ಕಿಷ್ಕಿಂದಾ ಅಂಜನಾದ್ರಿ ಹನುಮನ ಜನ್ಮಸ್ಥಳ: ಡಾ। ರವಿಶಂಕರ್ ಗುರೂಜಿ
Team Udayavani, Nov 26, 2021, 7:24 PM IST
ಗಂಗಾವತಿ :ಹಿಂದೂ ಧರ್ಮದ ಸಾಧು ಸಂತರು ಹಾಗೂ ಗ್ರಂಥಗಳಲ್ಲಿ ಉಲ್ಲೇಖಿಸಿರುವಂತೆ ಕಿಷ್ಕಿಂದಾ ಅಂಜನಾದ್ರಿ ಪರ್ವತ ಹನುಮಂತನ ಜನ್ಮ ಸ್ಥಳವಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ನ ಡಾ। ರವಿಶಂಕರ ಗುರೂಜಿ ಶುಕ್ರವಾರ ಹೇಳಿದ್ದಾರೆ.
ಅವರು ವಿಶ್ವವಿಖ್ಯಾತ ಕಿಷ್ಕಿಂದಾ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಶ್ರೀ ಆಂಜನೇಯ ದೇವರ ದರ್ಶನ ಪಡೆದು ಪವಮಾನ ಹೋಮ ದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದರು.
ಶ್ರೀರಾಮಚಂದ್ರನ ವನವಾಸದ ಸಂದರ್ಭದಲ್ಲಿ ಲಕ್ಷ್ಮಣ ಸಮೇತವಾಗಿ ಋಷಿಮುಖ ಪರ್ವತ ಕಿಷ್ಕಿಂದಾ ಅಂಜನಾದ್ರಿ ಪ್ರದೇಶದಲ್ಲಿ ಸುತ್ತಾಡಿದ್ದಾರೆ ಈಗಿನ ತುಂಗಭದ್ರ ನದಿ ಅಂದು ಪಂಪಾನದಿ ಯಾಗಿತ್ತು .ವಾಲ್ಮೀಕಿ ರಾಮಾಯಣ ಸೇರಿದಂತೆ ಮಹಾನ್ ಗ್ರಂಥಗಳಲ್ಲಿ ಈ ಬಗ್ಗೆ ಉಲ್ಲೇಖ ಮಾಡಲಾಗಿದೆ ಇದನ್ನು ನಂಬಿಯೇ ಉತ್ತರಪ್ರದೇಶದಿಂದ ಸಾಧುಸಂತರು ಚಾರ್ ಧಾಮ್ ಯಾತ್ರೆಯ ನೆಪದಲ್ಲಿ ಅಂಜನಾದ್ರಿ ಪರ್ವತ ,ಪಂಪಾ ಸರೋವರ ವಾಲಿಕಿಲ್ಲಾ ಪ್ರದೇಶಗಳಿಗೆ ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ .ಮುಂಬರುವ ದಿನಗಳಲ್ಲಿ ಕಿಷ್ಕಿಂದಾ ಅಂಜನಾದ್ರಿ ಸಹ ಪ್ರಸಿದ್ಧಿಯಾಗಲಿದೆ .ಪ್ರತಿಯೊಬ್ಬ ಭಕ್ತನೂ ಜೀವಮಾನ ಕಾಲದಲ್ಲಿ 1ಬಾರಿಯಾದರೂ ಕಿಷ್ಕಿಂದಾ ಅಂಜನಾದ್ರಿಗೆ ಭೇಟಿ ನೀಡಬೇಕು .ಸರಕಾರ ಇಲ್ಲಿಗೆ ಆಗಮಿಸುವ ಭಕ್ತರಿಗೆ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಅದೇ ತೆರನಾಗಿ ಹತ್ತಿರದ ಗಂಗಾವತಿಗೆ ರೈಲ್ವೆ ಮಾರ್ಗಗಳನ್ನು ಹೆಚ್ಚು ಮಾಡುವಂತೆ ಸರ್ಕಾರಕ್ಕೆ ಅವರು ಸಲಹೆ ನೀಡಿದರು .
ಈ ಸಂದರ್ಭದಲ್ಲಿ ಆದಿಶಕ್ತಿ ದೇಗುಲದ ಅರ್ಚಕ ಬ್ರಹ್ಮಾನಂದ ಯ್ಯಸ್ವಾಮಿ,ರಾಜವಂಶಸ್ಥರಾದ ಶ್ರೀಕೃಷ್ಣದೇವರಾಯ ,ಮಾಜಿ ಎಂಎಲ್ ಸಿ ಎಚ್. ಆರ್ .ಶ್ರೀನಾಥ್ .ಬಿಜೆಪಿ ಯುವ ಮುಖಂಡ ಕೇಲೋಜಿ ಸಂತೋಷ್ ,.ಡಿಎಸ್ ಪಿ ರುದ್ರೇಶ್ ಉಜ್ಜನಕೊಪ್ಪ ,ವೆಂಕಟೇಶ್ ಅಮರಜ್ಯೋತಿ ,ಶ್ರೀನಿವಾಸ್ ಸಿರಿಗಿರಿ ಸೇರಿ ಅನೇಕರಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ