ಕಿತ್ತೂರು, ಕಲ್ಯಾಣ, ಕರಾವಳಿ ಮಂತ್ರ:  ಸಾಂಪ್ರದಾಯಿಕ ಮತದಾರರತ್ತ ಬಿಜೆಪಿ ನೋಟ

ಕಣಕಣವೂ ಚಿಂತಾಕ್ರಾಂತ!

Team Udayavani, Jan 28, 2023, 7:10 AM IST

ಕಿತ್ತೂರು, ಕಲ್ಯಾಣ, ಕರಾವಳಿ ಮಂತ್ರ:  ಸಾಂಪ್ರದಾಯಿಕ ಮತದಾರರತ್ತ ಬಿಜೆಪಿ ನೋಟ

ಮೂರೂ ಪಕ್ಷಗಳಿಗೆ ಚುನಾವಣೆಯಲ್ಲಿ ತಮ್ಮ ಗೆಲುವು ಖಚಿತ ಎಂಬ ಸ್ಥಿತಿ ಸದ್ಯ ಇಲ್ಲ. ಗುಪ್ತಚರ ವರದಿಯೂ ಇದನ್ನೇ ಹೇಳುತ್ತಿದೆ. ಹೀಗಾಗಿ ಫ‌ಲಿತಾಂಶ ಪ್ರಕಟವಾಗುವವರೆಗೆ ಮೂರೂ ಪಕ್ಷಗಳಿಗೆ ಪ್ರತೀ ಕಣವೂ ಚಿಂತೆಯೇ!

ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಕೇಸರಿ ಅಲೆ ಸೃಷ್ಟಿಸುವ ಲೆಕ್ಕಾಚಾರ ನಿರೀಕ್ಷಿತ ಫ‌ಲ ನೀಡುವ ಸಾಧ್ಯತೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಗೆಲ್ಲುವುದ ಕ್ಕಾಗಿ ಹಳೆಯ ಸೂತ್ರವನ್ನೇ ಮತ್ತಷ್ಟು ಬಲಪಡಿಸುವುದಕ್ಕೆ ಕಾರ್ಯತಂತ್ರ ರೂಪಿಸಲು ಬಿಜೆಪಿ ಸಜ್ಜಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ಸೂತ್ರವನ್ನು ರಾಜ್ಯ ನಾಯಕರಿಗೆ ಮನದಟ್ಟು ಮಾಡಿಕೊಟ್ಟಿದ್ದಾರೆ. ಈಗಾ ಗಲೇ ಬಿಜೆಪಿ ಪ್ರಬಲವಾಗಿ ಬೇರು ಬಿಟ್ಟಿರುವ ಜಿಲ್ಲೆಗಳ ಜತೆಗೆ ಹಳೆ ಮೈಸೂರು ಭಾಗದ ಕೆಲವು ಕ್ಷೇತ್ರಗಳಲ್ಲಿ ಗೆಲುವು ಗಳಿಸಿದರೆ ಅಧಿ ಕಾರದ ಚುಕ್ಕಾಣಿ ಹಿಡಿಯುವುದು ಸುಲಭ ಎಂಬುದು ಬಿಜೆಪಿಯ ಲೆಕ್ಕಾಚಾರ ವಾಗಿತ್ತು. ಆದರೆ ಈ ಭಾಗದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸ್ಥಾನ ಕಸಿದು ಕೊಳ್ಳುವುದು ಸುಲಭವಲ್ಲ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆಗಳು ಹೇಳಿವೆ. ಈ ಹಿನ್ನೆಲೆಯಲ್ಲಿ ಜಾಗೃತಗೊಂಡಿರುವ ಬಿಜೆಪಿ ಕರಾವಳಿ, ಕಿತ್ತೂರು, ಕಲ್ಯಾಣ ಕರ್ನಾಟಕ, ಮಲೆ ನಾಡು ಜಿಲ್ಲೆಗಳಲ್ಲಿ ಶಕ್ತಿ ವೃದ್ಧಿಸಿಕೊಳ್ಳಲು ನಿರ್ಧರಿಸಿದೆ.

ಮಲೆನಾಡಿನ 3 ಜಿಲ್ಲೆ ಒಳ ಗೊಂಡಂತೆ ಕರಾವಳಿಯಿಂದ ಕಲಬುರ್ಗಿಯ ವರೆಗಿನ 128 ಕ್ಷೇತ್ರ ಗಳಿಗೆ ಸಂಬಂಧಿಸಿ ಅಮಿತ್‌ ಶಾ “ರೋಡ್‌ ಮ್ಯಾಪ್‌’ ರಚಿಸಿದ್ದು, ಈ ಭಾಗದಲ್ಲಿ 90ರಿಂದ 100 ಸ್ಥಾನಗಳ ಗುರಿ ಮುಟ್ಟಿದರೆ ಬಿಜೆಪಿಗೆ ಮತ್ತೆ ಅಧಿಕಾರ ಖಚಿತ ಎಂಬ ಲೆಕ್ಕಾಚಾರ ಹಾಕಿಕೊಟ್ಟಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಹಿಂದುತ್ವ ಹಾಗೂ ಲಿಂಗಾಯತ ಮತ ಬ್ಯಾಂಕ್‌ ಗಟ್ಟಿಗೊಳಿಸುವುದರಿಂದ ಇಷ್ಟು ಸ್ಥಾನಗಳಲ್ಲಿ ಜಯ ಗಳಿಸುವುದಕ್ಕೆ ಅವಕಾಶವಿದ್ದು, ಇದಕ್ಕೆ ಬೇಕಾದ ಸಿದ್ಧತೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶನಿವಾರ ನಡೆಯುವ ಸಭೆಗೆ ವಿಶೇಷ ಮಹತ್ವ ಲಭಿಸಿದೆ.

ಈ ಮಧ್ಯೆ ಪ್ರಧಾನಿ ಮೋದಿ ಹಾಗೂ ಅಮಿತ್‌ ಶಾ ರಾಜ್ಯ ಪ್ರವಾಸದ ಜತೆಗೆ ವಿಜಯಸಂಕಲ್ಪ ಯಾತ್ರೆ, ಬೂತ್‌ ವಿಜಯ ಕಾರ್ಯಕ್ರಮಗಳು ಕಾರ್ಯಕರ್ತರು ಹಾಗೂ ಶಾಸಕರಲ್ಲಿ ತುಸು ಹುಮ್ಮಸ್ಸು ಸೃಷ್ಟಿಸಿದೆ ಎಂಬುದು ಬಿಜೆಪಿಯ ವಾದ. ಅಮಿತ್‌ ಶಾ ಶನಿವಾರ ಹಾವೇರಿಯಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದು, ಕಿತ್ತೂರು ಕರ್ನಾಟಕ ಭಾಗದಲ್ಲಿ ಮತಬ್ಯಾಂಕ್‌ ಛಿದ್ರವಾಗದಂತೆ ತಡೆಯಲು ಯತ್ನಾಳ್‌ ಅವರನ್ನೂ ಒಳಗೊಂಡಂತೆ ಲಿಂಗಾಯತ ನಾಯಕರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

- ರಾಘವೇಂದ್ರ ಭಟ್‌

ಟಾಪ್ ನ್ಯೂಸ್

KAGODU

ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

tdy-9

ಸುಳ್ಯ ಕ್ಷೇತ್ರದಲ್ಲಿ ಕೃಷ್ಣಪ್ಪ ಅವರಿಗೆ ʼಕೈʼ ಟಿಕೆಟ್‌ ನೀಡಿದಕ್ಕೆ ಕಾರ್ಯಕರ್ತರ ವಿರೋಧ

TDY-7

ನೀತಿ ಸಂಹಿತೆ ಹಿನ್ನೆಲೆ: ಸರ್ಕಾರಿ ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ

TDY-6

ಜೆಡಿಎಸ್ ಬಿಜೆಪಿ ಕಳೆದ ಬಾರಿಯಂತೆ ಈ ಬಾರಿಯೂ ಮ್ಯಾಚ್ ಫಿಕ್ಸಿಂಗ್ ಮಾಡುತ್ತದೆ: ಸಿದ್ದರಾಮಯ್ಯ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

KAGODU

ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

tdy-21

ರಾಮನಾಥಪುರದಲ್ಲಿ ಮತ್ಸ್ಯ ಸಂಕುಲಕ್ಕೆ ಕಂಟಕ

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.