ಕೊರಟಗೆರೆ ಕುರುಬರ ನಡೆ ಡಾ.ಜಿ.ಪರಮೇಶ್ವರ್ ಕಡೆ; ಜಾಗೃತಿ ಸಮಾವೇಶ

ಪರಮೇಶ್ವರ್ ರವರ ಸೋಲಿಗೆ ಕುರುಬ ಸಮುದಾಯ ಕಾರಣ ಎಂಬ ಕಳಂಕ ಹೋಗಲಾಡಿಸಿ...!

Team Udayavani, Mar 27, 2023, 6:19 PM IST

1-wer3rrewrewr

ಕೊರಟಗೆರೆ: ರಾಜ್ಯದಲ್ಲಿ ಭ್ರಷ್ಟಾಚಾರದೊಂದಿಗೆ ದುರಾಡಳಿತ ನಡೆಸುತ್ತಿರುವ ಹಾಗೂ ಪ್ರಜಾಪ್ರಭುತ್ವದಲ್ಲಿ ವಾಕ್ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿರುವ ಬಿಜೆಪಿ ಪಕ್ಷದ ಸರ್ಕಾರವನ್ನು 2023 ರ ಚುನಾವಣೆ ಕಿತ್ತೋಗಿಯುವ ಸಂಕಲ್ಪದ ವಿಷೇಶ ಚುನಾವಣೆಯಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.

ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕುರುಬ ಸಮಾಜ ಹಮ್ಮಿಕೊಂಡಿದ್ದ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಕುರುಬರ ಜಾಗೃತಿ ಸಮಾವೇಶ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ-2022-23 ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಜಾತಿ ವ್ಯವಸ್ಥೆಯ ಹೋರಾಟದಲ್ಲಿ ಬಸವಣ್ಣ ನವರು ಮೊದಲಿಗರಾಗಿದ್ದು ಎರಡನೇ ವ್ಯಕ್ತಿ ಕನಕದಾಸರಾಗಿದ್ದಾರೆ, ಕನಕದಾಸರು ಇತಿಹಾಸದಲ್ಲಿ ಅಜೇಯರಾಗಿ ಕುರುಬ ಸಮಾಜಕ್ಕೆ ಸೀಮಿತವಾಗದೆ ಎಲ್ಲಾ ಮನು ಕುಲದ ಅಭಿವೃದ್ದಿಗೆ ಜನಿಸಿದ ವ್ಯಕ್ತಿಯಾದರೆ ಮತ್ತೊಬ್ಬ ಕುರುಬ ಸಮುದಾಯದ ಸಂಗೋಳ್ಳಿ ರಾಯಣ್ಣ, ಕಿತ್ತೂರು ರಾಣಿ ಚನ್ನಮ್ಮರೊಡನೆ ಸ್ವಾತಂತ್ರಕ್ಕಾಗಿ ಹೋರಾಟವನ್ನು ಪ್ರಪ್ರಥಮವಾಗಿ ಪ್ರಾರಂಭಿಸಿದ ವ್ಯಕ್ತಿಯಾಗಿದ್ದು ಕುರುಬ ಸಮುದಾಯ ದೇಶದಲ್ಲಿ ಹಾಲಿನಂತ ಮನಸ್ಸಿರುವ ಹಾಲು ಮತಸ್ಥರು ಎಂದು ಇತಿಹಾಸದಲ್ಲಿ ಬರೆದಿದೆ ಎಂದರು.

ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ೮ ವರ್ಷ ಒಟ್ಟಿಗೆ ಸೌಹಾರ್ಧತೆಯಿಂದ ಕೆಲಸ ಮಾಡಿದ್ದೇನೆ ನನ್ನ ಮತ್ತು ಸಿದ್ದರಾಮಯ್ಯನವರ ಸ್ನೇಹ ಬಹಳ ಉತ್ತಮವಾದ ಸ್ನೇಹ ವಾಗಿದೆ. ನಾವಿಬ್ಬರು ವಿರೋಧಿಗಳು ಎಂಬ ಸುಳ್ಳು ಸುದ್ದಿಯನ್ನು ವಿರೋಧ ಪಕ್ಷದವರು ಸೃಷ್ಟಿಸುತ್ತಿರುವ ಗೊಂದಲವಾಗಿದೆ, ಸಿದ್ದರಾಮಯ್ಯನವರು ರಾಜ್ಯದಲ್ಲಿ ಅಧಿಕಾರ ಸ್ವೀಕರಿಸಿದ ಕೇವಲ ಅರ್ಧ ಗಂಟೆಯಲ್ಲಿ ರಾಜ್ಯದ ಗ್ರಾಮೀಣ ಜನತೆಗೆ ಅನ್ನಭಾಗ್ಯ ಯೋಜನೆ ಅದೇಶ ಮಾಡಿ ಉಚಿತ ಅಕ್ಕಿ ವಿತರಣೆ ಮಾಡಿದ ವ್ಯಕ್ತಿಯಾಗಿದ್ದು ಮತ್ತೆ 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲಿ ಅನ್ನಭಾಗ್ಯ ಯೋಜನೆ ಯಲ್ಲಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು. ಹಾಗೂ ಇದರೊಂದಿಗೆ ಪ್ರತಿ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಗಳು, ಪ್ರತಿ ಮನೆಗೆ ೨೦೦ ಯೂನಿಟ್ ವಿದ್ಯುತ್ ಉಚಿತ ಹಾಗೂ ನಿರುದ್ಯೋಗಿ ಪದವಿಧರರಿಗೆ ಪ್ರತಿ ತಿಂಗಳು ೩ ಸಾವಿರ ರೂಗಳು, ಡಿಪ್ಲೊಮ ಪದವಿಧರರಿಗೆ 1500 ನಿರುದ್ಯೋಗಿ ಭತ್ಯೆ ನೀಡಲಾಗುವುದು ಎಂದರು.

ರಾಹುಲ್‌ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ತೆಗೆಯುವ ಮೂಲಕ ಸಂವಿಧಾನದಲ್ಲಿನ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ. ಇಂತ ಸರ್ಕಾರವನ್ನು ಕಿತ್ತೋಗೆಯಲು ಹಾಗೂ ಹಕ್ಕು ರಕ್ಷಣೆಗಾಗಿ ಪ್ರತಿಯೊಬ್ಬರೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕೈ ಜೋಡಿಸಿ ಎಂದು ಮನವಿ ಮಾಡಿದರು.

ಕಳೆದ 5 ವರ್ಷಗಳಲ್ಲಿ ಕೊರಟಗೆರೆ ಕ್ಷೇತ್ರದ ಅಭಿವೃದ್ದಿಗೆ 2500 ಕೋಟಿ ಹಣ ತಂದಿದ್ದು ರಾಜ್ಯದಲ್ಲಿ ಕೊರಟಗೆರೆ ಕ್ಷೇತ್ರವನ್ನು ಮಾದರಿ ಕ್ಷೇತ್ರಮಾಡುವ ಕನಸು ನನ್ನದಾಗಿದ್ದು 2023 ರ ವಿಧಾನ ಸಭಾ ಚುನಾವಣೆಯಲ್ಲಿ ನನಗೆ ಮತ್ತೆ ಆಶ್ರೀರ್ವಾದ ಮಾಡುವ ಮೂಲಕ ಸಿದ್ದರಾಮಯ್ಯರೊಂದಿಗೆ ನಾನು ಕೈ ಜೋಡಿಸಲು ಅವಕಾಶ ಮಾಡಿಕೊಡುವ ಮೂಲಕ ಕ್ಷೇತ್ರ ಅಭಿವೃದ್ದಿಗೆ ಸಹಕರಿಸುವಂತೆ ಮನವಿ ಮಾಡಿ, ತಾಲೂಕಿನಲ್ಲಿ ಅಪೂರ್ಣಗೊಂಡ ಸಮುದಾಯ ಭವನ ಪೂರ್ಣಗೊಳಿಸುವ ಜವಾಬ್ದಾರಿ ನನ್ನದು ಎಂದು ಭರವಸೆ ನೀಡಿದರು.

ಕೆಪಿಸಿಸಿ ಕಾರ್ಯದರ್ಶಿ ಹಾಗೂ ಯುವನಾಯಕ ವಿಕೇತ್ ರಾಜ್ ಮೌರ್ಯ ಮಾತನಾಡಿ, ರಾಜ್ಯದಲ್ಲಿ ಕಳೆದ ೨೦೧೩ ರಲ್ಲಿ ಸಿದ್ದರಾಮಯ್ಯನವರು 5 ವರ್ಷಗಳ ಕಾಲ ಸದೃಢ ಸರ್ಕಾರ ನಡೆಸಲು ಮುಖ್ಯ ಕಾರಣಿಕರ್ತರಾದ ಡಾ.ಜಿ.ಪರಮೇಶ್ವರ ರವರನ್ನು ನಾವು ಕುರುಬ ಸಮುದಾಯ ಅಭಿನಂದಿಸಬೇಕು ಮುಂದಿನ 2023 ರ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡುವುದು ಖಚಿತವಾಗಿದ್ದು ಸರ್ಕಾರದಲ್ಲಿ ಡಾ.ಜಿ.ಪರಮೇಶ್ವರ ಉನ್ನತ ಸ್ಥಾನ ಪಡೆಯುವುದು ಖಚಿತವಾಗಿದೆ. ಕೊರಟಗೆರೆ ಅಭಿವೃಧ್ದಿಯಲ್ಲಿ ರಾಜ್ಯದಲ್ಲಿಯೇ ಕೊರಟಗೆರೆ ಮಾದರಿ ಕ್ಷೇತ್ರವಾಗುವುದರಲ್ಲಿ ಅನುಮಾನವಿಲ್ಲ.2012  ರಲ್ಲಿ ಡಾ.ಜಿ.ಪರಮೇಶ್ವರ ರವರ ಸೋಲಿಗೆ ಕುರುಬ ಸಮುದಾಯ ಕಾರಣ ಎಂಬ ಕಳಂಕವಿದ್ದು ಅದನ್ನು ಹೋಗಲಾಡಿಸಲು 2023 ರಲ್ಲಿ ಡಾ.ಜಿ.ಪರಮೇಶ್ವರ ರವರನ್ನು ಅಭೂತ ಪೂರ್ವವಾಗಿ ಗೆಲ್ಲಿಸಬೇಕು ಎಂದರು

ವಿರೋಧ ಪಕ್ಷದವರು ತಮ್ಮ ಭಾಷಣಗಳಲ್ಲಿ ಒಂದೊಂದು ಕಡೆ ಒಂದೊಂದು ರೀತಿ ಭಾಷಣ ಮಾಡುತ್ತಾರೆ ಒಂದು ಕಡೆ ಭಾಷಣದಲ್ಲಿ ಡಾ.ಜಿ.ಪರಮೇಶ್ವರ ಸೋಲಿಗೆ ಸಿದ್ದರಾಮಯ್ಯ ಕಾರಣ ಎಂದು ಮತ್ತೊಂದು ಕಡೆ ಭಾಷಣದಲ್ಲಿ ಸಿದ್ದರಾಮಯ್ಯನವರಿಗೂ ಮತ್ತು ಡಾ.ಜಿ.ಪರಮೇಶ್ವರ ರಿಗೂ ಆಗುವುದಿಲ್ಲ ಎಂದು ಎತ್ತಿಕಟ್ಟುತ್ತಿದ್ದಾರೆ ಅದನ್ನು ಯಾರು ಪರಿಗಣಿಸಬಾರದು ಎಂದ ಅವರು ಈ ಬಾರಿ ಚುನಾವಣೆಯಲ್ಲಿ ಕುರುಬರ ನಡೆ ಪರಮೇಶ್ವರ್ ಕಡೆ ಎಂದು ಸಭೆಯಲ್ಲಿ ಎಲ್ಲರೂ ಎರಡೂ ಕೈಗಳನ್ನು ಎತ್ತುವ ಮೂಲಕ ತಮ್ಮ ಬೆಂಬಲ ವಕ್ತ ಪಡಿಸಿದರು.

ಕುರುಬರ ನಡೆ ಡಾ.ಜಿ.ಪರಮೇಶ್ವರ್ ಕಡೆ

2013 ರಲ್ಲಿ ಡಾ.ಜಿ.ಪರಮೇಶ್ವರ ರವರ ಸೋಲಿಗೆ ಕುರುಬ ಸಮುದಾಯ ಕಾರಣ ಎಂಬ ಕಂಳಂಕವಿದ್ದು ಅದನ್ನು ಹೋಗಲಾಡಿಸಲು 2023 ರಲ್ಲಿ ಡಾ.ಜಿ.ಪರಮೇಶ್ವರ ರವರನ್ನು ಅಭೂತ ಪೂರ್ವವಾಗಿ ಕುರುಬ ಸಮಾಜ ಬೆಂಬಲಿಸುವ ಮೂಲಕ ಕಳಂಕವನ್ನು ಹೋಗಲಾಡಿಸಬೇಕಿದೆ ಈ ಬಾರಿ ಚುನಾವಣೆಯಲ್ಲಿ ಕುರುಬರ ನಡೆ ಪರಮೇಶ್ವರ ಕಡೆ ಎಂದು ಕುರುಬ ಜಾಗೃತಿ ಸಭೆಯಲ್ಲಿ ಎಲ್ಲರೂ ಎರಡೂ ಕೈಗಳನ್ನು ಎತ್ತುವ ಮೂಲಕ ಡಾ.ಜಿ.ಪರಮೇಶ್ವರ ರವರಿಗೆ ತಮ್ಮ ಬೆಂಬಲ ವಕ್ತ ಪಡಿಸಿದರು.

ಕಾರ್ಯಕ್ರಮದಲ್ಲಿ ಪುರವರ ಮಾಜಿ ಜಿ.ಪಂ.ಸದಸ್ಯ ತಿಮ್ಮಯ್ಯ, ಸುಭಾಷ್ ಪಿಯು ಕಾಲೇಜು ಸಂಸ್ಥಾಪಕ ಗಂಗರಾಜು ಸೇರಿದಂತೆ ಇನ್ನಿತರ ಕುರುಬ ಮುಖಂಡರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಡಾ.ಜಿ.ಪರಮೇಶ್ವರ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು. ವೇದಿಕೆಯಲ್ಲಿ ತಾಲೂಕು ಕುರುಬ ಸಮಾಜದ ಅಧ್ಯಕ್ಷ ಮೈಲಾರಪ್ಪ, ಕಾಳಿದಾಸ ವಿದ್ಯಾವರ್ಧಕ ಸಂಘದ ನಿದೇರ್ಶಕ ಜಿ.ಡಿ.ನಾಗಭೂಷಣ್, ಯುವ ಮುಖಂಡ ಹಾಗೂ ಪತ್ರಕರ್ತ ರಂಗಧಾಮಯ್ಯ, ಕೆ.ಪಿ.ಸಿ.ಸಿ ಸದಸ್ಯ ಎ.ಡಿ.ಬಲರಾಮಯ್ಯ, ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್, ಅರಕೆರೆ ಶಂಕರ್, ಯುವಕಾಂಗ್ರೆಸ್ ಮುಖಂಡ ಗುರುಪ್ರಸಾದ್, ಬಂದ್ರೇಹಳ್ಳಿ ನಾಗರಾಜು, ಮಧುಗಿರಿ ಎಂ.ಜಿ.ಶ್ರೀನಿವಾಸ್, ಮಾಜಿ ಜಿ.ಪಂ.ಸದಸ್ಯ ಪುರವರ ತಿಮ್ಮಯ್ಯ, ಕುರುಬ ಸಮುದಾಯದ ಮುಖಂಡರುಗಳಾದ ನಾರಾಯಣಪ್ಪ, ದೇವರಾಜು, ಪುರವರ ಕರಿಯಣ್ಣ, ಗಂಗರಾಜು, ಕೆಂಪಣ್ಣ, ಈರಮಲ್ಲಣ್ಣ, ಹೆಚ್.ವೀರಣ್ಣ, ನಿವೃತ್ತ ಮುಖ್ಯಶಿಕ್ಷಕ ಕೆ.ಎಂ.ನಾಗಪ್ಪ, ಕೆಂಪರಂಗಪ್ಪ, ಬೈರವ್, ಲಕ್ಷ್ಮೀಪ್ರಸಾದ್, ಉಮಾಶಂಕರ್, ಚಂದ್ರಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1-kabini

Kabini ಹಿನ್ನೀರಲ್ಲಿ 3.5 ಟನ್‌ ತ್ಯಾಜ್ಯ ಸಂಗ್ರಹಿಸಿದ ಅರಣ್ಯ ಸಿಬಂದಿ, ಸ್ವಯಂಸೇವಕರು

1-sadasd

Wrestlers ಪ್ರತಿಭಟನೆ ಜೂನ್ 15 ರವರೆಗೆ ಸ್ಥಗಿತಕ್ಕೆ ಒಪ್ಪಿಗೆ; ಕಾಯುವಂತೆ ಸರ್ಕಾರ ಒತ್ತಾಯ

sunil-kkl

Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ

BJP Symbol

2024 Election; ಬಿಜೆಪಿಯ ಎನ್‌ಡಿಎ ವಿಸ್ತರಣೆ ಅಜೆಂಡಾ ಕಾರ್ಯಗತವಾಗಬಹುದೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುರಸಭೆ ನಾಮಿನಿ ಸದಸ್ಯತ್ವಕ್ಕೆ ಬಿಗ್‌ ಫೈಟ್‌

ಪುರಸಭೆ ನಾಮಿನಿ ಸದಸ್ಯತ್ವಕ್ಕೆ ಬಿಗ್‌ ಫೈಟ್‌

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಮಳೆಹಾನಿ ನಿಯಂತ್ರಣಕ್ಕೆ ಕ್ರಮವಹಿಸಿ

ಮಳೆಹಾನಿ ನಿಯಂತ್ರಣಕ್ಕೆ ಕ್ರಮವಹಿಸಿ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

1-sadsd

Koratagere ಟೋಲ್ ತೆರವಿಗೆ ಗಡುವು ನೀಡಿದ ಸಚಿವ ಕೆ.ಎನ್.ರಾಜಣ್ಣ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-scrain

ಕುಳಗೇರಿ ಕ್ರಾಸ್: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1——–asasdasd

Gangavathi ನಗರಸಭೆ ಸಾಮಾನ್ಯಸಭೆ: ಶಾಸಕ ರೆಡ್ಡಿ ಅವರಿಂದ ಅಧಿಕಾರಿಗಳ ತರಾಟೆ