KKR V/s SRH: ಹೈದರಾಬಾದ್‌ಗೆ 5 ರನ್‌ ಸೋಲು


Team Udayavani, May 5, 2023, 6:48 AM IST

SRH

ಹೈದರಾಬಾದ್‌: ಐಡೆನ್‌ ಮಾರ್ಕ್‌ರಮ್‌ ಮತ್ತು ಹೆನ್ರಿಚ್‌ ಕ್ಲಾಸೆನ್‌ ಅವರ ಉತ್ತಮ ಆಟದ ಹೊರತಾಗಿಯೂ ಸನ್‌ರೈಸರ್ ಹೈದರಾಬಾದ್‌ ತಂಡವು ಗುರುವಾರದ ಐಪಿಎಲ್‌ ಪಂದ್ಯದಲ್ಲಿ ಕೋಲ್ಕತಾ ನೈಟ್‌ರೈಡರ್ ತಂಡದೆದುರು 5 ರನ್ನುಗಳಿಂದ ಸೋಲನ್ನು ಕಂಡಿದೆ.

ನಿತೀಶ್‌ ರಾಣಾ ಮತ್ತು ರಿಂಕು ಸಿಂಗ್‌ ಅವರ ಆಕರ್ಷಕ ಆಟದಿಂದಾಗಿ ಕೋಲ್ಕತಾ ನೈಟ್‌ರೈಡರ್ ತಂಡವು 9 ವಿಕೆಟಿಗೆ 171 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಇದಕ್ಕುತ್ತರವಾಗಿ ಹೈದರಾಬಾದ್‌ ತಂಡವು ಕೊನೆ ಹಂತದಲ್ಲಿ ಎಡವಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟಿಗೆ 166 ರನ್‌ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು.
ಹೈದರಾಬಾದ್‌ನ ಆರಂಭ ಉತ್ತಮವಾಗಿರಲಿಲ್ಲ. 54 ರನ್‌ ಗಳಿಸುವಷ್ಟರಲ್ಲಿ ಆರಂಭದ ನಾಲ್ವರು ಆಟಗಾರರು ಔಟಾಗಿ ಆಘಾತಕ್ಕೆ ಒಳಗಾಗಿತ್ತು. ಆಬಳಿಕ ಮಾರ್ಕ್‌ರಮ್‌ ಮತ್ತು ಕ್ಲಾಸೆನ್‌ ಅವರು ಐದನೇ ವಿಕೆಟಿಗೆ 70 ರನ್‌ ಪೇರಿಸಿ ತಂಡವನ್ನು ಆಧರಿಸಿದರಲ್ಲದೇ ತಂಡ ಗೆಲುವು ಸಾಧಿಸುವ ಸಾಧ್ಯತೆಯನ್ನು ಹೆಚ್ಚಿಸಿದರು. ಕ್ಲಾಸೆನ್‌ 20 ಎಸೆತಗಳಿಂದ 36 ರನ್‌ ಗಳಿಸಿದರೆ ಮಾರ್ಕ್‌ರಮ್‌ 41 ರನ್‌ ಹೊಡೆದರು.

ಕ್ಲಾಸೆನ್‌ ಔಟಾದ ಬಳಿಕ ತಂಡದ ರನ್‌ವೇಗಕ್ಕೆ ಕಡಿವಾಣ ಬಿತ್ತು. ಕೊನೆ ಹಂತದಲ್ಲಿ ವರುಣ್‌ ಚಕ್ರವರ್ತಿ, ಶಾದೂìಲ್‌ ಠಾಕೂರ್‌ ವೈಭವ್‌ ಅರೋರ ಬಿಗು ದಾಳಿ ಸಂಘಟಿಸಿದ್ದರಿಂದ ಹೈದರಾಬಾದ್‌ ರನ್‌ ಗಳಿಸಲು ಒದ್ದಾಡಿ ಅಂತಿಮವಾಗಿ 5 ರನ್ನುಗಳಿಂದ ಸೋಲನ್ನು ಕಾಣುವಂತಾಯಿತು.
ಕೆಕೆಆರ್‌ನ ಆರಂಭ ಉತ್ತಮವಾಗಿರಲಿಲ್ಲ. ಮಾರ್ಕೊ ಜಾನ್ಸೆನ್‌ ದಾಳಿಗೆ ಕೆಕೆಆರ್‌ನ ಗುರ್ಬಜ್‌ ಮತ್ತು ವೆಂಕಟೇಶ್‌ ಅಯ್ಯರ್‌ ಬೇಗನೇ ಔಟಾದ ಕಾರಣ ಕೆಕೆಆರ್‌
ಒತ್ತಡಕ್ಕೆ ಬಿತ್ತು.

ಇದರಿಂದಾಗಿ ಪವರ್‌ಪ್ಲೇಯಲ್ಲಿ ಕೆಕೆಆರ್‌ಹೆಚ್ಚಿನ ರನ್‌ ಗಳಿಸಲು ಸಾಧ್ಯವಾಗಲಿಲ್ಲ. 49 ರನ್ನಿಗೆ ಮೂರು ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು. ಈ ಹಂತ
ದಲ್ಲಿ ನಿತೀಶ್‌ ರಾಣಾ ಅವರನ್ನು ಸೇರಿಕೊಂಡ ರಿಂಕು ಸಿಂಗ್‌ ತಂಡವನ್ನು ಆಧರಿಸುವ ಪ್ರಯತ್ನ ಮಾಡಿದರು.

ಹೈದರಾಬಾದ್‌ ದಾಳಿಯನ್ನು ದಿಟ್ಟವಾಗಿ ಎದುರಿಸಿದ ಅವರಿಬ್ಬರು ನಾಲ್ಕನೇ ವಿಕೆಟಿಗೆ 61 ರನ್ನುಗಳ ಜತೆಯಾಟ ನಡೆಸಿದರು. 31 ಎಸೆತಗಳಿಂದ 42 ರನ್‌ ಗಳಿಸಿದ ರಾಣಾ 12ನೇ ಓವರಿನಲ್ಲಿ ಔಟಾದರು. ಮೂರು ಬೌಂಡರಿ ಮತ್ತು ಮೂರು ಸಿಕ್ಸರ್‌ ಬಾರಿಸಿದ್ದರು. ರಿಂಕು ಸಿಂಗ್‌ ಕ್ರೀಸ್‌ನ ಒಂದು ಕಡೆ ಗಟ್ಟಿಯಾಗಿ ನಿಂತರೂ ಇನ್ನೊಂದು ಕಡೆಯಿಂದ ವಿಕೆಟ್‌ಗಳು ಉರುಳುತ್ತಿದ್ದವು. ಸ್ಫೋಟಕ ಖ್ಯಾತಿಯ ಆ್ಯಂಡ್ರೆ ರಸೆಲ್‌, ಸುನೀಲ್‌ ನಾರಾಯಣ್‌ ಈ ಪಂದ್ಯದಲ್ಲೂ ಬ್ಯಾಟಂಗ್‌ ವೈಫ‌ಲ್ಯ ಅನುಭವಿಸಿದರು. ರಸೆಲ್‌ 15 ಎಸೆತಗಳಿಂದ 24 ರನ್‌ ಹೊಡೆದರೆ ನಾರಾಯಣ್‌ ಗಳಿಕೆ 1 ರನ್‌ ಮಾತ್ರ.

ರಿಂಕು ಸಿಂಗ್‌ ಕೊನೆಯ ಓವರಿನಲ್ಲಿ ಔಟಾಗುವಾಗ 46 ರನ್‌ ಗಳಿಸಿದ್ದರು. 35 ಎಸೆತ ಎದುರಿಸಿದ್ದ ಅವರು 4 ಬೌಂಡರಿ ಮತ್ತು 1 ಸಿಕ್ಸರ್‌ ಬಾರಿಸಿದ್ದರು.
ವೇಗಿ ಭುವನೇಶ್ವರ ಕುಮಾರ್‌ ಮತ್ತು ಜಾನ್ಸೆನ್‌ ಆರಂಭದಲ್ಲಿ ಬಿಗು ದಾಳಿ ಸಂಘಟಿಸಿದ್ದರು. ಭುವನೇಶ್ವರ್‌ ಮೊದಲ ಎರಡು ಓವರ್‌ಗಳಲ್ಲಿ ಕೇವಲ 12 ರನ್‌ ಬಿಟ್ಟುಕೊಟ್ಟಿದ್ದರೆ ಜಾನ್ಸೆನ್‌ ಎರಡು ವಿಕೆಟ್‌ ಹಾರಿಸಿದ್ದರು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.