ಚೆನ್ನೈ ವಿರುದ್ಧ ಕೆಕೆಆರ್‌ಗೆ 6 ವಿಕೆಟ್‌ ಗೆಲುವು


Team Udayavani, May 15, 2023, 6:42 AM IST

CHENNAI KKR

ಚೆನ್ನೈ: ನಾಯಕ ನಿತೀಶ್‌ ರಾಣಾ ಮತ್ತು ರಿಂಕು ಸಿಂಗ್‌ ಅವರ ಅಮೋಘ ಆಟದಿಂದಾಗಿ ಕೋಲ್ಕತಾ ನೈಟ್‌ರೈಡರ್ ತಂಡವು ರವಿವಾರದ ಐಪಿಎಲ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದೆ.

ದೀಪಕ್‌ ಚಹರ್‌ ದಾಳಿಗೆ ಆರಂಭದಲ್ಲಿ ಕುಸಿದರೂ ನಿತೀಶ್‌ ಮತ್ತು ರಿಂಕು ಅವರು ನಾಲ್ಕನೇ ವಿಕೆಟಿಗೆ ಸೇರಿಸಿದ 99 ರನ್ನುಗಳ ಜತೆಯಾಟದಿಂದಾಗಿ ಕೆಕೆಆರ್‌ 18.3 ಓವರ್‌ಗಳಲ್ಲಿ 4 ವಿಕೆಟಿಗೆ 147 ರನ್‌ ಗಳಿಸಿ ಜಯ ಸಾಧಿಸಿತು. ಈ ಮೊದಲು ಚೆನ್ನೈ ತಂಡವು ಆರು ವಿಕೆಟಿಗೆ 144 ರನ್‌ ಗಳಿಸಿತ್ತು.
ಈ ಗೆಲುವಿನಿಂದ ಕೆಕೆಆರ್‌ಗೆ ಹೆಚ್ಚಿನ ಲಾಭವಾಗುವ ಸಾಧ್ಯತೆಯಿಲ್ಲ. ಒಟ್ಟಾರೆ 12 ಅಂಕ ಹೊಂದಿರುವ ಕೆಕೆಆರ್‌ 7ನೇ ಸ್ಥಾನದಲ್ಲಿದೆ. ಆದರೆ ದ್ವಿತೀಯ ಸ್ಥಾನದಲ್ಲಿರುವ ಚೆನ್ನೈಗೆ ಈ ಸೋಲಿನಿಂದಾಗಿ ಪ್ಲೇ ಆಫ್ಗೇರುವ ಪ್ರಯತ್ನ ಕಠಿನವಾಗುವ ಸಾಧ್ಯತೆ ಇದೆ.

ಆರಂಭಿಕರಾದ ಜೇಸನ್‌ ರಾಯ್‌, ಗುರ್ಬಜ್‌ ಮತ್ತು ವೆಂಕಟೇಶ್‌ ಅಯ್ಯರ್‌ ಅವರನ್ನು ತಂಡ 33 ರನ್‌ ಗಳಿಸುವಷ್ಟರಲ್ಲಿ ಕಳೆದುಕೊಂಡು ಆಘಾತಕ್ಕೆ ಒಳಗಾಗಿತ್ತು. ಆದರೆ ನಿತೀಶ್‌ ರಾಣಾ ಮತ್ತು ರಿಂಕು ಸಿಂಗ್‌ ಆತ್ಮವಿಶ್ವಾಸದಿಂದ ಆಡಿ ಚೆನ್ನೈ ದಾಳಿಯನ್ನು ಸಮರ್ಥವಾಗಿ ಎದುರಿಸಿದರು. ನಾಲ್ಕನೇ ವಿಕೆಟಿಗೆ 99 ರನ್‌ ಪೇರಿಸಿದ ಅವರು ಗೆಲ್ಲಲು 13 ರನ್‌ ಇರುವಾಗ ಬೇರ್ಪಟ್ಟರು. 43 ಎಸೆತಗಳಿಂದ 54 ರನ್‌ ಹೊಡೆದ ರಿಂಕು ಔಟಾದರೆ ನಿತೀಶ್‌ ರಾಣಾ 44 ಎಸೆತ ಎದುರಿಸಿ 57 ರನ್‌ ಗಳಿಸಿ ಅಜೆಯರಾಗಿ ಉಳಿದರು. 6 ಬೌಂಡರಿ ಮತ್ತು 1 ಸಿಕ್ಸರ್‌ ಬಾರಿಸಿದ್ದರು.

ಪ್ಲೇ ಆಫ್ಗೇರಲು ಚೆನ್ನೈಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿತ್ತು. ಆದರೆ ಬ್ಯಾಟಿಂಗಿಗೆ ಕಠಿನವಾಗಿರುವ ಪಿಚ್‌ನಲ್ಲಿ ಚೆನ್ನೈ ಆಟಗಾರರು ಉತ್ತಮ ನಿರ್ವಹಣೆ ನೀಡಲು ಬಹಳಷ್ಟು ಒದ್ದಾಡಿದರು. ಮೊದಲ 11 ಓವರ್‌ ಮುಗಿದಾಗ ತಂಡ 72 ರನ್‌ ಗಳಿಸಿದ್ದು 5 ವಿಕೆಟ್‌ ಉರುಳಿದ್ದವು. ಆಬಳಿಕ ಶಿವಂ ದುಬೆ ಅವರ ಜವಾಬ್ದಾರಿಯ ಆಟದಿಂದಾಗಿ ತಂಡ ಸಾಧಾರಣ ಮೊತ್ತ ಪೇರಿಸಲು ಯಶಸ್ವಿಯಾಯಿತು.

ಕೆಕೆಆರ್‌ ದಾಳಿಯನ್ನು ಸಮರ್ಥವಾಗಿ ನಿಭಾಯಿಸಿದ ದುಬೆ ಮತ್ತು ರವೀಂದ್ರ ಜಡೇಜ ಅವರು ಆರನೇ ವಿಕೆಟಿಗೆ 68 ರನ್ನುಗಳ ಜತೆಯಾಟ ನಡೆಸಿದರು. ಇದರಿಂದ ತಂಡದ ಮೊತ್ತ 150 ಗಡಿ ಹತ್ತಿರ ಬರುವಂತಾಯಿತು. ಜಡೇಜ 24 ಎಸೆತಗಳಿಂದ 20 ರನ್‌ ಗಳಿಸಿದರೆ ದುಬೆ 34 ಎಸೆತಗಳಿಂದ 48 ರನ್‌ ಗಳಿಸಿ ಅಜೇಯರಾಗಿ ಉಳಿದರು. ಒಂದು ಬೌಂಡರಿ ಮತ್ತು 3 ಸಿಕ್ಸರ್‌ ಬಾರಿಸಿದರು.

ಕೆಕೆಆರ್‌ನ ಸ್ಪಿನ್‌ ಬೌಲರ್‌ಗಳು ನಿಖರ ದಾಳಿ ಸಂಘಟಿಸಿದ್ದರು. ಇದರಿಂದ ಚೆನ್ನೈಯ ರನ್‌ವೇಗಕ್ಕೆ ಕಡಿವಾಣ ಬಿತ್ತು. ಸುನಿಲ್‌ ನಾರಾಯಣ್‌ ತನ್ನ 4 ಓವರ್‌ಗಳ ದಾಳಿಯಲ್ಲಿ ಕೇವಲ 15 ರನ್‌ ನೀಡಿ 2 ವಿಕೆಟ್‌ ಹಾರಿಸಿದ್ದರೆ ಶಾದೂìಲ್‌ ಠಾಕೂರ್‌ 15 ರನ್ನಿಗೆ 1 ವಿಕೆಟ್‌ ಪಡೆದರು. ವರುಣ್‌ ಚಕ್ರವರ್ತಿ 36 ರನ್ನಿಗೆ 2 ವಿಕೆಟ್‌ ಕಿತ್ತರೆ ವೈಭವ್‌ ಅರೋರ 30 ರನ್ನಿಗೆ 1 ವಿಕೆಟ್‌ ಪಡೆದರು.

 

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.