ಲದೇ ಚೀನಾದ ಜತೆಗಿನ ವ್ಯಾಪಾರ ಒಪ್ಪಂದ ಕಡಿದುಕೊಂಡಿದ್ದು, ಮತ್ತೊಂದೆಡೆ ಭೀಕರ ಚಂಡಮಾರುತ ಪ್ರವಾಹದಿಂದ ಬೆಳೆ ನಾಶವಾಗಿರುವುದಾಗಿ ವರದಿ ತಿಳಿಸಿದೆ.
ಕಿಮ್ ಉತ್ತರ ಕೊರಿಯಾದ ಆಡಳಿತಾರೂಢ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾದ ಕೇಂದ್ರ ಸಮಿತಿಯ ಸಭೆಯಲ್ಲಿ ಮಾತನಾಡಿ, ದೇಶದಲ್ಲಿ ಆಹಾರದ ಕೊರತೆ/ಅಸ್ಥಿರತೆ ಸಂಭವಿಸಲಿದೆ. ಭೀಕರ ಚಂಡಮಾರುತದಿಂದಾಗಿ ಬೆಳೆಗಳು ನಾಶವಾಗಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ