ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಸರಳ ಕೊಡಿಹಬ್ಬ ಆಚರಣೆ : ವೈಭವದ ಉತ್ಸವಕ್ಕೆ ಕಡಿವಾಣ


Team Udayavani, Nov 30, 2020, 5:56 PM IST

ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಸರಳ ಕೊಡಿಹಬ್ಬ ಆಚರಣೆ : ವೈಭವದ ಉತ್ಸವಕ್ಕೆ ಕಡಿವಾಣ

ಕೋಟೇಶ್ವರ: ನೆರೆದ ಭಕ್ತರ ಸಮ್ಮುಖದಲ್ಲಿ ಇಲ್ಲಿನ ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ನ. 30 ರಂದು ಸರಳ ಕೊಡಿಹಬ್ಬ ಆಚರಣೆ ನಡೆಯಿತು.

ದೇಗುಲದ ಗರ್ಭಗುಡಿಯ ಒಳಪೌಳಿಯಲ್ಲಿ ಪ್ರಧಾನ ಅರ್ಚಕ ಪ್ರಸನ್ನ ಕುಮಾರ ಐತಾಳ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ಸಂಪ್ರದಾಯ ಬದ್ಧವಾಗಿ ನಡೆಯಿತು. ಉತ್ಸವ ಮೂರ್ತಿಯನ್ನು ಹೊತ್ತು ಹೊರಪೌಳಿಯಲ್ಲಿ ಪ್ರದಕ್ಷಿಣೆಯ ಅನಂತರ ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜೆ ನಡೆಯಿತು. ಸಂಕಲ್ಪದಲ್ಲಿ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಬಿ. ಎಸ., ಮಾಜಿ ಧರ್ಮದರ್ಶಿಗಳಾದ ಗೋಪಾಲ ಕೃಷ್ಣ ಶೆಟ್ಟಿ, ಪ್ರಭಾಕರ ಶೆಟ್ಟಿ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣದೇವ ಕಾರಂತ ಕೋಣಿ, ಮಾಜಿ ಸದ್ಯಸರು, ಊರ ಪ್ರಮುಖರು ಉಪಸ್ಥಿತರಿದ್ದರು.

ಉತ್ಸವ ತೇರು ಎಳೆಯಲು ಸ್ವಯಂಸೇವಕರಿಗೆ ಮಾತ್ರ ಅವಕಾಶ
ಕೋವಿಡ್‌ -19ರ ನಿಯಮಾನುಸಾರ ನಿಗದಿತ ಮಂದಿಗೆ ಮಾತ್ರ ರಥ ಎಳೆಯಲು ಅವಕಾಶ ಕಲ್ಪಿಸಲಾಗಿತ್ತು. ಭಕ್ತರನ್ನು ಸರತಿಯಲ್ಲಿ ನಿಂತು ದೇವರ ದರ್ಶನ ಮಾಡುವಂತೆ ಸೂಚಿಸಲಾಗಿತ್ತು. ಜನ ಜಂಗುಳಿಯಾಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿತ್ತು.

ಪಾನಕ ವಿತರಣೆ
ಆಗಮಿಸಿದ ಭಕ್ತರ ದಣಿವಾರಿಸಲು ದೇಗುಲದಲ್ಲಿ ಪಾನಕ ವಿತರಿಸಲಾಯಿತು. ಸಮಾಜ ಸೇವಕಿ ಪದ್ಮಮ್ಮ ಪಾನಕ ವಿತರಿಸುವಲ್ಲಿ ಹೆಚ್ಚಿನ ಕಾಳಜಿ ವಹಿಸಿದ್ದರು.

ದೇವರಿಗೆ ಹಣ್ಣು ಕಾಯಿ ನೀಡಲು ಅವಕಾಶ
ಆಗಮಿಸಿದ್ದ ಭಕ್ತರು ಶ್ರೀ ದೇವರಿಗೆ ಹಣ್ಣು ಕಾಯಿ ಸೇವೆ ಸಲ್ಲಿಸಲು ಅವಕಾಶ ಒದಗಿಸಲಾಗಿತ್ತು. ಆದರೆ ರಥೋತ್ಸವದ ಅನಂತರ ರಥದ ಬಳಿ ಹಣ್ಣು ಕಾಯಿ ಸೇವೆ ಗೆ ನಿರ್ಬಂಧ ಹೇರಲಾಗಿತ್ತು.

ಕಬ್ಬಿನ ವ್ಯಾಪಾರಿಗಳಿಗೆ ನಿರಾಶೆ
ಸಾಮಾನ್ಯವಾಗಿ ಕೊಡಿ ಹಬ್ಬದಂದು ದೇವರ ದರ್ಶನದ ಅನಂತರ ಮದುಮಕ್ಕಳು ಸಹಿತ ಭಕ್ತರು ಕಬ್ಬಿನ ಕೋಡಿಯೊಂದಿಗೆ ಮನೆಗೆ ಸಾಗುವ ಪದ್ಧತಿ ಇದೆ. ಆದರೆ ಈ ಬಾರಿ ಕೋವಿಡ್‌ -19 ರ ನಿಯಮಾನುಸಾರ ಕಬ್ಬು ಮಾರಾಟವನ್ನು ಪೇಟೆಯ ಹೊರಗಡೆ ನಿಗದಿತ ಸ್ಥಳದಲ್ಲಿ ಮಾತ್ರ ಏರ್ಪಾಡು ಮಾಡಿರುವುದು ಕಬ್ಬು ವ್ಯಾಪಾರಿಗಳು ಸಹಿತ ಭಕ್ತರಿಗೆ ಕಿರಿಕಿರಿ ಉಂಟು ಮಾಡಿದೆ.
ಕೋಟಿ ತೀರ್ಥ ಪುಷ್ಕರಣಿಯ ಸುತ್ತ ತೆರಳಿ ತೀರ್ಥ ಸ್ನಾನ ಸಂಪ್ರೋಕ್ಷಣೆಗೆ ಭಕ್ತರಿಗೆ ನಿರ್ಬಂಧ ಹೇರಿರುವುದರಿಂದ ಭಕ್ತರು ಹಿಂತಿರುಗಬೇಕಾಯಿತು.

ಅನ್ನ ಪ್ರಸಾದವಿಲ್ಲ
ಭಕ್ತರಿಗೆ ಮಧ್ಯಾಹ್ನ ಒದಗಿಸಲಾಗುವ ಅನ್ನಸಂತರ್ಪಣೆಗೆ ಅವಕಾಶವಿಲ್ಲವಿರುವದರಿಂದ ಅನೇಕರಿಗೆ ನಿರಾಶೆಯಾಯಿತು.

ಗರುಡ ಪ್ರದಕ್ಷಿಣೆ
ಎಂದಿನಂತೆ ಈ ಬರಿ ಕೊಡಿಹಬ್ಬದ ತೇರು ಎಳೆಯುವ ಸಂಧರ್ಭದಲ್ಲಿ ರಥಕ್ಕೆ ಗರುಡ ಪ್ರದಕ್ಷಿಣೆ ಮಾಡಿದ ಸಂದರ್ಭದಲ್ಲಿ ಭಕ್ತರು ಹರ ಹರ ಮಹಾದೇವ ಎಂಬ ಉಧೊ^àಷದೊಡನೆ ಭಾವ ಪರವಶರಾದರು.

ವಿರಳವಾದ ಭಕ್ತರು
ಕೋವಿಡ್‌ -19 ರ ಕಾನೂನು ಹಾಗು ನಿರ್ಬಂಧ ಭಕ್ತರ ಮೇಲೆ ಪರಿಣಾಮ ಬೀರಿದ್ದು ಈ ಬಾರಿ ಭಕ್ತರ ಸಂಖ್ಯೆ ಕಡಿಮೆಯಾಗಿತ್ತು. ಸಾಮಾನ್ಯವಾಗಿ 60 ,000ದ‌ಷ್ಟು ಭಕ್ತರು ಕೊಡಿಹಬ್ಬ ವೀಕ್ಷಿಸಲು ಆಗಮಿಸುತ್ತಿದ್ದರು. ಆದರೆ ಕೊರೊನಾ ವೈರಸ್‌ ಬಾಧೆಯಿಂದಾಗಿ ಸರಕಾರದ ನಿಯಮಾನುಸಾರ ಹೇರಿರುವ ಕಟ್ಟುನಿಟ್ಟಾದ ಕಾನೂನು ಕ್ರಮದಿಂದ ನಿರೀಕ್ಷೆಯಷ್ಟು ಭಕ್ತರು ಕಂಡು ಬಂದಿಲ್ಲ. ತಾತ್ಕಾಲಿಕ ಅಂಗಡಿಗಳಿಲ್ಲದೆ ಹಬ್ಬದ ವಾತಾವರಣದ ಮೇಲೆ ಪರಿಣಾಮ ಬೀರಿತ್ತು. ಎಲ್ಲೆಡೆ ಬಿಗು ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಚಿತ್ರ: ಸೌಂದರ್ಯ ಸ್ಟುಡಿಯೋ ಕೋಟೇಶ್ವರ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.