ರಾಜ್ಯದಲ್ಲಿ ಸಾಧನೆ ಮಾಡಿರುವ ಸಾಧಕಿಯರಿಗೆ ಕಿತ್ತೂರು ಚೆನ್ನಮ್ಮ ಪ್ರಶಸ್ತಿ: ಜೊಲ್ಲೆ
Team Udayavani, Mar 9, 2021, 11:15 PM IST
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯದಲ್ಲಿ ಸಾಧನೆ ಮಾಡಿರುವ 49 ಮಹಿಳೆಯರು ಮತ್ತು ಸಂಘ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸಾಧನೆ ಮಾಡಿರುವ ಮಹಿಳೆಯರು, ಮಹಿಳಾ ಪರವಾಗಿ ಕೆಲಸ ಮಾಡಿರುವ ಸ್ವಯಂ ಸೇವಾ ಸಂಸ್ಥೆಗಳು ಮಕ್ಕಳಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಮಹಿಳೆಯರ ಬಗ್ಗೆ ಸೇವೆ ಸಲ್ಲಿಸಿದ 6 ಸಂಸ್ಥೆಗಳು, 8 ವ್ಯಕ್ತಿಗಳು, ಕಲೆ 5, ಸಾಹಿತ್ಯ 3, ಕ್ರೀಡೆ 2, ಶಿಕ್ಷಣ 1, ವೀರಮಹಿಳೆ 1 ಹಾಗೂ 10 ಅತ್ಯುತ್ತಮ ಸ್ತ್ರೀ ಶಕ್ತಿಗುಂಪುಗಳಿಗೆ ಪ್ರಶಸ್ತಿ ನೀಡಲಾಗುವುದು ಎಂದರು.
ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 4 ಸಂಸ್ಥೆ, ನಾಲ್ವರು ವ್ಯಕ್ತಿಗಳು ಹಾಗೂ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ 3 ಮಕ್ಕಳಿಗೆ ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿ ಮತ್ತು 2 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ನೀಡಿ ಗೌರವಿಸಲಾಗುವುದು. ಈ ಎಲ್ಲ ಪ್ರಶಸ್ತಿಗಳಿಗೆ 10 ಸಾವಿರದಿಂದ 1 ಲಕ್ಷದವರೆಗೆ ನಗದು ಬಹುಮಾನ ನೀಡಲಾಗುತ್ತಿದೆ ಎಂದರು.
ಇದನ್ನೂ ಓದಿ :ನಕಲಿ ಸಿಡಿ ಕಾರ್ಯಾಚರಣೆ ಹಿಂದೆ ದೊಡ್ಡದೊಡ್ಡ ಕೈಗಳಿದೆ ; ವಿಜಯೇಂದ್ರ
ವಿಶೇಷ ಪ್ರಶಸ್ತಿ:
ಈ ಪ್ರಶಸ್ತಿ ಹೊರತುಪಡಿಸಿ ಮಹಿಳಾ ಮತ್ತು ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮೂವರಿಗೆ (ಕೋಲಾರದ ಗೌತಮ್, ಹಾವೇರಿಯ ಶೋಭಾ, ಬೆಳಗಾವಿಯ ಸುಗಂಧಾ) ವಿಶೇಷ ಬಹುಮಾನ ನೀಡಲಾಗುತ್ತಿದೆ ಎಂದರು.
ಉಸ್ತುವಾರಿಗೆ ಸಿದ್ಧ
ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದರಿಂದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸ್ಥಾನ ಖಾಲಿ ಇದೆ. ಜಿಲ್ಲಾ ಉಸ್ತುವಾರಿಯ ಜವಾಬ್ದಾರಿ ವಹಿಸಿದರೆ ನಿಭಾಯಿಸುವ ಸಾಮರ್ಥ್ಯ ಇದೆ ಎಂದು ಶಶಿಕಲಾ ಜೊಲ್ಲೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ