ಮತ್ತೆ ಮುನ್ನೆಲೆಗೆ ಬಂದ ಕಿಷ್ಕಿಂಧಾ ಅಂಜನಾದ್ರಿಯ‌ ಪೂಜಾ ವಿವಾದ

ತೀರ್ಥಪ್ರಸಾದ ವಿತರಣೆಗೆ ಖಾಸಗಿ ವ್ಯಕ್ತಿಯ ನಿಯೋಜನೆಗೆ ತಹಸೀಲ್ದಾರ್, ಅಧಿಕಾರಿಗಳ ಆಕ್ಷೇಪ

Team Udayavani, Mar 10, 2023, 4:25 PM IST

anjanadri

ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿಯ‌ ಪೂಜಾ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಪೂಜಾ ತೀರ್ಥಪ್ರಸಾದ ವಿತರಣೆಗೆ ಖಾಸಗಿ ವ್ಯಕ್ತಿಯೊರ್ವರನ್ನು ನಿಯೋಜಿಸಿದ ಕುರಿತು ತಹಸೀಲ್ದಾರ್ ಹಾಗೂ ದೇವಾಲಯದ ಅಧಿಕಾರಿಗಳು ಆಕ್ಷೇಪಿಸಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಶುಕ್ರವಾರ ಜರುಗಿದೆ.

೨೦೧೭ ರಲ್ಲಿ ಅಂಜನಾದ್ರಿ ಪೂಜೆ ಮತ್ತು ಮಾಲೀಕತ್ವದ ವಿಷಯದಲ್ಲಿ ಆನೆಗೊಂದಿ ರಾಜವಂಶದ ನೇತೃತ್ವದ ಟ್ರಸ್ಟ್ ಹಾಗೂ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ವಾದ-ವಿವಾದ ಜರುಗಿ ಅಂಜನಾದ್ರಿ ಹಾಗೂ ಸುತ್ತಲಿನ‌ ಪ್ರದೇಶದಲ್ಲಿ ಅಶಾಂತಿ ವಾತಾವರಣದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ವರದಿ ಹಿನ್ನೆಲೆಯಲ್ಲಿ ಅಂದಿನ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಜಿಲ್ಲಾಡಳಿತ ವಶಕ್ಕೆ ಕಿಷ್ಕಿಂಧಾ ಅಂಜನಾದ್ರಿ ದೇಗುಲವನ್ನು ಪಡೆದು ಸರಕಾರಕ್ಕೆ ವರದಿ ಸಲ್ಲಿಸಿದ್ದರು. ನಂತರ ರಾಜ್ಯ ಸರಕಾರ ಅಂಜನಾದ್ರಿ ದೇಗುಲವನ್ನು ಧಾರ್ಮಿಕ ಮತ್ತು ಮುಜರಾಯಿ ಇಲಾಖೆಗೆ ವಹಿಸಿ ಗೆಜೆಟ್ ನಲ್ಲಿ‌ ಪ್ರಕಟಿಸಿತ್ತು. ಇದುವರೆಗೂ ಸುಮಾರು ೫ ಕೋಟಿಗೂ ಹೆಚ್ಚು ಆದಾಯ ಸರಕಾರಕ್ಕೆ ಬಂದಿದ್ದು ಕಿಷ್ಕಿಂಧಾ ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ ನೀಲ ನಕ್ಷೆ, ಯೋಜನೆ ರೂಪಿಸಿ 120 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ.

ಈ ಮಧ್ಯೆ ದೇವಾಲಯವನ್ನು ಸರಕಾರದ ವಶಕ್ಕೆ ಪಡೆದಿರುವ ಕ್ರಮ ಪ್ರಶ್ನಿಸಿ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಧಾರವಾಡ ಹೈಕೋರ್ಟ್ ನಲ್ಲಿ ಪ್ರಶ್ನಿಸಿ ಪೂಜೆ ಮಾಡುವ ಅವಕಾಶ ಪಡೆದಿದ್ದರು. ಶುಕ್ರವಾರ ಮಹಾಂತ ವಿದ್ಯಾದಾಸ ಬಾಬಾ ಅವರು ಆಪ್ತನೊರ್ವನನ್ನು ತೀರ್ಥ ಪ್ರಸಾದ ವಿತರಣೆ ಮಾಡಲು ದೇಗುಲದ ಗರ್ಭಗುಡಿಯಲ್ಲಿ ಕುಳ್ಳಿರಿಸಿದ್ದಾರೆ. ದೇವಾಲಯದಲ್ಲಿ ಸರಕಾರದಿಂದ ಪೂಜೆ ಮತ್ತು ಧಾರ್ಮಿಕ‌ ಕಾರ್ಯ ಮಾಡಲು ಈಗಾಗಲೇ ಸಿಬ್ಬಂದಿ ವರ್ಗದವರಿದ್ದು ಅನ್ಯರು ತೀರ್ಥ ಪ್ರಸಾದ ವಿತರಣೆ ಮತ್ತು ಭಕ್ತರಿಂದ ಕಾಣಿಕೆ ಪಡೆಯಲು ಅವಕಾಶವಿಲ್ಲ ಎಂದು ಹೆಸರೇಳಲು ಇಚ್ಛಿಸದ ಸಿಬ್ಬಂದಿಯೊರ್ವ ತಿಳಿಸಿದ್ದಾರೆ.

ಖಾಸಗಿಯವರಿಗೆ ಅವಕಾಶವಿಲ್ಲ

ಅಂಜನಾದ್ರಿ ದೇಗುಲದಲ್ಲಿ ಪೂಜೆಗೆ ವಿದ್ಯಾದಾಸ ಬಾಬಾ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಶುಕ್ರವಾರ ಗರ್ಭಗುಡಿಯ ಮುಂದೆ ಖಾಸಗಿ ವ್ಯಕ್ತಿಯನ್ನು ವಿದ್ಯಾ ದಾಸ ಬಾಬಾ ಕುಳ್ಳಿರಿಸಿದ್ದು ಇದಕ್ಕೆ ಸಿಬ್ಬಂದಿ ವರ್ಗ ಆಕ್ಷೇಪಿಸಿದರೂ ನಿರ್ಲಕ್ಷ್ಯ ಮಾಡಲಾಗಿದೆ.ಈ ಕುರಿತು ಜಿಲ್ಲಾಧಿಕಾರಿ ಗಳ ಗಮನಕ್ಕೆ ತರಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆ ಗೆ ದೂರು ಸಹ ನೀಡಲಾಗಿದೆ ಎಂದು ತಹಸೀಲ್ದಾರ್ ಮಂಜುನಾಥ ಸ್ವಾಮಿ ತಿಳಿಸಿದ್ದಾರೆ.

ನೇಮಕದ ಅಧಿಕಾರವಿದೆ

ಅಂಜನಾದ್ರಿ ದೇಗುಲವನ್ನು ಕೆಲವರು ಷಡ್ಯಂತ್ರ ನಡೆಸಿ ಸರಕಾರದ ವಶಕ್ಕೆ ಹೋಗುವಂತೆ ಮಾಡಲಾಗಿದೆ. ಇದನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.ಸದ್ಯ ತಮಗೆ ದೇಗುಲದಲ್ಲಿ ಪೂಜೆ ಧಾರ್ಮಿಕ ಕಾರ್ಯ ಮಾಡಲು ಕೋರ್ಟ್ ಅವಕಾಶ ನೀಡಿದೆ. ಪೂಜೆ ಕಾರ್ಯದಲ್ಲಿ ನೆರವಾಗಲು ಮತ್ತು ತೀರ್ಥಪ್ರಸಾದ ವಿತರಣೆ ಮಾಡಲು ನಾನು ಸಹಾಯಕನನ್ನು ನಿಯೋಜನೆ ಮಾಡಿದ್ದು ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದು ಇದನ್ನು ನ್ಯಾಯಾಲಯದ ಗಮನಕ್ಕೆ ತರಲಾಗುತ್ತದೆ ಎಂದು ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ತಿಳಿಸಿದ್ದಾರೆ.

~ ಕೆ.ನಿಂಗಜ್ಜ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.