ಕೋಡಿಹಳ್ಳಿ ಚಂದ್ರಶೇಖರ್ ಒಬ್ಬ ಒಳ್ಳೆ ವ್ಯಕ್ತಿಯೆಂದು ಅಂದುಕೊಂಡಿದ್ದು ತಪ್ಪಾಯಿತು; ವಿ ಸೋಮಣ್ಣ
Team Udayavani, Dec 13, 2020, 9:19 PM IST
ಮಂಗಳೂರು : ಕೋಡಿಹಳ್ಳಿ ಚಂದ್ರಶೇಖರ್ ಒಬ್ಬ ಒಳ್ಳೆಯ ಮನುಷ್ಯ ಅಂತಾ ಅಂದುಕೊಂಡಿದ್ವಿ ಆದರೆ ಆದರೆ ಅತೀಯಾದ ಪ್ರೀತಿಯೇ ವಿಷ ಆಯ್ತು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು ರಾಜ್ಯದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರವು ಕಾರ್ಮಿಕ ಸಂಘಟನೆಗಳು ನಡೆಸುತ್ತಿಲ್ಲ ಬದಲಾಗಿ ಕೇವಲ ಒಬ್ಬ ವ್ಯಕ್ತಿಯಿಂದ ಈ ಗೊಂದಲ ಉಂಟಾಗಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಿಡಿಕಾರಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್ ಒಳ್ಳೆಯ ಮನುಷ್ಯ ಅಂತಾ ಅಂದುಕೊಂಡಿದ್ವಿ ಆದರೆ ಅತೀಯಾದ ಪ್ರೀತಿಯೇ ವಿಷ ಆಯ್ತು ಅಲ್ಲದೆ ಸಿಎಂ ಯಡಿಯೂರಪ್ಪ ಗೆ ಕೋಡಿಹಳ್ಳಿ ಮೇಲೆ ಪ್ರೀತಿ ಇತ್ತು ಆದರೆ ಕೋಡಿಹಳ್ಳಿ ಈ ತರಹ ಅಂತಾ ಅಂದುಕೊಂಡಿರಲಿಲ್ಲ ಎಂದಿದ್ದಾರೆ.
ಇದನ್ನೂ ಓದಿ:ಸರಕಾರಿ ಗೌರವದೊಂದಿಗೆ ಗೋವಿಂದಾಚಾರ್ಯರಿಗೆ ನಮನ
ಕೋಡಿಹಳ್ಳಿ ಚಂದ್ರಶೇಖರಿಗೆ ಮಂಜುನಾಥ ಸ್ವಾಮಿ ಜ್ಞಾನ ನೀಡಲಿ, ರಾಜ್ಯದ ಜನ ತುಂಬಾ ತೊಂದರೆಗೊಳಗಾಗಿದ್ದಾರೆ, ಸಿಎಂ ಯಡಿಯೂರಪ್ಪ ಜನರಲ್ಲಿ ವಿಷಾದವನ್ನು ವ್ಯಕ್ತಪಡಿಸಿದ್ದಾರೆ ಅಲ್ಲದೆ ರಾಜ್ಯದ ಜನರಲ್ಲಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ