ಸಿಲಿಂಡರ್ ಗಳಿಗೆ ಹೂವಿನ ಹಾರ; ಕೈಯಲ್ಲಿ ಘಂಟಾಮಣಿ : ಕಾಂಗ್ರೆಸ್ ಪ್ರತಿಭಟನೆ

ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ

Team Udayavani, Mar 31, 2022, 11:45 AM IST

1-dfdfdsf

ಬೆಂಗಳೂರು: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರ ಸರಕಾರದ ವಿರುದ್ಧ ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಗುರುವಾರ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿ ಗಮನ ಸೆಳೆಯಿತು.

“ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ” ಹೆಸರಿನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಧ್ರುವನಾರಾಯಣ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

ಇದನ್ನೂ ಓದಿ : ಪರಿಷತ್ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ: ಅಂಗೀಕರಿಸಿದ ಸಭಾಪತಿ

ಗ್ಯಾಸ್ ಸಿಲಿಂಡರ್ ಗಳನ್ನು ಸಾಲಾಗಿ ಇರಿಸಿ ಹೂವಿನ ಹಾರಗಳನ್ನು ಹಾಕಲಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಕೈಯಲ್ಲಿ ಘಂಟಾಮಣಿ ಹಿಡಿದು , ತಲೆಯ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಗಮನ ಸೆಳೆದರು.

Koo App

ರಾಜ್ಯದ‌ ಸಮಸ್ತ ನಾಗರಿಕರೇ, ಪಕ್ಷದ ಕಾರ್ಯಕರ್ತರೇ, ಪ್ರತಿ ದಿನ ನಮ್ಮ- ನಿಮ್ಮ ಜೇಬು ಪಿಕ್ ಪಾಕೆಟ್ ಆಗುತ್ತಿದೆ. ಬೆಲೆಗಳು ಗಗನಕ್ಕೇರುತ್ತಿವೆ, ಆದಾಯ ಪಾತಾಳಕ್ಕಿಳಿಯುತ್ತಿದೆ. ಇಂಧನ ಬೆಲೆ ಏರುತ್ತಲೇ ಇದೆ. ಈ ಬೆಲೆ ಏರಿಕೆ ವಿರುದ್ಧದ ತಮ್ಮ ಪ್ರತಿರೋಧವನ್ನು ಪ್ರಧಾನಿಗಳಿಗೆ ತಿಳಿಯುವಂತೆ ಮಾಡಲು ಮನವಿ ಮಾಡುತ್ತೇನೆ. – @dkshivakumar_official , ಕೆಪಿಸಿಸಿ ಅಧ್ಯಕ್ಷರು

ಕರ್ನಾಟಕ ಕಾಂಗ್ರೆಸ್ (@inckarnataka) 30 Mar 2022

ಶಿವಕುಮಾರ್ ಅವರು ಬೆಳಗ್ಗೆ ತಮ್ಮ ಸದಾಶಿವನಗರದ ನಿವಾಸದ ಬಳಿ ಅಡುಗೆ ಅನಿಲದ ಸಿಲಿಂಡರ್ ಗೆ ಹೂಹಾರ ಹಾಕಿ, ಚಪ್ಪಾಳೆ ತಟ್ಟುವ ಮೂಲಕ ಪ್ರತಿಭಟನೆ ಮಾಡಿದರು.

ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್ , ‘ಇಂದು ಮಾರ್ಚ್ 31 ಆರ್ಥಿಕ ವರ್ಷ ಮುಕ್ತಾಯದ ದಿನ. ಹೀಗಾಗಿ ಇಂದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಕಳೆದ 11 ದಿನಗಳಲ್ಲಿ ಕೇಂದ್ರ ಸರ್ಕಾರ 10 ಬಾರಿ ಇಂಧನ ಬೆಲೆ ಏರಿಕೆ ಮಾಡಿದೆ. ದಿನನಿತ್ಯ ಜನರ ಜೇಬು ಪಿಕ್ ಪಾಕೇಟ್ ಆಗುತ್ತಿದೆ ಎಂದರು.

ಎಲ್ಲರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದ ಬಿಜೆಪಿ ಸರ್ಕಾರ, ಬೆಲೆ ಗಗನಕ್ಕೇರಿದೆ. ಆದಾಯ ಪಾತಳಕ್ಕೆ ಹೋಗಿದೆ. ಹೀಗಾಗಿ ನಾವು ಈ ಪ್ರತಿಭಟನೆ ಮಾಡುತ್ತಿದ್ದೇವೆ. ವಾಹನ ಸವಾರರಿಂದ ಹಿಡಿದು, ಗೃಹಿಣಿಯವರೆಗೂ ಎಲ್ಲರೂ ದಿನನಿತ್ಯ ನೋವು ಅನುಭಿಸುತ್ತಿದ್ದಾರೆ. ಈಗಾಗಲೇ ಪೆಟ್ರೋಲ್ ಬೆಲೆ 111 ರೂ. ಮುಟ್ಟಿದೆ. ಇದರ ವಿರುದ್ಧ ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದ್ದು, ನಮ್ಮ ಮನೆಗಳ ಮುಂದೆ ಅಡುಗೆ ಅನಿಲ ಸಿಲಿಂಡರ್, ವಾಹನಗಳಿಗೆ ಹೂವಿನ ಹಾರ ಹಾಕಿ ಪೂಜೆ ಮಾಡಿದ್ದೇವೆ ಎಂದರು.

ರಾಜ್ಯದ ಜನ ದಡ್ಡರಲ್ಲ. ಅವರು ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ. ಅವಕಾಶ ಸಿಕ್ಕಾಗ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಮೂಲಕ ಅವರ ದಿನನಿತ್ಯದ ನೋವನ್ನು ಹೊರಹಾಕಲಿದ್ದಾರೆ ಎಂಬ ನಂಬಿಕೆ ಇದೆ. ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ಪಂಚರಾಜ್ಯ ಚುನಾವಣೆ ನಡೆಯುವಾಗ ತಡೆಯಲಾಗಿದ್ದ ಬೆಲೆ ಏರಿಕೆ, ಫಲಿತಾಂಶ ಬಂದ ನಂತರ ಮತ್ತೆ ಆರಂಭವಾಗಿದೆಯೇ ಎಂಬ ಪ್ರಶ್ನೆಗೆ, ‘ಅವರು ತಡೆ ಹಿಡಿದಿದ್ದರೋ ಇಲ್ಲವೋ, ಜನರಿಗಂತೂ ಪ್ರಾಣ ಹಿಂಡುತ್ತಿದ್ದಾರೆ. ನಮ್ಮ ಹಳ್ಳಿಕಡೆ ಒಂದು ಮಾತಿದೆ. 100 ಚಪ್ಪಲಿ ಏಟು ತಿನ್ನಬಹುದು, ಆದರೆ ದುಡ್ಡಿನ ಏಟು ಮಾತ್ರ ತಡೆಯಲು ಆಗುವುದಿಲ್ಲ. ಅದೇ ರೀತಿ ಈ ಸರ್ಕಾರ ದಿನನಿತ್ಯ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ’ ಎಂದರು.

ಜನರ ಸಮಸ್ಯೆಗಳ ಬದಲು ಭಾವನಾತ್ಮಕ ವಿಚಾರ ಚುನಾವಣೆ ಅಜೆಂಡಾ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ‘ಅವರು ಸಮಾಜ ಒಡೆಯುವವರಾದರೆ, ನಾವು ಸಮಾಜವನ್ನು ಒಂದು ಮಾಡುತ್ತೇವೆ. ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ’ ಎಂದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.