ಕೋವಿಡ್ ನಿಂದ ಗುಣಮುಖ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಸ್ಪತ್ರೆಯಿಂದ ಬಿಡುಗಡೆ
Team Udayavani, Aug 31, 2020, 5:04 PM IST
ಬೆಂಗಳೂರು : ಕೋವಿಡ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾಗಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು ಆಗಸ್ಟ್ ೨೪ ರಂದು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ಈ ವೇಳೆ ಅವರಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ವೈದ್ಯರ ಸಲಹೆಯ ಮೇರೆಗೆ ರಾಜಾಜಿನಗರದಲ್ಲಿರುವ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು.
ಈ ವೇಳೆ ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆಯನ್ನು ನೀಡಿದ್ದು ಇಂದು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಹಿಂದೆ ಕೆಲವು ಶಾಸಕರು ಹಾಗೂ ಸಂಸದರಲ್ಲೂ ಕೋವಿಡ್ ಸೋಂಕು ದೃಢಪಟ್ಟಿತ್ತು.